Pathaan First Half Review: ‘ಪಠಾಣ್’ ಚಿತ್ರದಲ್ಲಿ ಡಿಲೀಟ್ ಆಗಿಲ್ಲ ಕೇಸರಿ ಬಿಕಿನಿ ದೃಶ್ಯ: ಶಾರುಖ್ ಚಿತ್ರದ ಮೊದಲಾರ್ಧ ಹೇಗಿದೆ?

Pathaan Movie First Half Review: ಭಾರಿ ನಿರೀಕ್ಷೆ ಹುಟ್ಟುಹಾಕಿದ​ ‘ಪಠಾಣ್​’ ಚಿತ್ರದಲ್ಲಿ ಶಾರುಖ್​ ಖಾನ್​ ಅಭಿಮಾನಿಗಳಿಗೆ ಇಷ್ಟ ಆಗುವಂತಹ ಯಾವೆಲ್ಲ ಅಂಶಗಳಿವೆ? ಫಸ್ಟ್​ ಹಾಫ್​ನಲ್ಲಿ ಏನೆಲ್ಲ ಹೈಲೈಟ್​ ಆಗಿದೆ ಅಂತ ತಿಳಿಯಲು ಈ ವಿಮರ್ಶೆ ಓದಿ..

Pathaan First Half Review: ‘ಪಠಾಣ್’ ಚಿತ್ರದಲ್ಲಿ ಡಿಲೀಟ್ ಆಗಿಲ್ಲ ಕೇಸರಿ ಬಿಕಿನಿ ದೃಶ್ಯ: ಶಾರುಖ್ ಚಿತ್ರದ ಮೊದಲಾರ್ಧ ಹೇಗಿದೆ?
ಪಠಾಣ್ ಸಿನಿಮಾ ಪೋಸ್ಟರ್​
Follow us
| Updated By: Digi Tech Desk

Updated on:Jan 25, 2023 | 9:09 AM

ಸಾವಿರಾರು ಪರದೆಗಳಲ್ಲಿ ‘ಪಠಾಣ್​’ ಸಿನಿಮಾ (Pathaan Movie) ಬಿಡುಗಡೆ ಆಗಿದೆ. ವಿಶ್ವಾದ್ಯಂತ ಈ ಚಿತ್ರಕ್ಕೆ ಅಭಿಮಾನಿಗಳು ಅದ್ದೂರಿ ಸ್ವಾಗತ ನೀಡಿದ್ದಾರೆ. ಮೊದಲ ದಿನ ಮೊದಲ ಶೋಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಎರಡು ದಿನ ಮೊದಲೇ ಟಿಕೆಟ್​ಗಳು ಸೋಲ್ಡ್​ ಔಟ್​ ಆಗಿದ್ದರಿಂದ ಇಂದು (ಜ.25) ಎಲ್ಲ ಕಡೆಗಳಲ್ಲಿ ಹೌಸ್​ ಫುಲ್​ ಪ್ರದರ್ಶನ ಕಾಣುತ್ತಿದೆ. ಶಾರುಖ್​ ಖಾನ್​ (Shah Rukh Khan) ಅಭಿಮಾನಿಗಳು ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಸಿದ್ದಾರ್ಥ್​ ಆನಂದ್​ ನಿರ್ದೇಶನದಲ್ಲಿ ‘ಪಠಾಣ್​’ ಚಿತ್ರ ಮೂಡಿಬಂದಿದೆ. ಶಾರುಖ್​ ಖಾನ್​ ಮತ್ತು ದೀಪಿಕಾ ಪಡುಕೋಣೆ (Deepika Padukone) ಜೊತೆಯಾಗಿ ನಟಿಸಿದ 4ನೇ ಸಿನಿಮಾ ಎಂಬ ಕಾರಣದಿಂದಲೂ ಹೈಪ್​ ಹೆಚ್ಚಾಗಿದೆ. ‘ಬೇಷರಂ ರಂಗ್​..’ ಹಾಡು ಕೂಡ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಲು ಕಾರಣ ಆಗಿದೆ. ಇಷ್ಟೆಲ್ಲ ಕ್ರೇಜ್​ ಸೃಷ್ಟಿ ಮಾಡಿದ ‘ಪಠಾಣ್​’ ಚಿತ್ರದ ಮೊದಲಾರ್ಥ ಹೇಗಿದೆ? ಅಭಿಮಾನಿಗಳಿಗೆ ಇಷ್ಟ ಆಗುವಂತಹ ಯಾವೆಲ್ಲ ಅಂಶಗಳು ಈ ಸಿನಿಮಾದಲ್ಲಿವೆ? ಇಲ್ಲಿದೆ ಉತ್ತರ..

  • ‘ಪಠಾಣ್​’ ಚಿತ್ರದ ಮೊದಲಾರ್ಧದ ಕಥೆ ಭಾರತ, ಆಫ್ರಿಕಾ, ದುಬೈ, ರಷ್ಯಾದಲ್ಲಿ ನಡೆಯುತ್ತದೆ. ಪ್ರತಿ ದೃಶ್ಯವನ್ನು ಅದ್ದೂರಿಯಾಗಿ ತೋರಿಸಲಾಗಿದೆ.
  • ಶಾರುಖ್ ಖಾನ್ ಅವರು ನಾಲ್ಕು ವರ್ಷಗಳ ಬಳಿಕ ದೊಡ್ಡ ಪರದೆಗೆ ಮರಳಿದ್ದಾರೆ. ಅವರು ಗಾಯಗೊಂಡ ಮಾಜಿ ಸೈನಿಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
  • ಇದನ್ನೂ ಓದಿ
    Image
    Pathaan: ವಿಕಲಚೇತನ ಪ್ರೇಕ್ಷಕರಿಗಾಗಿ ‘ಪಠಾಣ್​’ ಚಿತ್ರಕ್ಕೆ ಆಡಿಯೋ ವಿವರಣೆ, ಸಬ್​ಟೈಟಲ್​ ಅಳವಡಿಸಲು ಕೋರ್ಟ್​ ಸೂಚನೆ
    Image
    Shah Rukh Khan: ಭಾರತದಲ್ಲಿ ‘ಪಠಾಣ್​’ ಚಿತ್ರಕ್ಕೆ ವಿರೋಧ; ದುಬೈಗೆ ಹೋಗಿ ಸಿನಿಮಾ ಪ್ರಚಾರ ಮಾಡಿದ ಶಾರುಖ್​ ಖಾನ್​
    Image
    Pooja Bhatt: ‘ಪ್ರತಿಭಟನೆಗೂ ಗಲಭೆಗೂ ವ್ಯತ್ಯಾಸವಿದೆ’: ‘ಪಠಾಣ್​’ ವಿರುದ್ಧ ಭಜರಂಗ ದಳದ ವರ್ತನೆಗೆ ಪೂಜಾ ಭಟ್​ ಖಂಡನೆ
    Image
    Shah Rukh Khan: ‘ಪಠಾಣ್​’ ಚಿತ್ರದಲ್ಲಿ ‘ಪ್ರಧಾನ ಮಂತ್ರಿ’ ಪದಕ್ಕೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ; 13 ಕಡೆಗಳಲ್ಲಿ ಬದಲಾವಣೆ
  • ಟ್ರೇಲರ್​ನಲ್ಲಿ ಜಾನ್ ಅಬ್ರಾಹಂ ಪಾತ್ರದ ಝಲಕ್ ಸಿಕ್ಕಿತ್ತು. ಸಿನಿಮಾದಲ್ಲೂ ಅದೇ ರೀತಿ ಇದೆ. ಕಾರ್ಪೊರೆಟ್​ ಭಯೋತ್ಪಾದಕನ ಪಾತ್ರದಲ್ಲಿ ಅವರು ಮಿಂಚಿದ್ದಾರೆ.
  • ಶಾರುಖ್ ಖಾನ್ ಅವರು ಸಾಹಸ ದೃಶ್ಯದ ಮೂಲಕ ಎಂಟ್ರಿ ಕೊಟ್ಟಿದ್ದಾರೆ. ಅವರು ಮಾಸ್ ಆಗಿ ಎಲ್ಲರ ಗಮನ ಸೆಳೆದಿದ್ದಾರೆ.
  • ಶಾರುಖ್ ಖಾನ್​-ಜಾನ್ ಅಬ್ರಾಹಂ ಮೊದಲ ಬಾರಿ ಮುಖಾಮುಖಿ ಆಗುವ ಸನ್ನಿವೇಶ ಅದ್ದೂರಿಯಾಗಿ ಮೂಡಿಬಂದಿದೆ. ಇದು ಪ್ರೇಕ್ಷಕನಿಗೆ ಥ್ರಿಲ್ ಕೊಡುತ್ತದೆ.
  • ಮೊದಲಾರ್ಧದಲ್ಲೇ ‘ಬೇಷರಂ ಸಾಂಗ್​..’ ಇದೆ. ಈ ಹಾಡಿನ ಮೂಲಕ ದೀಪಿಕಾ ಪಡುಕೋಣೆ ಹಾಟ್ ಆಗಿ ಎಂಟ್ರಿ ಕೊಡುತ್ತಾರೆ.
  • ಕೇಸರಿ ಬಣ್ಣದ ಬಿಕಿನಿ ದೃಶ್ಯ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಇದಕ್ಕೆ ಕತ್ತರಿ ಹಾಕಲಾಗುತ್ತದೆ ಎನ್ನಲಾಗಿತ್ತು. ಆದರೆ, ಹಾಗಾಗಿಲ್ಲ. ಸಿನಿಮಾದಲ್ಲಿ ಈ ದೃಶ್ಯ ಇದೆ.
  • ದುಬೈನಲ್ಲಿ ಹಲವು ದೃಶ್ಯಗಳನ್ನು ಶೂಟ್ ಮಾಡಲಾಗಿದೆ. ಹೆಲಿಕಾಪ್ಟರ್ ಚೇಸಿಂಗ್ ದೃಶ್ಯ ಮೈನವಿರೇಳಿಸುವಂತಿದೆ.
  • ದೀಪಿಕಾ ಪಡುಕೋಣೆ ಪಾತ್ರ ಸಸ್ಪೆನ್ಸಿಂಗ್ ಆಗಿದೆ. ಅವರ ಪಾತ್ರಕ್ಕೆ ಎರಡು ಶೇಡ್​ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:05 am, Wed, 25 January 23

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ