AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ಸಿನಿಮಾ ಹೇಗಿದೆ? ಇಲ್ಲಿದೆ ಟ್ವಿಟರ್ ವಿಮರ್ಶೆ

‘ಟೈಗರ್ 3’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಅನ್ನೋದು ಟ್ರೇಲರ್ ನೋಡಿದ ಅನೇಕರಿಗೆ ಗೊತ್ತಾಗಿತ್ತು. ಸಿನಿಮಾದಲ್ಲೂ ಅದು ಮುಂದುವರಿದಿದೆ. ಅನೇಕರಿಗೆ ಸಿನಿಮಾ ಇಷ್ಟವಾಗಿದೆ. ಇದನ್ನು ಬ್ಲಾಕ್​ಬಸ್ಟರ್ ಎಂದು ಕರೆದಿದ್ದಾರೆ. ಇನ್ನೂ ಕೆಲವರು ಸಿನಿಮಾ ಚೆನ್ನಾಗಿಲ್ಲ ಎಂದಿದ್ದಾರೆ.

ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ಸಿನಿಮಾ ಹೇಗಿದೆ? ಇಲ್ಲಿದೆ ಟ್ವಿಟರ್ ವಿಮರ್ಶೆ
ಸಲ್ಮಾನ್​ ಖಾನ್​
ರಾಜೇಶ್ ದುಗ್ಗುಮನೆ
|

Updated on: Nov 12, 2023 | 9:16 AM

Share

ಸಲ್ಮಾನ್ ಖಾನ್ (Salman Khan) ನಟನೆಯ ‘ಟೈಗರ್ 3’ ಸಿನಿಮಾ ಇಂದು (ನವೆಂಬರ್ 12) ರಿಲೀಸ್ ಆಗಿದೆ. ಸಂಪ್ರದಾಯವನ್ನು ಬಿಟ್ಟು ಯಶ್ ರಾಜ್​ ಫಿಲ್ಮ್ಸ್ ಅವರು ಭಾನುವಾರ ಸಿನಿಮಾ ರಿಲೀಸ್ ಮಾಡಿದ್ದಾರೆ. ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಕತ್ರಿನಾ ಕೈಫ್ ನಾಯಕಿ ಆಗಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಶಾರುಖ್ ಖಾನ್ ಹಾಗೂ ಹೃತಿಕ್ ರೋಷನ್ ಅತಿಥಿ ಪಾತ್ರ ಮಾಡಿದ್ದಾರೆ. ಈ ಸಿನಿಮಾ ನೋಡಿದ ಅನೇಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

‘ಟೈಗರ್ 3’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಅನ್ನೋದು ಟ್ರೇಲರ್ ನೋಡಿದ ಅನೇಕರಿಗೆ ಗೊತ್ತಾಗಿತ್ತು. ಸಿನಿಮಾದಲ್ಲೂ ಅದು ಮುಂದುವರಿದಿದೆ. ಅನೇಕರಿಗೆ ಸಿನಿಮಾ ಇಷ್ಟವಾಗಿದೆ. ಇದನ್ನು ಬ್ಲಾಕ್​ಬಸ್ಟರ್ ಎಂದು ಕರೆದಿದ್ದಾರೆ. ಇನ್ನೂ ಕೆಲವರು ಸಿನಿಮಾ ಚೆನ್ನಾಗಿಲ್ಲ ಎಂದಿದ್ದಾರೆ.

‘ಒಂದೇ ಮಾತಲ್ಲಿ ಹೇಳಬೇಕೆಂದರೆ ಬ್ಲಾಕ್​ಬಸ್ಟರ್​. ‘ಟೈಗರ್ 3’ ದೀಪಾವಳಿ ವಿನ್ನರ್. ನಿರ್ದೇಶಕ ಮನೀಶ್ ಶರ್ಮ ಅವರು ನಮ್ಮನ್ನು ಇಂಪ್ರೆಸ್ ಮಾಡಿದ್ದಾರೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ಇದೇ ಕೊನೆ ಅಲ್ಲ. ಈ ಯೂನಿವರ್ಸ್​​ನಲ್ಲಿ ಇನ್ನೂ ಕೆಲವು ಚಿತ್ರಗಳು ಬರೋದು ಇದೆ. ಆದರೆ, ಏನಿದು ಸಿನಿಮಾ? ಬೋರಿಂಗ್ ಆ್ಯಕ್ಷನ್ ದೃಶ್ಯ, ಕಥೆ ಅಂತೂ ಕೇಳೋದೇ ಬೇಡ’ ಎಂದು ಕೆಲವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಬಿಗ್ ಬಾಸ್’ನಲ್ಲಿ ನಿರೂಪಕ ಸಲ್ಮಾನ್ ಖಾನ್ ಹಾಗೂ ಸ್ಪರ್ಧಿಗಳು ಪಡೆದ ಸಂಭಾವನೆ ಎಷ್ಟು ಕೋಟಿ ರೂಪಾಯಿ?

ಜೂನಿಯರ್ ಎನ್​ಟಿಆರ್ ಅವರು ‘ವಾರ್ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರು ಕೂಡ ‘ಟೈಗರ್ 3’ ಸಿನಿಮಾದಲ್ಲಿ ನಟಿಸಲಿದ್ದರೆ ಎಂದು ಹೇಳಲಾಗಿತ್ತು. ಆದರೆ, ಅವರು ಈ ಚಿತ್ರದಲ್ಲಿ ನಟಿಸಿಲ್ಲ ಎಂದು ಸಿನಿಮಾ ನೋಡಿದವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?