AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ಮಹೇಶ್ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾದ ಮೊದಲಾರ್ಧ? ಇಲ್ಲಿದೆ ಮಾಹಿತಿ

Sarkaru Vaari Paata Movie: ಗೀತ ಗೋವಿಂದಂ’ ನಿರ್ದೇಶಕ ಪರಶುರಾಮ್ ಅವರು ‘ಸರ್ಕಾರು ವಾರಿ ಪಾಟ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಕಾರಣದಿಂದಲೂ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಸಿನಿಮಾದ ಮೊದಲಾರ್ಧ ಹೇಗಿದೆ? ಇಲ್ಲಿದೆ ಮಾಹಿತಿ.

ಹೇಗಿದೆ ಮಹೇಶ್ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾದ ಮೊದಲಾರ್ಧ? ಇಲ್ಲಿದೆ ಮಾಹಿತಿ
ಮಹೇಶ್-ಕೀರ್ತಿ
TV9 Web
| Edited By: |

Updated on: May 12, 2022 | 7:26 AM

Share

ಮಹೇಶ್ ಬಾಬು (Mahesh Babu) ನಟನೆಯ ‘ಸರಿಲೇರು ನೀಕೆವ್ವರು’ ಸಿನಿಮಾ 2020ರಲ್ಲಿ ತೆರೆಗೆ ಬಂದಿತ್ತು. ಎರಡು ವರ್ಷದ ಬಳಿಕ ಅವರ ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ತೆರೆಗೆ ಬಂದಿದೆ. ಮಹೇಶ್ ಬಾಬು ಅವರ ಭಿನ್ನ ಲುಕ್​​ಅನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಈಗಾಗಲೇ ಸಿನಿಮಾದ ಟ್ರೇಲರ್ ಸಾಕಷ್ಟು ಹಿಟ್ ಆಗಿದೆ. ‘ಕಲಾವತಿ..’ ಹಾಡು (Kalaavathi  Song) ಸಿನಿಮಾದ ಜನಪ್ರಿಯತೆಯನ್ನು ಹೆಚ್ಚಿಸಿದೆ. ಮಹೇಶ್ ಬಾಬುಗೆ ಜತೆಯಾಗಿ ಕೀರ್ತಿ ಸುರೇಶ್ ನಟಿಸಿದ್ದಾರೆ. ಬ್ಯಾಕ್​ ಟು ಬ್ಯಾಕ್ ಸೋಲು ಅನುಭವಿಸಿರುವ ಅವರಿಗೆ ಈ ಚಿತ್ರ ತುಂಬಾನೇ ಮುಖ್ಯವಾಗಿದೆ. ‘ಗೀತ ಗೋವಿಂದಂ’ ನಿರ್ದೇಶಕ ಪರಶುರಾಮ್ ಅವರು ‘ಸರ್ಕಾರು ವಾರಿ ಪಾಟ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಕಾರಣದಿಂದಲೂ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಹಾಗಾದರೆ, ಸಿನಿಮಾದ ಮೊದಲಾರ್ಧ ಹೇಗಿದೆ? ಈ ಚಿತ್ರದಲ್ಲಿ ಏನೆಲ್ಲ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

  1. ‘ಸರ್ಕಾರು ವಾರಿ ಪಾಟ’ ಚಿತ್ರದಲ್ಲಿ ಮಹೇಶ್​ ಬಾಬು ಅವರು ಡಿಫರೆಂಟ್​ ಆಗಿ ಕಾಣಿಸಿಕೊಂಡಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಸ್ಪೆಷಲ್​ ಟ್ರೀಟ್​ ಎನ್ನಬಹುದು.
  2. ‘ಪ್ರಿನ್ಸ್​’ ಮಹೇಶ್​ ಬಾಬು ಅವರ ಎಂಟ್ರಿಯೇ ಫೈಟಿಂಗ್​ ದೃಶ್ಯದಿಂದ ಆಗುತ್ತದೆ. ಈ ಸಾಹಸ ದೃಶ್ಯ ಸಖತ್​ ಮಾಸ್​ ಮೂಡಿ ಬಂದಿದೆ. ಅಭಿಮಾನಿಗಳಿಗೆ ಖುಷಿ ನೀಡುತ್ತದೆ.
  3. ಜನರಿಗೆ ಹೆಚ್ಚು ಇಷ್ಟ ಆಗಿರುವ ‘ಕಲಾವತಿ..’ ಹಾಡು ಚಿತ್ರದ ಫಸ್ಟ್​ ಹಾಫ್​ನಲ್ಲಿಯೇ ಬರುತ್ತದೆ. ಮಹೇಶ್​ ಬಾಬು ಮತ್ತು ಕೀರ್ತಿ ಸುರೇಶ್​ ಕಾಂಬಿನೇಷನ್​ ಚೆನ್ನಾಗಿ ಮೂಡಿಬಂದಿದೆ.
  4. ಮೊದಲಾರ್ಧದ ಕಥೆ ಕಾಮಿಡಿಯಾಗಿ ಸಾಗುತ್ತದೆ. ಆದರೆ ಮಧ್ಯಂತರ ಬರುವ ವೇಳೆಗೆ ಬೇರೆ ರೀತಿಯಾದ ತಿರುವು ಪಡೆದುಕೊಳ್ಳುತ್ತದೆ.
  5. ಇದನ್ನೂ ಓದಿ
    Image
    ಬಾಲಿವುಡ್ ಬಗ್ಗೆ ಮಹೇಶ್ ಬಾಬು ಹೇಳಿಕೆ; ಹಿಂದಿಯ ಖ್ಯಾತ ನಿರ್ಮಾಪಕ ಕೊಟ್ರು ಉತ್ತರ
    Image
    ಹೊಸ ಸಿನಿಮಾ ಬಗ್ಗೆ ಅಪ್​ಡೇಟ್ ನೀಡಿದ ಮಹೇಶ್ ಬಾಬು; ಶೂಟಿಂಗ್ ಯಾವಾಗ?
    Image
    ಮಸ್ತ್​ ಮನರಂಜನೆ ನೀಡಲಿದ್ದಾರೆ ಮಹೇಶ್​ ಬಾಬು-ಕೀರ್ತಿ ಸುರೇಶ್​; ಈ ಫೋಟೋದಲ್ಲಿದೆ ಝಲಕ್​
    Image
    ‘ಸರ್ಕಾರು ವಾರಿ ಪಾಟ’ ಟ್ರೇಲರ್​ನಲ್ಲಿ ಆ್ಯಕ್ಷನ್ ಮೂಲಕ ಮಿಂಚಿದ ಮಹೇಶ್ ಬಾಬು; ಚಿತ್ರದ ಕಥೆ ಏನು?
  6. ಫಸ್ಟ್​ ಹಾಫ್​ ಮುಗಿಯುವಾಗ ನಿರ್ದೇಶಕರು ಒಂದು ಸಖತ್​ ಟ್ವಿಸ್ಟ್ ನೀಡಿದ್ದಾರೆ. ಅದೇನು ಎಂಬುದನ್ನು ಚಿತ್ರಮಂದಿರದಲ್ಲೇ ನೋಡಬೇಕು. ದ್ವಿತೀಯಾರ್ಧದ ಮೇಲೆ ನಿರೀಕ್ಷೆ ಮೂಡುವಂತೆ ಈ ಟ್ವಸ್ಟ್​ ನೀಡಲಾಗಿದೆ.
  7. ಹೀರೋ-ಹೀರೋಯಿನ್​ ನಡುವಿನ ಕಹಾನಿ ಕೂಡ ಭಿನ್ನವಾಗಿದೆ. ಇದು ಮಾಮೂಲಿ ಲವ್​ ಸ್ಟೋರಿ ರೀತಿ ಇಲ್ಲ. ಇದು ಕೀರ್ತಿ ಸುರೇಶ್​ ಮತ್ತು ಮಹೇಶ್​ ಬಾಬು ಫ್ಯಾನ್ಸ್​ಗೆ ಇಷ್ಟವಾಗಲಿದೆ.
  8. ಕಾಮಿಡಿ ನಟ ಕಿಶೋರ್​ ಅವರು ಮೊದಲಾರ್ಧದಲ್ಲಿ ಹೆಚ್ಚು ಹೈಲೈಟ್​ ಆಗಿದ್ದಾರೆ. ಪ್ರೇಕ್ಷಕರನ್ನು ನಗಿಸುವಲ್ಲಿ ಅವರು ಯಶಸ್ವಿ ಆಗಿದ್ದಾರೆ.
  9. ಫಸ್ಟ್​ ಹಾಫ್​ ಅಂತ್ಯದಲ್ಲಿ ವಿಲನ್​ ಎಂಟ್ರಿ ಆಗಿದೆ. ಆ ಮೂಲಕ ಸೆಕೆಂಡ್​ ಹಾಫ್​ನಲ್ಲಿ ಕಥೆ ಬೇರೆ ತಿರುವು ಪಡೆದುಕೊಳ್ಳುವ ಸೂಚನೆ ದಟ್ಟವಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ