AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathaan First Half Review: ‘ಪಠಾಣ್’ ಚಿತ್ರದಲ್ಲಿ ಡಿಲೀಟ್ ಆಗಿಲ್ಲ ಕೇಸರಿ ಬಿಕಿನಿ ದೃಶ್ಯ: ಶಾರುಖ್ ಚಿತ್ರದ ಮೊದಲಾರ್ಧ ಹೇಗಿದೆ?

Pathaan Movie First Half Review: ಭಾರಿ ನಿರೀಕ್ಷೆ ಹುಟ್ಟುಹಾಕಿದ​ ‘ಪಠಾಣ್​’ ಚಿತ್ರದಲ್ಲಿ ಶಾರುಖ್​ ಖಾನ್​ ಅಭಿಮಾನಿಗಳಿಗೆ ಇಷ್ಟ ಆಗುವಂತಹ ಯಾವೆಲ್ಲ ಅಂಶಗಳಿವೆ? ಫಸ್ಟ್​ ಹಾಫ್​ನಲ್ಲಿ ಏನೆಲ್ಲ ಹೈಲೈಟ್​ ಆಗಿದೆ ಅಂತ ತಿಳಿಯಲು ಈ ವಿಮರ್ಶೆ ಓದಿ..

Pathaan First Half Review: ‘ಪಠಾಣ್’ ಚಿತ್ರದಲ್ಲಿ ಡಿಲೀಟ್ ಆಗಿಲ್ಲ ಕೇಸರಿ ಬಿಕಿನಿ ದೃಶ್ಯ: ಶಾರುಖ್ ಚಿತ್ರದ ಮೊದಲಾರ್ಧ ಹೇಗಿದೆ?
ಪಠಾಣ್ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
| Edited By: |

Updated on:Jan 25, 2023 | 9:09 AM

Share

ಸಾವಿರಾರು ಪರದೆಗಳಲ್ಲಿ ‘ಪಠಾಣ್​’ ಸಿನಿಮಾ (Pathaan Movie) ಬಿಡುಗಡೆ ಆಗಿದೆ. ವಿಶ್ವಾದ್ಯಂತ ಈ ಚಿತ್ರಕ್ಕೆ ಅಭಿಮಾನಿಗಳು ಅದ್ದೂರಿ ಸ್ವಾಗತ ನೀಡಿದ್ದಾರೆ. ಮೊದಲ ದಿನ ಮೊದಲ ಶೋಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಎರಡು ದಿನ ಮೊದಲೇ ಟಿಕೆಟ್​ಗಳು ಸೋಲ್ಡ್​ ಔಟ್​ ಆಗಿದ್ದರಿಂದ ಇಂದು (ಜ.25) ಎಲ್ಲ ಕಡೆಗಳಲ್ಲಿ ಹೌಸ್​ ಫುಲ್​ ಪ್ರದರ್ಶನ ಕಾಣುತ್ತಿದೆ. ಶಾರುಖ್​ ಖಾನ್​ (Shah Rukh Khan) ಅಭಿಮಾನಿಗಳು ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಸಿದ್ದಾರ್ಥ್​ ಆನಂದ್​ ನಿರ್ದೇಶನದಲ್ಲಿ ‘ಪಠಾಣ್​’ ಚಿತ್ರ ಮೂಡಿಬಂದಿದೆ. ಶಾರುಖ್​ ಖಾನ್​ ಮತ್ತು ದೀಪಿಕಾ ಪಡುಕೋಣೆ (Deepika Padukone) ಜೊತೆಯಾಗಿ ನಟಿಸಿದ 4ನೇ ಸಿನಿಮಾ ಎಂಬ ಕಾರಣದಿಂದಲೂ ಹೈಪ್​ ಹೆಚ್ಚಾಗಿದೆ. ‘ಬೇಷರಂ ರಂಗ್​..’ ಹಾಡು ಕೂಡ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಲು ಕಾರಣ ಆಗಿದೆ. ಇಷ್ಟೆಲ್ಲ ಕ್ರೇಜ್​ ಸೃಷ್ಟಿ ಮಾಡಿದ ‘ಪಠಾಣ್​’ ಚಿತ್ರದ ಮೊದಲಾರ್ಥ ಹೇಗಿದೆ? ಅಭಿಮಾನಿಗಳಿಗೆ ಇಷ್ಟ ಆಗುವಂತಹ ಯಾವೆಲ್ಲ ಅಂಶಗಳು ಈ ಸಿನಿಮಾದಲ್ಲಿವೆ? ಇಲ್ಲಿದೆ ಉತ್ತರ..

  • ‘ಪಠಾಣ್​’ ಚಿತ್ರದ ಮೊದಲಾರ್ಧದ ಕಥೆ ಭಾರತ, ಆಫ್ರಿಕಾ, ದುಬೈ, ರಷ್ಯಾದಲ್ಲಿ ನಡೆಯುತ್ತದೆ. ಪ್ರತಿ ದೃಶ್ಯವನ್ನು ಅದ್ದೂರಿಯಾಗಿ ತೋರಿಸಲಾಗಿದೆ.
  • ಶಾರುಖ್ ಖಾನ್ ಅವರು ನಾಲ್ಕು ವರ್ಷಗಳ ಬಳಿಕ ದೊಡ್ಡ ಪರದೆಗೆ ಮರಳಿದ್ದಾರೆ. ಅವರು ಗಾಯಗೊಂಡ ಮಾಜಿ ಸೈನಿಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
  • ಇದನ್ನೂ ಓದಿ
    Image
    Pathaan: ವಿಕಲಚೇತನ ಪ್ರೇಕ್ಷಕರಿಗಾಗಿ ‘ಪಠಾಣ್​’ ಚಿತ್ರಕ್ಕೆ ಆಡಿಯೋ ವಿವರಣೆ, ಸಬ್​ಟೈಟಲ್​ ಅಳವಡಿಸಲು ಕೋರ್ಟ್​ ಸೂಚನೆ
    Image
    Shah Rukh Khan: ಭಾರತದಲ್ಲಿ ‘ಪಠಾಣ್​’ ಚಿತ್ರಕ್ಕೆ ವಿರೋಧ; ದುಬೈಗೆ ಹೋಗಿ ಸಿನಿಮಾ ಪ್ರಚಾರ ಮಾಡಿದ ಶಾರುಖ್​ ಖಾನ್​
    Image
    Pooja Bhatt: ‘ಪ್ರತಿಭಟನೆಗೂ ಗಲಭೆಗೂ ವ್ಯತ್ಯಾಸವಿದೆ’: ‘ಪಠಾಣ್​’ ವಿರುದ್ಧ ಭಜರಂಗ ದಳದ ವರ್ತನೆಗೆ ಪೂಜಾ ಭಟ್​ ಖಂಡನೆ
    Image
    Shah Rukh Khan: ‘ಪಠಾಣ್​’ ಚಿತ್ರದಲ್ಲಿ ‘ಪ್ರಧಾನ ಮಂತ್ರಿ’ ಪದಕ್ಕೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ; 13 ಕಡೆಗಳಲ್ಲಿ ಬದಲಾವಣೆ
  • ಟ್ರೇಲರ್​ನಲ್ಲಿ ಜಾನ್ ಅಬ್ರಾಹಂ ಪಾತ್ರದ ಝಲಕ್ ಸಿಕ್ಕಿತ್ತು. ಸಿನಿಮಾದಲ್ಲೂ ಅದೇ ರೀತಿ ಇದೆ. ಕಾರ್ಪೊರೆಟ್​ ಭಯೋತ್ಪಾದಕನ ಪಾತ್ರದಲ್ಲಿ ಅವರು ಮಿಂಚಿದ್ದಾರೆ.
  • ಶಾರುಖ್ ಖಾನ್ ಅವರು ಸಾಹಸ ದೃಶ್ಯದ ಮೂಲಕ ಎಂಟ್ರಿ ಕೊಟ್ಟಿದ್ದಾರೆ. ಅವರು ಮಾಸ್ ಆಗಿ ಎಲ್ಲರ ಗಮನ ಸೆಳೆದಿದ್ದಾರೆ.
  • ಶಾರುಖ್ ಖಾನ್​-ಜಾನ್ ಅಬ್ರಾಹಂ ಮೊದಲ ಬಾರಿ ಮುಖಾಮುಖಿ ಆಗುವ ಸನ್ನಿವೇಶ ಅದ್ದೂರಿಯಾಗಿ ಮೂಡಿಬಂದಿದೆ. ಇದು ಪ್ರೇಕ್ಷಕನಿಗೆ ಥ್ರಿಲ್ ಕೊಡುತ್ತದೆ.
  • ಮೊದಲಾರ್ಧದಲ್ಲೇ ‘ಬೇಷರಂ ಸಾಂಗ್​..’ ಇದೆ. ಈ ಹಾಡಿನ ಮೂಲಕ ದೀಪಿಕಾ ಪಡುಕೋಣೆ ಹಾಟ್ ಆಗಿ ಎಂಟ್ರಿ ಕೊಡುತ್ತಾರೆ.
  • ಕೇಸರಿ ಬಣ್ಣದ ಬಿಕಿನಿ ದೃಶ್ಯ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಇದಕ್ಕೆ ಕತ್ತರಿ ಹಾಕಲಾಗುತ್ತದೆ ಎನ್ನಲಾಗಿತ್ತು. ಆದರೆ, ಹಾಗಾಗಿಲ್ಲ. ಸಿನಿಮಾದಲ್ಲಿ ಈ ದೃಶ್ಯ ಇದೆ.
  • ದುಬೈನಲ್ಲಿ ಹಲವು ದೃಶ್ಯಗಳನ್ನು ಶೂಟ್ ಮಾಡಲಾಗಿದೆ. ಹೆಲಿಕಾಪ್ಟರ್ ಚೇಸಿಂಗ್ ದೃಶ್ಯ ಮೈನವಿರೇಳಿಸುವಂತಿದೆ.
  • ದೀಪಿಕಾ ಪಡುಕೋಣೆ ಪಾತ್ರ ಸಸ್ಪೆನ್ಸಿಂಗ್ ಆಗಿದೆ. ಅವರ ಪಾತ್ರಕ್ಕೆ ಎರಡು ಶೇಡ್​ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:05 am, Wed, 25 January 23

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?