AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಭಾಸ್ ಮಾಸ್ ಕಂಬ್ಯಾಕ್’; ‘ಸಲಾರ್’ ನೋಡಿ ಟ್ವಿಟರ್​ನಲ್ಲಿ ವಿಮರ್ಶೆ ತಿಳಿಸಿದ ಫ್ಯಾನ್ಸ್

ಆ್ಯಕ್ಷನ್ ಪ್ರಿಯರಿಗೆ ಪ್ರಶಾಂತ್ ನೀಲ್ ಅವರು ಎಂದಿಗೂ ನಿರಾಸೆ ಮಾಡಿದವರಲ್ಲ. ‘ಸಲಾರ್’ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇಡಲಾಗಿದೆ. ಪ್ರಭಾಸ್ ಅವರು ಧೂಳೆಬ್ಬಿಸಿದ್ದಾರೆ. ಅವರನ್ನು ನೋಡಿ ಫ್ಯಾನ್ಸ್ ಥಿಯೇಟರ್​ನಲ್ಲಿ ಸಿಳ್ಳೆ, ಚಪ್ಪಾಳೆ ಹೊಡೆಯುತ್ತಾರೆ.

‘ಪ್ರಭಾಸ್ ಮಾಸ್ ಕಂಬ್ಯಾಕ್’; ‘ಸಲಾರ್’ ನೋಡಿ ಟ್ವಿಟರ್​ನಲ್ಲಿ ವಿಮರ್ಶೆ ತಿಳಿಸಿದ ಫ್ಯಾನ್ಸ್
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: Dec 22, 2023 | 11:04 AM

Share

ಪ್ರಶಾಂತ್ ನೀಲ್ (Prashanth Neel) ನಿರ್ದೇಶನದ, ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಇಂದು (ಡಿಸೆಂಬರ್ 22) ರಿಲೀಸ್ ಆಗಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಭರ್ಜರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಈ ನಿರೀಕ್ಷೆಯನ್ನು ಸಿನಿಮಾ ಸುಳ್ಳು ಮಾಡಿಲ್ಲ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇದೆ. ಪ್ರಭಾಸ್ ಅವರು ರಕ್ತದಲ್ಲಿ ಮಿಂದೆದ್ದಿದ್ದಾರೆ. ಪಕ್ಕಾ ಆ್ಯಕ್ಷನ್ ಸಿನಿಮಾ ಮೂಲಕ ದೊಡ್ಡ ಕಂಬ್ಯಾಕ್ ಮಾಡಿದ್ದಾರೆ. ಈ ಸಿನಿಮಾ ನೋಡಿದ ಅನೇಕರು ಟ್ವಿಟರ್ ಮೂಲಕ ವಿಮರ್ಶೆ ತಿಳಿಸಿದ್ದಾರೆ.

ಆ್ಯಕ್ಷನ್ ಪ್ರಿಯರಿಗೆ ಪ್ರಶಾಂತ್ ನೀಲ್ ಅವರು ಎಂದಿಗೂ ನಿರಾಸೆ ಮಾಡಿದವರಲ್ಲ. ‘ಸಲಾರ್’ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇಡಲಾಗಿದೆ. ಪ್ರಭಾಸ್ ಅವರು ಧೂಳೆಬ್ಬಿಸಿದ್ದಾರೆ. ಅವರನ್ನು ನೋಡಿ ಫ್ಯಾನ್ಸ್ ಥಿಯೇಟರ್​ನಲ್ಲಿ ಸಿಳ್ಳೆ, ಚಪ್ಪಾಳೆ ಹೊಡೆಯುತ್ತಾರೆ. ‘ಸಲಾರ್’ ಸಿನಿಮಾನ ಎರಡು ಬಾರಿ ನೋಡಿದ್ದಾಗಿ ಕೆಲವರು ಹೇಳಿದ್ದಾರೆ. ‘ಬಾಹುಬಲಿ ಈಸ್ ಬ್ಯಾಕ್. ಕನ್​ಫ್ಯೂಷನ್ ಬೇಡ, ಕೇವಲ ಗೂಸ್​ಬಂಪ್ಸ್’ ಎಂದಿದ್ದಾರೆ ಪ್ರಭಾಸ್ ಅಭಿಮಾನಿಗಳು.

ಕೆಲವರಿಗೆ ಸಿನಿಮಾ ಇಷ್ಟ ಆಗಿಲ್ಲ. ಕನ್ನಡದ ‘ಉಗ್ರಂ’ ಸಿನಿಮಾದ ರಿಮೇಕ್ ಇದು ಎಂಬುದನ್ನು ತಂಡ ಈ ಮೊದಲು ಒಪ್ಪಿಕೊಂಡಿರಲಿಲ್ಲ. ಸಿನಿಮಾ ನೋಡಿದವರಿಗೆ ‘ಉಗ್ರಂ’ ಸಿನಿಮಾದ ಲೈನ್ ಕಾಣಿಸಿದೆ. ಇದು ಕೆಲವರಿಗೆ ಬೇಸರ ಮೂಡಿಸಿದೆ. ‘ಹೈ ಬಜೆಟ್ ಉಗ್ರಂ’ ಎಂದು ಅನೇಕರು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: ಸಿಂಹಾಸನಕ್ಕೆ ನಡೆಯುವ ಕಿತ್ತಾಟದಲ್ಲಿ ಆ್ಯಕ್ಷನ್​ ವೈಭವ; ಹಳೆಯ ಕಥೆಗೆ ಹೊಸ ಮಸಾಲ

‘ಸಲಾರ್’ ಸಿನಿಮಾಗೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಸಿನಿಮಾ ಉದ್ದಕ್ಕೂ ಪ್ರಭಾಸ್ ಅಬ್ಬರಿಸಿದ್ದಾರೆ. ಪೃಥ್ವಿರಾಜ್​ ಸುಕುಮಾರನ್, ಜಗಪತಿ ಬಾಬು ಮೊದಲಾದವರ ಪಾತ್ರ ಹೈಲೈಟ್ ಆಗಿದೆ. ಕಾರ್ತಿಕ್ ಗೌಡ ಅವರ ಛಾಯಾಗ್ರಹಣ ಗಮನ ಸೆಳೆದಿದೆ. ರವಿ ಬಸ್ರೂರು ಸಂಗೀತ ಸಂಯೋಜನೆಯಲ್ಲಿ ಬದಲಾವಣೆ ಬೇಕು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ