AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shamshera Twitter Review: ‘ಶಂಷೇರಾ’ ಟ್ವಿಟರ್​ ವಿಮರ್ಶೆ; ರಣಬೀರ್​ ಕಪೂರ್​ ಚಿತ್ರ ನೋಡಿ ಭೇಷ್​ ಎಂದ ಪ್ರೇಕ್ಷಕರು

Shamshera | Ranbir Kapoor: ‘ರಣಬೀರ್​ ಕಪೂರ್​ ಎಂಟ್ರಿ ಸೀನ್​ ತುಂಬ ಚೆನ್ನಾಗಿದೆ. ಪ್ರತಿ ದೃಶ್ಯದಲ್ಲೂ ನಿರೀಕ್ಷೆ ಹೆಚ್ಚುತ್ತದೆ. ಹಿನ್ನೆಲೆ ಸಂಗೀತ ಮತ್ತು ಛಾಯಾಗ್ರಹಣ ಸೂಪರ್​’ ಎಂದು ಪ್ರೇಕ್ಷಕರು ಅನಿಸಿಕೆ ಹಂಚಿಕೊಳ್ಳುತ್ತಿದ್ದಾರೆ.

Shamshera Twitter Review: ‘ಶಂಷೇರಾ’ ಟ್ವಿಟರ್​ ವಿಮರ್ಶೆ; ರಣಬೀರ್​ ಕಪೂರ್​ ಚಿತ್ರ ನೋಡಿ ಭೇಷ್​ ಎಂದ ಪ್ರೇಕ್ಷಕರು
ಶಂಷೇರಾ ಪೋಸ್ಟರ್​
TV9 Web
| Edited By: |

Updated on:Jul 22, 2022 | 11:02 AM

Share

ನಟ ರಣಬೀರ್​ ಕಪೂರ್​ (Ranbir Kapoor) ಅವರು ಭರ್ಜರಿ ಗೆಲುವು ಪಡೆಯುವುದು ಖಚಿತ ಆಗಿದೆ. ಬರೋಬ್ಬರಿ ನಾಲ್ಕು ವರ್ಷಗಳ ಬಳಿಕ ಅವರು ದೊಡ್ಡ ಪರದೆ ಮೇಲೆ ಕಾಣಿಸಿಕೊಂಡಿದ್ದಾರೆ. ಅವರು ನಟಿಸಿರುವ ‘ಶಂಷೇರಾ’ ಸಿನಿಮಾ (Shamshera) ಇಂದು (ಜುಲೈ 22) ಬಿಡುಗಡೆ ಆಗಿದೆ. ಈ ಚಿತ್ರಕ್ಕೆ ಅಭಿಮಾನಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮೊದಲ ದಿನ ಮೊದಲ ಶೋ ನೋಡಿದ ಅಭಿಮಾನಿಗಳು ಭೇಷ್​ ಎನ್ನುತ್ತಿದ್ದಾರೆ. ತುಂಬ ಅದ್ದೂರಿಯಾಗಿ ಈ ಚಿತ್ರ ಮೂಡಿಬಂದಿದ್ದು, ಟ್ವಿಟರ್​ ವಿಮರ್ಶೆಯಲ್ಲಿ (Shamshera Twitter Review) ಮೆಚ್ಚುಗೆ ಮಾತುಗಳನ್ನು ಹಂಚಿಕೊಳ್ಳಲಾಗುತ್ತಿದೆ. ಎರಡು ಶೇಡ್​ನಲ್ಲಿ ರಣಬೀರ್​ ಕಪೂ​ರ್​ ಅವರು ಕಾಣಿಸಿಕೊಂಡಿದ್ದಾರೆ. ‘ಶಂಷೇರಾ’ ಚಿತ್ರಕ್ಕೆ ವಾಣಿ ಕಪೂರ್​ ನಾಯಕಿ. ಕರಣ್​ ಮಲ್ಹೋತ್ರಾ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ರಣಬೀರ್​ ಕಪೂರ್​ ಅವರು ಈ ಹಿಂದೆ ಕಾಣಿಸಿಕೊಂಡಿದ್ದು ‘ಸಂಜು’ ಚಿತ್ರದಲ್ಲಿ. ಆ ಸಿನಿಮಾ 2018ರಲ್ಲಿ ತೆರೆಕಂಡಿತ್ತು. ಆ ಚಿತ್ರದ ಬಿಗ್​ ಸಕ್ಸಸ್​ ಬಳಿಕ ಬಹಳ ಸಮಯ ತೆಗೆದುಕೊಂಡು ಮಾಡಿದ ಚಿತ್ರವೇ ‘ಶಂಷೇರಾ’. ಅವರ ಪರಿಶ್ರಮಕ್ಕೆ ಈಗ ಸೂಕ್ತ ಪ್ರತಿಫಲ ಸಿಗುತ್ತಿದೆ. ಟ್ರೇಲರ್ ನೋಡಿ ಮೆಚ್ಚಿಕೊಂಡಿದ್ದ ಪ್ರೇಕ್ಷಕರು ಮೊದಲ ದಿನವೇ ಮುಗಿಬಿದ್ದು ಈ ಚಿತ್ರವನ್ನು ನೋಡುತ್ತಿದ್ದಾರೆ. ಎಲ್ಲರಿಗೂ ಸಿನಿಮಾ ಇಷ್ಟ ಆಗುತ್ತಿದೆ. ಚಿತ್ರದಲ್ಲಿ ಏನೆಲ್ಲ ಚೆನ್ನಾಗಿದೆ ಎಂಬುದನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ
Image
Alia Bhatt: ಅವಳಿ ಮಕ್ಕಳಿಗೆ ಜನ್ಮ ನೀಡ್ತಾರಾ ಆಲಿಯಾ? ಒಂದು ಸುಳ್ಳು, ಎರಡು ಸತ್ಯ ಹೇಳಿ ಗುಟ್ಟು ಬಿಟ್ಟುಕೊಟ್ಟ ರಣಬೀರ್​
Image
‘ಹೆಣ್ಣು ಮಗು ಬೇಕು’: ಮನದ ಆಸೆ ತಿಳಿಸಿ, ಮಕ್ಕಳನ್ನು ನೋಡಿಕೊಳ್ಳುವುದು ಕಲಿಯುತ್ತಿರುವ ರಣಬೀರ್​ ಕಪೂರ್
Image
10ನೇ ಕ್ಲಾಸ್​ನಲ್ಲಿ ರಣಬೀರ್​ ಕಪೂರ್​ ಪಡೆದ ಅಂಕ ಎಷ್ಟು? ನಿರೀಕ್ಷಿಸಿದ್ದೇ ಬೇರೆ, ಆಗಿದ್ದೇ ಬೇರೆ
Image
ಮದುವೆ ಆದ ಖುಷಿಗೆ ಹೆಂಡತಿಯನ್ನು ಎತ್ತಿಕೊಂಡು ಓಡಾಡಿದ​ ರಣಬೀರ್​ ಕಪೂರ್​: ವಿಡಿಯೋ ವೈರಲ್​

‘ರಣಬೀರ್​ ಕಪೂರ್​ ಅವರ ಎಂಟ್ರಿ ಸೀನ್​ ತುಂಬ ಚೆನ್ನಾಗಿದೆ. ನಾಲ್ಕು ವರ್ಷಗಳ ಬಳಿಕ ಅವರನ್ನು ನೋಡುತ್ತಿರುವುದು ತುಂಬ ರಿಫ್ರೆಶಿಂಗ್​ ಎನಿಸುತ್ತಿದೆ. ಪ್ರತಿ ದೃಶ್ಯದಲ್ಲೂ ನಿರೀಕ್ಷೆ ಹೆಚ್ಚುತ್ತದೆ. ಹಿನ್ನೆಲೆ ಸಂಗೀತ ಮತ್ತು ಛಾಯಾಗ್ರಹಣ ಸೂಪರ್​’ ಎಂದು ಪ್ರೇಕ್ಷಕರೊಬ್ಬರು ಟ್ವೀಟ್​ ಮಾಡಿದ್ದಾರೆ.

‘ಒಂದೇ ಮಾತಲ್ಲಿ ಹೇಳಬೇಕು ಎಂದರೆ ಶಂಷೇರಾ ಬ್ಲಾಕ್​ ಬಸ್ಟರ್​ ಆಗಲಿದೆ. ಇಡೀ ಸಿನಿಮಾದಲ್ಲಿ ಯಾವುದೇ ಬೋರಿಂಗ್​ ದೃಶ್ಯಗಳು ಇಲ್ಲ. ಇಡೀ ತಂಡಕ್ಕೆ ಶುಭವಾಗಲಿ. ಎಲ್ಲವೂ ಪರ್ಫೆಕ್ಟ್​ ಆಗಿದೆ’ ಎಂದು ವೀಕ್ಷಕರೊಬ್ಬರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸಿನಿಮಾಗೆ ಸಿಗುತ್ತಿರುವ ಪಾಸಿಟಿವ್​ ಪ್ರತಿಕ್ರಿಯೆ ಕಂಡು ‘ಶಂಷೇರಾ’ ಚಿತ್ರತಂಡ ಖುಷಿಯಾಗಿದೆ.

‘ರಣಬೀರ್​ ಕಪೂರ್​ ಅವರ ಕಮ್​ಬ್ಯಾಕ್​ಗೆ ಇದು ಅತ್ಯುತ್ತಮ ಸಿನಿಮಾ. ಅವರಿಂದ ಮಾಡಲು ಆಗದೇ ಇರುವುದು ಏನೂ ಇಲ್ಲ’ ಎಂದು ಅಭಿಮಾನಿಗಳು ಅನಿಸಿಕೆ ತಿಳಿಸಿದ್ದಾರೆ. ‘ಈ ವರ್ಷ ಬಾಲಿವುಡ್​ನಲ್ಲಿ ಬಿಡುಗಡೆಯಾದ ಚಿತ್ರಗಳ ಪೈಕಿ ಇದು ದಿ ಬೆಸ್ಟ್​. ದ್ವಿಪಾತ್ರದಲ್ಲಿ ರಣಬೀರ್​ ಕಪೂರ್​ ನಟನೆ ಸೂಪರ್​. ಸಾಹಸ ದೃಶ್ಯಗಳು ಅದ್ಭುತವಾಗಿವೆ. ಕುಟುಂಬದ ಸದಸ್ಯರ ಜೊತೆ ಈ ಚಿತ್ರವನ್ನು ನೋಡಿ ಎಂದು ನಾನು ಶಿಫಾರಸ್ಸು ಮಡುತ್ತೇನೆ’ ಎಂದು ಪ್ರೇಕ್ಷಕರೊಬ್ಬರು ಟ್ವೀಟ್​ ಮಾಡಿದ್ದಾರೆ.

Published On - 11:02 am, Fri, 22 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್