‘ಪ್ರಭಾಸ್ ಮಾಸ್ ಕಂಬ್ಯಾಕ್’; ‘ಸಲಾರ್’ ನೋಡಿ ಟ್ವಿಟರ್​ನಲ್ಲಿ ವಿಮರ್ಶೆ ತಿಳಿಸಿದ ಫ್ಯಾನ್ಸ್

ಆ್ಯಕ್ಷನ್ ಪ್ರಿಯರಿಗೆ ಪ್ರಶಾಂತ್ ನೀಲ್ ಅವರು ಎಂದಿಗೂ ನಿರಾಸೆ ಮಾಡಿದವರಲ್ಲ. ‘ಸಲಾರ್’ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇಡಲಾಗಿದೆ. ಪ್ರಭಾಸ್ ಅವರು ಧೂಳೆಬ್ಬಿಸಿದ್ದಾರೆ. ಅವರನ್ನು ನೋಡಿ ಫ್ಯಾನ್ಸ್ ಥಿಯೇಟರ್​ನಲ್ಲಿ ಸಿಳ್ಳೆ, ಚಪ್ಪಾಳೆ ಹೊಡೆಯುತ್ತಾರೆ.

‘ಪ್ರಭಾಸ್ ಮಾಸ್ ಕಂಬ್ಯಾಕ್’; ‘ಸಲಾರ್’ ನೋಡಿ ಟ್ವಿಟರ್​ನಲ್ಲಿ ವಿಮರ್ಶೆ ತಿಳಿಸಿದ ಫ್ಯಾನ್ಸ್
ಪ್ರಭಾಸ್
Follow us
|

Updated on: Dec 22, 2023 | 11:04 AM

ಪ್ರಶಾಂತ್ ನೀಲ್ (Prashanth Neel) ನಿರ್ದೇಶನದ, ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಇಂದು (ಡಿಸೆಂಬರ್ 22) ರಿಲೀಸ್ ಆಗಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಭರ್ಜರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಈ ನಿರೀಕ್ಷೆಯನ್ನು ಸಿನಿಮಾ ಸುಳ್ಳು ಮಾಡಿಲ್ಲ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇದೆ. ಪ್ರಭಾಸ್ ಅವರು ರಕ್ತದಲ್ಲಿ ಮಿಂದೆದ್ದಿದ್ದಾರೆ. ಪಕ್ಕಾ ಆ್ಯಕ್ಷನ್ ಸಿನಿಮಾ ಮೂಲಕ ದೊಡ್ಡ ಕಂಬ್ಯಾಕ್ ಮಾಡಿದ್ದಾರೆ. ಈ ಸಿನಿಮಾ ನೋಡಿದ ಅನೇಕರು ಟ್ವಿಟರ್ ಮೂಲಕ ವಿಮರ್ಶೆ ತಿಳಿಸಿದ್ದಾರೆ.

ಆ್ಯಕ್ಷನ್ ಪ್ರಿಯರಿಗೆ ಪ್ರಶಾಂತ್ ನೀಲ್ ಅವರು ಎಂದಿಗೂ ನಿರಾಸೆ ಮಾಡಿದವರಲ್ಲ. ‘ಸಲಾರ್’ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇಡಲಾಗಿದೆ. ಪ್ರಭಾಸ್ ಅವರು ಧೂಳೆಬ್ಬಿಸಿದ್ದಾರೆ. ಅವರನ್ನು ನೋಡಿ ಫ್ಯಾನ್ಸ್ ಥಿಯೇಟರ್​ನಲ್ಲಿ ಸಿಳ್ಳೆ, ಚಪ್ಪಾಳೆ ಹೊಡೆಯುತ್ತಾರೆ. ‘ಸಲಾರ್’ ಸಿನಿಮಾನ ಎರಡು ಬಾರಿ ನೋಡಿದ್ದಾಗಿ ಕೆಲವರು ಹೇಳಿದ್ದಾರೆ. ‘ಬಾಹುಬಲಿ ಈಸ್ ಬ್ಯಾಕ್. ಕನ್​ಫ್ಯೂಷನ್ ಬೇಡ, ಕೇವಲ ಗೂಸ್​ಬಂಪ್ಸ್’ ಎಂದಿದ್ದಾರೆ ಪ್ರಭಾಸ್ ಅಭಿಮಾನಿಗಳು.

ಕೆಲವರಿಗೆ ಸಿನಿಮಾ ಇಷ್ಟ ಆಗಿಲ್ಲ. ಕನ್ನಡದ ‘ಉಗ್ರಂ’ ಸಿನಿಮಾದ ರಿಮೇಕ್ ಇದು ಎಂಬುದನ್ನು ತಂಡ ಈ ಮೊದಲು ಒಪ್ಪಿಕೊಂಡಿರಲಿಲ್ಲ. ಸಿನಿಮಾ ನೋಡಿದವರಿಗೆ ‘ಉಗ್ರಂ’ ಸಿನಿಮಾದ ಲೈನ್ ಕಾಣಿಸಿದೆ. ಇದು ಕೆಲವರಿಗೆ ಬೇಸರ ಮೂಡಿಸಿದೆ. ‘ಹೈ ಬಜೆಟ್ ಉಗ್ರಂ’ ಎಂದು ಅನೇಕರು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: ಸಿಂಹಾಸನಕ್ಕೆ ನಡೆಯುವ ಕಿತ್ತಾಟದಲ್ಲಿ ಆ್ಯಕ್ಷನ್​ ವೈಭವ; ಹಳೆಯ ಕಥೆಗೆ ಹೊಸ ಮಸಾಲ

‘ಸಲಾರ್’ ಸಿನಿಮಾಗೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಸಿನಿಮಾ ಉದ್ದಕ್ಕೂ ಪ್ರಭಾಸ್ ಅಬ್ಬರಿಸಿದ್ದಾರೆ. ಪೃಥ್ವಿರಾಜ್​ ಸುಕುಮಾರನ್, ಜಗಪತಿ ಬಾಬು ಮೊದಲಾದವರ ಪಾತ್ರ ಹೈಲೈಟ್ ಆಗಿದೆ. ಕಾರ್ತಿಕ್ ಗೌಡ ಅವರ ಛಾಯಾಗ್ರಹಣ ಗಮನ ಸೆಳೆದಿದೆ. ರವಿ ಬಸ್ರೂರು ಸಂಗೀತ ಸಂಯೋಜನೆಯಲ್ಲಿ ಬದಲಾವಣೆ ಬೇಕು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್