AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಭಾಸ್ ಮಾಸ್ ಕಂಬ್ಯಾಕ್’; ‘ಸಲಾರ್’ ನೋಡಿ ಟ್ವಿಟರ್​ನಲ್ಲಿ ವಿಮರ್ಶೆ ತಿಳಿಸಿದ ಫ್ಯಾನ್ಸ್

ಆ್ಯಕ್ಷನ್ ಪ್ರಿಯರಿಗೆ ಪ್ರಶಾಂತ್ ನೀಲ್ ಅವರು ಎಂದಿಗೂ ನಿರಾಸೆ ಮಾಡಿದವರಲ್ಲ. ‘ಸಲಾರ್’ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇಡಲಾಗಿದೆ. ಪ್ರಭಾಸ್ ಅವರು ಧೂಳೆಬ್ಬಿಸಿದ್ದಾರೆ. ಅವರನ್ನು ನೋಡಿ ಫ್ಯಾನ್ಸ್ ಥಿಯೇಟರ್​ನಲ್ಲಿ ಸಿಳ್ಳೆ, ಚಪ್ಪಾಳೆ ಹೊಡೆಯುತ್ತಾರೆ.

‘ಪ್ರಭಾಸ್ ಮಾಸ್ ಕಂಬ್ಯಾಕ್’; ‘ಸಲಾರ್’ ನೋಡಿ ಟ್ವಿಟರ್​ನಲ್ಲಿ ವಿಮರ್ಶೆ ತಿಳಿಸಿದ ಫ್ಯಾನ್ಸ್
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: Dec 22, 2023 | 11:04 AM

Share

ಪ್ರಶಾಂತ್ ನೀಲ್ (Prashanth Neel) ನಿರ್ದೇಶನದ, ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಇಂದು (ಡಿಸೆಂಬರ್ 22) ರಿಲೀಸ್ ಆಗಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಭರ್ಜರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಈ ನಿರೀಕ್ಷೆಯನ್ನು ಸಿನಿಮಾ ಸುಳ್ಳು ಮಾಡಿಲ್ಲ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇದೆ. ಪ್ರಭಾಸ್ ಅವರು ರಕ್ತದಲ್ಲಿ ಮಿಂದೆದ್ದಿದ್ದಾರೆ. ಪಕ್ಕಾ ಆ್ಯಕ್ಷನ್ ಸಿನಿಮಾ ಮೂಲಕ ದೊಡ್ಡ ಕಂಬ್ಯಾಕ್ ಮಾಡಿದ್ದಾರೆ. ಈ ಸಿನಿಮಾ ನೋಡಿದ ಅನೇಕರು ಟ್ವಿಟರ್ ಮೂಲಕ ವಿಮರ್ಶೆ ತಿಳಿಸಿದ್ದಾರೆ.

ಆ್ಯಕ್ಷನ್ ಪ್ರಿಯರಿಗೆ ಪ್ರಶಾಂತ್ ನೀಲ್ ಅವರು ಎಂದಿಗೂ ನಿರಾಸೆ ಮಾಡಿದವರಲ್ಲ. ‘ಸಲಾರ್’ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇಡಲಾಗಿದೆ. ಪ್ರಭಾಸ್ ಅವರು ಧೂಳೆಬ್ಬಿಸಿದ್ದಾರೆ. ಅವರನ್ನು ನೋಡಿ ಫ್ಯಾನ್ಸ್ ಥಿಯೇಟರ್​ನಲ್ಲಿ ಸಿಳ್ಳೆ, ಚಪ್ಪಾಳೆ ಹೊಡೆಯುತ್ತಾರೆ. ‘ಸಲಾರ್’ ಸಿನಿಮಾನ ಎರಡು ಬಾರಿ ನೋಡಿದ್ದಾಗಿ ಕೆಲವರು ಹೇಳಿದ್ದಾರೆ. ‘ಬಾಹುಬಲಿ ಈಸ್ ಬ್ಯಾಕ್. ಕನ್​ಫ್ಯೂಷನ್ ಬೇಡ, ಕೇವಲ ಗೂಸ್​ಬಂಪ್ಸ್’ ಎಂದಿದ್ದಾರೆ ಪ್ರಭಾಸ್ ಅಭಿಮಾನಿಗಳು.

ಕೆಲವರಿಗೆ ಸಿನಿಮಾ ಇಷ್ಟ ಆಗಿಲ್ಲ. ಕನ್ನಡದ ‘ಉಗ್ರಂ’ ಸಿನಿಮಾದ ರಿಮೇಕ್ ಇದು ಎಂಬುದನ್ನು ತಂಡ ಈ ಮೊದಲು ಒಪ್ಪಿಕೊಂಡಿರಲಿಲ್ಲ. ಸಿನಿಮಾ ನೋಡಿದವರಿಗೆ ‘ಉಗ್ರಂ’ ಸಿನಿಮಾದ ಲೈನ್ ಕಾಣಿಸಿದೆ. ಇದು ಕೆಲವರಿಗೆ ಬೇಸರ ಮೂಡಿಸಿದೆ. ‘ಹೈ ಬಜೆಟ್ ಉಗ್ರಂ’ ಎಂದು ಅನೇಕರು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: ಸಿಂಹಾಸನಕ್ಕೆ ನಡೆಯುವ ಕಿತ್ತಾಟದಲ್ಲಿ ಆ್ಯಕ್ಷನ್​ ವೈಭವ; ಹಳೆಯ ಕಥೆಗೆ ಹೊಸ ಮಸಾಲ

‘ಸಲಾರ್’ ಸಿನಿಮಾಗೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಸಿನಿಮಾ ಉದ್ದಕ್ಕೂ ಪ್ರಭಾಸ್ ಅಬ್ಬರಿಸಿದ್ದಾರೆ. ಪೃಥ್ವಿರಾಜ್​ ಸುಕುಮಾರನ್, ಜಗಪತಿ ಬಾಬು ಮೊದಲಾದವರ ಪಾತ್ರ ಹೈಲೈಟ್ ಆಗಿದೆ. ಕಾರ್ತಿಕ್ ಗೌಡ ಅವರ ಛಾಯಾಗ್ರಹಣ ಗಮನ ಸೆಳೆದಿದೆ. ರವಿ ಬಸ್ರೂರು ಸಂಗೀತ ಸಂಯೋಜನೆಯಲ್ಲಿ ಬದಲಾವಣೆ ಬೇಕು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​