AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Scam 1770 Review: ಮೆಡಿಕಲ್​ ಸೀಟ್​ ಹಗರಣ ತೆರೆದಿಡುವ ‘ಸ್ಕ್ಯಾಮ್​ 1770’ ಸಿನಿಮಾ

ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕಹಾನಿಗೆ ಒಂದಷ್ಟು ಸಿನಿಮೀಯ ಅಂಶಗಳನ್ನು ಸೇರಿಸಿ ‘ಸ್ಕ್ಯಾಮ್​ 1770’ ಸಿನಿಮಾ ಮಾಡಲಾಗಿದೆ. ಹಣ ಇದೆ ಎಂದಮಾತ್ರಕ್ಕೆ ತಮ್ಮ ಮಕ್ಕಳಿಗೆ ಮೆಡಿಕಲ್​ ಸೀಟ್​ ಕೊಡಿಸಲು ಮುಂದಾಗುವ ಪೋಷಕರಿಗೆ ಈ ಸಿನಿಮಾದಲ್ಲಿ ಮುಖ್ಯವಾದ ಸಂದೇಶ ನೀಡಲಾಗಿದೆ. ಸಿನಿಮಾದ ವಿಮರ್ಶೆ ಇಲ್ಲಿದೆ..

Scam 1770 Review: ಮೆಡಿಕಲ್​ ಸೀಟ್​ ಹಗರಣ ತೆರೆದಿಡುವ ‘ಸ್ಕ್ಯಾಮ್​ 1770’ ಸಿನಿಮಾ
‘ಸ್ಕ್ಯಾಮ್​ 1770’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Apr 12, 2024 | 8:41 PM

Share

ಸಿನಿಮಾ: ಸ್ಕ್ಯಾಮ್​ 1770. ನಿರ್ಮಾಣ: ದೇವರಾಜ್​ ಆರ್​. ನಿರ್ದೇಶನ: ವಿಕಾಸ್​ ಪುಷ್ಪಗಿರಿ. ಪಾತ್ರವರ್ಗ: ರಂಜನ್, ಬಿ. ಸುರೇಶ, ಶ್ರೀನಿವಾಸ್​ ಪ್ರಭು, ನಿಶ್ಚಿತಾ, ರಾಘು ಶಿವಮೊಗ್ಗ, ಹರಿಣಿ, ಉಗ್ರಂ ಸಂದೀಪ್ ಮುಂತಾದವರು. ಸ್ಟಾರ್​ 3/5

ನಟ ರಂಜನ್​ ಅವರು ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು’ ಸಿನಿಮಾದಲ್ಲಿ ದಡ್ಡ ಪ್ರವೀಣನಾಗಿ ನಟಿಸಿದ್ದರು. ಆ ಸಿನಿಮಾದಲ್ಲಿ ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯ ಬಗ್ಗೆ ಹೇಳಲಾಗಿತ್ತು. ಈಗ ರಂಜನ್​ ಅವರು ‘ಸ್ಕ್ಯಾಮ್​ 1770’ (Scam 1770) ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲೂ ಶಿಕ್ಷಣದ ಕ್ಷೇತ್ರದ ಬಗ್ಗೆಯೇ ತೋರಿಸಲಾಗಿದೆ. ನಿರ್ದಿಷ್ಟವಾಗಿ ವೈದ್ಯಕೀಯ ಕಾಲೇಜುಗಳ ಸೀಟ್​ (Medical Seat) ಹಂಚಿಕೆಯ ಹಿಂದೆ ಇರುವ ಕರಾಳ ವಿಚಾರಗಳನ್ನು ಬಿಚ್ಚಿಡಲಾಗಿದೆ. ಈ ಸಿನಿಮಾಗೆ ವಿಕಾಶ್​ ಪುಷ್ಪಗಿರಿ ಅವರು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ‘ಆ್ಯಕ್ಟ್​ 1978’, ‘19.21.21’ ರೀತಿಯ ಸಾಮಾಜಿಕ ಕಳಕಳಿ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ದೇವರಾಜ್​ ಆರ್​. ಅವರೇ ಈಗ ‘ಸ್ಕ್ಯಾಮ್​ 1770’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಈ ಬಾರಿ ಕೂಡ ಅವರು ಒಂದು ಸಮಾಜಮುಖಿ ಕಥಾಹಂದರವನ್ನೇ ಜನರ ಎದುರು ತಂದಿದ್ದಾರೆ.

ಮಧ್ಯಮವರ್ಗದ ಹುಡುಗನೊಬ್ಬ ಡಾಕ್ಟರ್ ಆಗಬೇಕು ಎಂದು ಕನಸು ಕಾಣುತ್ತಾನೆ. ಅದಕ್ಕಾಗಿ ಬೇಕಾದ ಎಲ್ಲ ತಯಾರಿಯನ್ನೂ ಮಾಡಿಕೊಳ್ಳುತ್ತಾನೆ. ಆದರೆ ಇನ್ನೇನು ಆತನಿಗೆ ಮೆಡಿಕಲ್​ ಕಾಲೇಜಿನಲ್ಲಿ ಸೀಟ್​ ಸಿಗಬೇಕು ಎಂಬಷ್ಟರಲ್ಲಿ ಕನಸು ಭಗ್ನವಾಗುತ್ತದೆ. ಕಾರಣಾಂತರಗಳಿಂದ ಮೆಡಿಕಲ್​ ಸೀಟ್​ ಕೈ ತಪ್ಪುತ್ತದೆ. ಅದರ ಹಿಂದಿರುವ ಕಾರಣ ಏನು ಅಂತ ಹುಡುಕಿಕೊಂಡ ಹೊರಟ ಆತನಿಗೆ ದೊಡ್ಡ ಭ್ರಷ್ಟಾಚಾರದ ಜಾಲ ಕಾಣಿಸುತ್ತದೆ. ಅದರಲ್ಲಿ ವಿದ್ಯಾರ್ಥಿಗಳು, ಪೋಷಕರು, ಕಾಲೇಜು ಆಡಳಿತ ಮಂಡಳಿ, ಪೊಲೀಸರು, ವಕೀಲರು, ಅಧಿಕಾರಿಗಳು.. ಹೀಗೆ ಅನೇಕರು ಭಾಗಿ ಆಗಿರುತ್ತಾರೆ. ಮಡಿಕಲ್​ ಕಾಲೇಜು ಸೀಟ್​ ಮಾಫಿಯಾ ಎಷ್ಟು ದೊಡ್ಡದು ಎಂಬುದನ್ನು ಈ ಸಿನಿಮಾ ತೆರೆದಿಡುತ್ತದೆ.

ಚಿತ್ರತಂಡವೇ ಹೇಳಿಕೊಂಡಿರುವಂತೆ ಇದು ಪೋಷಕರಿಗಾಗಿ ಮತ್ತು ವಿದ್ಯಾರ್ಥಿಗಳಿಗಾಗಿ ಮಾಡಿದ ವಿಶೇಷ ಸಿನಿಮಾ. ಹಾಗಂತ ಇದನ್ನು ತುಂಬ ಬೋರಿಂಗ್​ ಎನಿಸುವ ರೀತಿಯಲ್ಲಿ ಕಟ್ಟಿಕೊಟ್ಟಿಲ್ಲ. ಬದಲಿಗೆ ಒಂದು ಸಸ್ಪೆನ್ಸ್​ ಥ್ರಿಲ್ಲರ್​ ಮಾದರಿಯಲ್ಲಿ ನಿರ್ದೇಶಕರು ಕಥೆ ಹೇಳಿದ್ದಾರೆ. ಒಂದಷ್ಟು ಟ್ವಿಸ್ಟ್​ಗಳ ಮೂಲಕ ಅಚ್ಚರಿ ಮೂಡಿಸುತ್ತಾರೆ. ಜೊತೆಗೆ ಹಾಸ್ಯವನ್ನೂ ಸೇರಿಸಿದ್ದಾರೆ. ಮೊದಲಾರ್ಧ ಲವಲವಿಕೆಯಿಂದ ಸಾಗುತ್ತದೆ. ದ್ವಿತೀಯಾರ್ಧ ಗಂಭೀರವಾಗುತ್ತದೆ. ಇಂದಿನ ಕಾಲಘಟ್ಟದಲ್ಲಿ ಶಿಕ್ಷಣ ವ್ಯವಸ್ಥೆ ಎಷ್ಟು ಭ್ರಷ್ಟವಾಗಿದೆ ಎಂಬುದನ್ನು ತಿಳಿಸುವುದು ಹಾಗೂ ಆ ಮೂಲಕ ಪೋಷಕರಲ್ಲಿ, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದೇ ‘ಸ್ಕ್ಯಾಮ್​ 1770’ ಸಿನಿಮಾದ ಮುಖ್ಯ ಆಶಯ.

ಇದನ್ನೂ ಓದಿ: ‘ಅವತಾರ ಪುರುಷ 2’ ವಿಮರ್ಶೆ: ಓವರ್ ಆ್ಯಕ್ಟಿಂಗ್ ಅನಿಲನ ವಾಮಾಚಾರದ ಅಧ್ಯಾಯ

ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕಹಾನಿಗೆ ಒಂದಷ್ಟು ಸಿನಿಮೀಯ ಅಂಶಗಳನ್ನು ಸೇರಿಸಿ ‘ಸ್ಕ್ಯಾಮ್​ 1770’ ಚಿತ್ರವನ್ನು ಮಾಡಲಾಗಿದೆ. ಹಣ ಇದೆ ಎಂದಮಾತ್ರಕ್ಕೆ ತಮ್ಮ ಮಕ್ಕಳಿಗೆ ಮೆಡಿಕಲ್​ ಸೀಟ್​ ಕೊಡಿಸಲು ಮುಂದಾಗುವ ಪೋಷಕರಿಗೆ ಈ ಸಿನಿಮಾದಲ್ಲಿ ಮುಖ್ಯವಾದ ಸಂದೇಶ ನೀಡಲಾಗಿದೆ. ತಮ್ಮ ಮಕ್ಕಳ ಭವಿಷ್ಯ ಕಟ್ಟಲು ಪ್ರಯತ್ನಿಸುವ ತಂದೆ-ತಾಯಿ ಇನ್ನೊಬ್ಬರ ಮಕ್ಕಳ ಜೀವನವನ್ನು ಹೇಗೆ ಹಾಳು ಮಾಡುತ್ತಾರೆ ಎಂಬುದನ್ನು ಈ ಚಿತ್ರದಲ್ಲಿ ವಿವರಿಸಲಾಗಿದೆ. ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಸೀಟು ಹಂಚಿಕೆಯ ಹಿಂದಿರುವ ಭ್ರಷ್ಟಾಚಾರವನ್ನು ತಡೆಯುವುದು ಪೋಷಕರು ಮತ್ತು ವಿದ್ಯಾರ್ಥಿಗಳ ಕೈಯಲ್ಲೇ ಇದೆ ಎಂಬುದನ್ನು ‘ಸ್ಕ್ಯಾಮ್​ 1770’ ಸಿನಿಮಾ ಸ್ಪಷ್ಟವಾಗಿ ಹೇಳುತ್ತದೆ.

ಮೇಕಿಂಗ್​ ದೃಷ್ಟಿಯಿಂದ ‘ಸ್ಕ್ಯಾಮ್​ 1770’ ಚಿತ್ರ ಅಚ್ಚುಕಟ್ಟಾಗಿ ಮೂಡಿಬಂದಿದೆ. ಮೊದಲ ಹಾಡು ಚಿತ್ರಕ್ಕೇನೂ ಪೂರಕವಾಗಿಲ್ಲ. ಕೆಲವು ದೃಶ್ಯಗಳಲ್ಲಿ ಲಾಜಿಕ್​ ಹುಡುಕುವುದು ಕಷ್ಟ. ಕಥೆಯ ಅಂತ್ಯ ಸ್ವಲ್ಪ ಬೇರೆ ರೀತಿಯಲ್ಲಿದೆ. ಹೀರೋ ಮೂಲಕ ಎಲ್ಲ ಸಮಸ್ಯೆಗೂ ಪರಿಹಾರ ಕೊಡಿಸುವ ಪ್ರಯತ್ನ ಈ ಚಿತ್ರದಲ್ಲಿ ಆಗಿಲ್ಲ. ಬದಲಿಗೆ, ಪ್ರೇಕ್ಷಕರಿಗೇ ಆ ಜವಾಬ್ದಾರಿಯನ್ನು ದಾಟಿಸುವ ಮೂಲಕ ಸಿನಿಮಾವನ್ನು ನಿರ್ದೇಶಕರು ಪೂರ್ಣಗೊಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ