AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಭಾಸ್ ಮಾಸ್ ಕಂಬ್ಯಾಕ್’; ‘ಸಲಾರ್’ ನೋಡಿ ಟ್ವಿಟರ್​ನಲ್ಲಿ ವಿಮರ್ಶೆ ತಿಳಿಸಿದ ಫ್ಯಾನ್ಸ್

ಆ್ಯಕ್ಷನ್ ಪ್ರಿಯರಿಗೆ ಪ್ರಶಾಂತ್ ನೀಲ್ ಅವರು ಎಂದಿಗೂ ನಿರಾಸೆ ಮಾಡಿದವರಲ್ಲ. ‘ಸಲಾರ್’ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇಡಲಾಗಿದೆ. ಪ್ರಭಾಸ್ ಅವರು ಧೂಳೆಬ್ಬಿಸಿದ್ದಾರೆ. ಅವರನ್ನು ನೋಡಿ ಫ್ಯಾನ್ಸ್ ಥಿಯೇಟರ್​ನಲ್ಲಿ ಸಿಳ್ಳೆ, ಚಪ್ಪಾಳೆ ಹೊಡೆಯುತ್ತಾರೆ.

‘ಪ್ರಭಾಸ್ ಮಾಸ್ ಕಂಬ್ಯಾಕ್’; ‘ಸಲಾರ್’ ನೋಡಿ ಟ್ವಿಟರ್​ನಲ್ಲಿ ವಿಮರ್ಶೆ ತಿಳಿಸಿದ ಫ್ಯಾನ್ಸ್
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: Dec 22, 2023 | 11:04 AM

Share

ಪ್ರಶಾಂತ್ ನೀಲ್ (Prashanth Neel) ನಿರ್ದೇಶನದ, ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಇಂದು (ಡಿಸೆಂಬರ್ 22) ರಿಲೀಸ್ ಆಗಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಭರ್ಜರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಈ ನಿರೀಕ್ಷೆಯನ್ನು ಸಿನಿಮಾ ಸುಳ್ಳು ಮಾಡಿಲ್ಲ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇದೆ. ಪ್ರಭಾಸ್ ಅವರು ರಕ್ತದಲ್ಲಿ ಮಿಂದೆದ್ದಿದ್ದಾರೆ. ಪಕ್ಕಾ ಆ್ಯಕ್ಷನ್ ಸಿನಿಮಾ ಮೂಲಕ ದೊಡ್ಡ ಕಂಬ್ಯಾಕ್ ಮಾಡಿದ್ದಾರೆ. ಈ ಸಿನಿಮಾ ನೋಡಿದ ಅನೇಕರು ಟ್ವಿಟರ್ ಮೂಲಕ ವಿಮರ್ಶೆ ತಿಳಿಸಿದ್ದಾರೆ.

ಆ್ಯಕ್ಷನ್ ಪ್ರಿಯರಿಗೆ ಪ್ರಶಾಂತ್ ನೀಲ್ ಅವರು ಎಂದಿಗೂ ನಿರಾಸೆ ಮಾಡಿದವರಲ್ಲ. ‘ಸಲಾರ್’ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇಡಲಾಗಿದೆ. ಪ್ರಭಾಸ್ ಅವರು ಧೂಳೆಬ್ಬಿಸಿದ್ದಾರೆ. ಅವರನ್ನು ನೋಡಿ ಫ್ಯಾನ್ಸ್ ಥಿಯೇಟರ್​ನಲ್ಲಿ ಸಿಳ್ಳೆ, ಚಪ್ಪಾಳೆ ಹೊಡೆಯುತ್ತಾರೆ. ‘ಸಲಾರ್’ ಸಿನಿಮಾನ ಎರಡು ಬಾರಿ ನೋಡಿದ್ದಾಗಿ ಕೆಲವರು ಹೇಳಿದ್ದಾರೆ. ‘ಬಾಹುಬಲಿ ಈಸ್ ಬ್ಯಾಕ್. ಕನ್​ಫ್ಯೂಷನ್ ಬೇಡ, ಕೇವಲ ಗೂಸ್​ಬಂಪ್ಸ್’ ಎಂದಿದ್ದಾರೆ ಪ್ರಭಾಸ್ ಅಭಿಮಾನಿಗಳು.

ಕೆಲವರಿಗೆ ಸಿನಿಮಾ ಇಷ್ಟ ಆಗಿಲ್ಲ. ಕನ್ನಡದ ‘ಉಗ್ರಂ’ ಸಿನಿಮಾದ ರಿಮೇಕ್ ಇದು ಎಂಬುದನ್ನು ತಂಡ ಈ ಮೊದಲು ಒಪ್ಪಿಕೊಂಡಿರಲಿಲ್ಲ. ಸಿನಿಮಾ ನೋಡಿದವರಿಗೆ ‘ಉಗ್ರಂ’ ಸಿನಿಮಾದ ಲೈನ್ ಕಾಣಿಸಿದೆ. ಇದು ಕೆಲವರಿಗೆ ಬೇಸರ ಮೂಡಿಸಿದೆ. ‘ಹೈ ಬಜೆಟ್ ಉಗ್ರಂ’ ಎಂದು ಅನೇಕರು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: ಸಿಂಹಾಸನಕ್ಕೆ ನಡೆಯುವ ಕಿತ್ತಾಟದಲ್ಲಿ ಆ್ಯಕ್ಷನ್​ ವೈಭವ; ಹಳೆಯ ಕಥೆಗೆ ಹೊಸ ಮಸಾಲ

‘ಸಲಾರ್’ ಸಿನಿಮಾಗೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಸಿನಿಮಾ ಉದ್ದಕ್ಕೂ ಪ್ರಭಾಸ್ ಅಬ್ಬರಿಸಿದ್ದಾರೆ. ಪೃಥ್ವಿರಾಜ್​ ಸುಕುಮಾರನ್, ಜಗಪತಿ ಬಾಬು ಮೊದಲಾದವರ ಪಾತ್ರ ಹೈಲೈಟ್ ಆಗಿದೆ. ಕಾರ್ತಿಕ್ ಗೌಡ ಅವರ ಛಾಯಾಗ್ರಹಣ ಗಮನ ಸೆಳೆದಿದೆ. ರವಿ ಬಸ್ರೂರು ಸಂಗೀತ ಸಂಯೋಜನೆಯಲ್ಲಿ ಬದಲಾವಣೆ ಬೇಕು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು