AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Scam 1770 Review: ಮೆಡಿಕಲ್​ ಸೀಟ್​ ಹಗರಣ ತೆರೆದಿಡುವ ‘ಸ್ಕ್ಯಾಮ್​ 1770’ ಸಿನಿಮಾ

ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕಹಾನಿಗೆ ಒಂದಷ್ಟು ಸಿನಿಮೀಯ ಅಂಶಗಳನ್ನು ಸೇರಿಸಿ ‘ಸ್ಕ್ಯಾಮ್​ 1770’ ಸಿನಿಮಾ ಮಾಡಲಾಗಿದೆ. ಹಣ ಇದೆ ಎಂದಮಾತ್ರಕ್ಕೆ ತಮ್ಮ ಮಕ್ಕಳಿಗೆ ಮೆಡಿಕಲ್​ ಸೀಟ್​ ಕೊಡಿಸಲು ಮುಂದಾಗುವ ಪೋಷಕರಿಗೆ ಈ ಸಿನಿಮಾದಲ್ಲಿ ಮುಖ್ಯವಾದ ಸಂದೇಶ ನೀಡಲಾಗಿದೆ. ಸಿನಿಮಾದ ವಿಮರ್ಶೆ ಇಲ್ಲಿದೆ..

Scam 1770 Review: ಮೆಡಿಕಲ್​ ಸೀಟ್​ ಹಗರಣ ತೆರೆದಿಡುವ ‘ಸ್ಕ್ಯಾಮ್​ 1770’ ಸಿನಿಮಾ
‘ಸ್ಕ್ಯಾಮ್​ 1770’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Apr 12, 2024 | 8:41 PM

Share

ಸಿನಿಮಾ: ಸ್ಕ್ಯಾಮ್​ 1770. ನಿರ್ಮಾಣ: ದೇವರಾಜ್​ ಆರ್​. ನಿರ್ದೇಶನ: ವಿಕಾಸ್​ ಪುಷ್ಪಗಿರಿ. ಪಾತ್ರವರ್ಗ: ರಂಜನ್, ಬಿ. ಸುರೇಶ, ಶ್ರೀನಿವಾಸ್​ ಪ್ರಭು, ನಿಶ್ಚಿತಾ, ರಾಘು ಶಿವಮೊಗ್ಗ, ಹರಿಣಿ, ಉಗ್ರಂ ಸಂದೀಪ್ ಮುಂತಾದವರು. ಸ್ಟಾರ್​ 3/5

ನಟ ರಂಜನ್​ ಅವರು ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು’ ಸಿನಿಮಾದಲ್ಲಿ ದಡ್ಡ ಪ್ರವೀಣನಾಗಿ ನಟಿಸಿದ್ದರು. ಆ ಸಿನಿಮಾದಲ್ಲಿ ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯ ಬಗ್ಗೆ ಹೇಳಲಾಗಿತ್ತು. ಈಗ ರಂಜನ್​ ಅವರು ‘ಸ್ಕ್ಯಾಮ್​ 1770’ (Scam 1770) ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲೂ ಶಿಕ್ಷಣದ ಕ್ಷೇತ್ರದ ಬಗ್ಗೆಯೇ ತೋರಿಸಲಾಗಿದೆ. ನಿರ್ದಿಷ್ಟವಾಗಿ ವೈದ್ಯಕೀಯ ಕಾಲೇಜುಗಳ ಸೀಟ್​ (Medical Seat) ಹಂಚಿಕೆಯ ಹಿಂದೆ ಇರುವ ಕರಾಳ ವಿಚಾರಗಳನ್ನು ಬಿಚ್ಚಿಡಲಾಗಿದೆ. ಈ ಸಿನಿಮಾಗೆ ವಿಕಾಶ್​ ಪುಷ್ಪಗಿರಿ ಅವರು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ‘ಆ್ಯಕ್ಟ್​ 1978’, ‘19.21.21’ ರೀತಿಯ ಸಾಮಾಜಿಕ ಕಳಕಳಿ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ದೇವರಾಜ್​ ಆರ್​. ಅವರೇ ಈಗ ‘ಸ್ಕ್ಯಾಮ್​ 1770’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಈ ಬಾರಿ ಕೂಡ ಅವರು ಒಂದು ಸಮಾಜಮುಖಿ ಕಥಾಹಂದರವನ್ನೇ ಜನರ ಎದುರು ತಂದಿದ್ದಾರೆ.

ಮಧ್ಯಮವರ್ಗದ ಹುಡುಗನೊಬ್ಬ ಡಾಕ್ಟರ್ ಆಗಬೇಕು ಎಂದು ಕನಸು ಕಾಣುತ್ತಾನೆ. ಅದಕ್ಕಾಗಿ ಬೇಕಾದ ಎಲ್ಲ ತಯಾರಿಯನ್ನೂ ಮಾಡಿಕೊಳ್ಳುತ್ತಾನೆ. ಆದರೆ ಇನ್ನೇನು ಆತನಿಗೆ ಮೆಡಿಕಲ್​ ಕಾಲೇಜಿನಲ್ಲಿ ಸೀಟ್​ ಸಿಗಬೇಕು ಎಂಬಷ್ಟರಲ್ಲಿ ಕನಸು ಭಗ್ನವಾಗುತ್ತದೆ. ಕಾರಣಾಂತರಗಳಿಂದ ಮೆಡಿಕಲ್​ ಸೀಟ್​ ಕೈ ತಪ್ಪುತ್ತದೆ. ಅದರ ಹಿಂದಿರುವ ಕಾರಣ ಏನು ಅಂತ ಹುಡುಕಿಕೊಂಡ ಹೊರಟ ಆತನಿಗೆ ದೊಡ್ಡ ಭ್ರಷ್ಟಾಚಾರದ ಜಾಲ ಕಾಣಿಸುತ್ತದೆ. ಅದರಲ್ಲಿ ವಿದ್ಯಾರ್ಥಿಗಳು, ಪೋಷಕರು, ಕಾಲೇಜು ಆಡಳಿತ ಮಂಡಳಿ, ಪೊಲೀಸರು, ವಕೀಲರು, ಅಧಿಕಾರಿಗಳು.. ಹೀಗೆ ಅನೇಕರು ಭಾಗಿ ಆಗಿರುತ್ತಾರೆ. ಮಡಿಕಲ್​ ಕಾಲೇಜು ಸೀಟ್​ ಮಾಫಿಯಾ ಎಷ್ಟು ದೊಡ್ಡದು ಎಂಬುದನ್ನು ಈ ಸಿನಿಮಾ ತೆರೆದಿಡುತ್ತದೆ.

ಚಿತ್ರತಂಡವೇ ಹೇಳಿಕೊಂಡಿರುವಂತೆ ಇದು ಪೋಷಕರಿಗಾಗಿ ಮತ್ತು ವಿದ್ಯಾರ್ಥಿಗಳಿಗಾಗಿ ಮಾಡಿದ ವಿಶೇಷ ಸಿನಿಮಾ. ಹಾಗಂತ ಇದನ್ನು ತುಂಬ ಬೋರಿಂಗ್​ ಎನಿಸುವ ರೀತಿಯಲ್ಲಿ ಕಟ್ಟಿಕೊಟ್ಟಿಲ್ಲ. ಬದಲಿಗೆ ಒಂದು ಸಸ್ಪೆನ್ಸ್​ ಥ್ರಿಲ್ಲರ್​ ಮಾದರಿಯಲ್ಲಿ ನಿರ್ದೇಶಕರು ಕಥೆ ಹೇಳಿದ್ದಾರೆ. ಒಂದಷ್ಟು ಟ್ವಿಸ್ಟ್​ಗಳ ಮೂಲಕ ಅಚ್ಚರಿ ಮೂಡಿಸುತ್ತಾರೆ. ಜೊತೆಗೆ ಹಾಸ್ಯವನ್ನೂ ಸೇರಿಸಿದ್ದಾರೆ. ಮೊದಲಾರ್ಧ ಲವಲವಿಕೆಯಿಂದ ಸಾಗುತ್ತದೆ. ದ್ವಿತೀಯಾರ್ಧ ಗಂಭೀರವಾಗುತ್ತದೆ. ಇಂದಿನ ಕಾಲಘಟ್ಟದಲ್ಲಿ ಶಿಕ್ಷಣ ವ್ಯವಸ್ಥೆ ಎಷ್ಟು ಭ್ರಷ್ಟವಾಗಿದೆ ಎಂಬುದನ್ನು ತಿಳಿಸುವುದು ಹಾಗೂ ಆ ಮೂಲಕ ಪೋಷಕರಲ್ಲಿ, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದೇ ‘ಸ್ಕ್ಯಾಮ್​ 1770’ ಸಿನಿಮಾದ ಮುಖ್ಯ ಆಶಯ.

ಇದನ್ನೂ ಓದಿ: ‘ಅವತಾರ ಪುರುಷ 2’ ವಿಮರ್ಶೆ: ಓವರ್ ಆ್ಯಕ್ಟಿಂಗ್ ಅನಿಲನ ವಾಮಾಚಾರದ ಅಧ್ಯಾಯ

ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕಹಾನಿಗೆ ಒಂದಷ್ಟು ಸಿನಿಮೀಯ ಅಂಶಗಳನ್ನು ಸೇರಿಸಿ ‘ಸ್ಕ್ಯಾಮ್​ 1770’ ಚಿತ್ರವನ್ನು ಮಾಡಲಾಗಿದೆ. ಹಣ ಇದೆ ಎಂದಮಾತ್ರಕ್ಕೆ ತಮ್ಮ ಮಕ್ಕಳಿಗೆ ಮೆಡಿಕಲ್​ ಸೀಟ್​ ಕೊಡಿಸಲು ಮುಂದಾಗುವ ಪೋಷಕರಿಗೆ ಈ ಸಿನಿಮಾದಲ್ಲಿ ಮುಖ್ಯವಾದ ಸಂದೇಶ ನೀಡಲಾಗಿದೆ. ತಮ್ಮ ಮಕ್ಕಳ ಭವಿಷ್ಯ ಕಟ್ಟಲು ಪ್ರಯತ್ನಿಸುವ ತಂದೆ-ತಾಯಿ ಇನ್ನೊಬ್ಬರ ಮಕ್ಕಳ ಜೀವನವನ್ನು ಹೇಗೆ ಹಾಳು ಮಾಡುತ್ತಾರೆ ಎಂಬುದನ್ನು ಈ ಚಿತ್ರದಲ್ಲಿ ವಿವರಿಸಲಾಗಿದೆ. ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಸೀಟು ಹಂಚಿಕೆಯ ಹಿಂದಿರುವ ಭ್ರಷ್ಟಾಚಾರವನ್ನು ತಡೆಯುವುದು ಪೋಷಕರು ಮತ್ತು ವಿದ್ಯಾರ್ಥಿಗಳ ಕೈಯಲ್ಲೇ ಇದೆ ಎಂಬುದನ್ನು ‘ಸ್ಕ್ಯಾಮ್​ 1770’ ಸಿನಿಮಾ ಸ್ಪಷ್ಟವಾಗಿ ಹೇಳುತ್ತದೆ.

ಮೇಕಿಂಗ್​ ದೃಷ್ಟಿಯಿಂದ ‘ಸ್ಕ್ಯಾಮ್​ 1770’ ಚಿತ್ರ ಅಚ್ಚುಕಟ್ಟಾಗಿ ಮೂಡಿಬಂದಿದೆ. ಮೊದಲ ಹಾಡು ಚಿತ್ರಕ್ಕೇನೂ ಪೂರಕವಾಗಿಲ್ಲ. ಕೆಲವು ದೃಶ್ಯಗಳಲ್ಲಿ ಲಾಜಿಕ್​ ಹುಡುಕುವುದು ಕಷ್ಟ. ಕಥೆಯ ಅಂತ್ಯ ಸ್ವಲ್ಪ ಬೇರೆ ರೀತಿಯಲ್ಲಿದೆ. ಹೀರೋ ಮೂಲಕ ಎಲ್ಲ ಸಮಸ್ಯೆಗೂ ಪರಿಹಾರ ಕೊಡಿಸುವ ಪ್ರಯತ್ನ ಈ ಚಿತ್ರದಲ್ಲಿ ಆಗಿಲ್ಲ. ಬದಲಿಗೆ, ಪ್ರೇಕ್ಷಕರಿಗೇ ಆ ಜವಾಬ್ದಾರಿಯನ್ನು ದಾಟಿಸುವ ಮೂಲಕ ಸಿನಿಮಾವನ್ನು ನಿರ್ದೇಶಕರು ಪೂರ್ಣಗೊಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ