AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivaji Surathkal 2 Review: ಸಸ್ಪೆನ್ಸ್​ ದಾರಿಯಲ್ಲಿ ಸಾಗುತ್ತ ಸೆಂಟಿಮೆಂಟ್​ ಸುಳಿಗೆ ಸಿಕ್ಕ ಶಿವಾಜಿ

Ramesh Aravind: ನಟ ರಮೇಶ್​ ಅರವಿಂದ್​ ಅವರು ಮತ್ತೆ ಶಿವಾಜಿಯಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ನೋಡುಗರ ಎದುರು ಹೊಸದೊಂದು ಕುತೂಹಲ ಭರಿತ ಪ್ರಕರಣವನ್ನು ತೆರೆದಿಡುವ ‘ಶಿವಾಜಿ ಸುರತ್ಕಲ್​ 2’ ಸಿನಿಮಾ ವಿಮರ್ಶೆ ಇಲ್ಲಿದೆ..

Shivaji Surathkal 2 Review: ಸಸ್ಪೆನ್ಸ್​ ದಾರಿಯಲ್ಲಿ ಸಾಗುತ್ತ ಸೆಂಟಿಮೆಂಟ್​ ಸುಳಿಗೆ ಸಿಕ್ಕ ಶಿವಾಜಿ
ರಮೇಶ್ ಅರವಿಂದ್
ಮದನ್​ ಕುಮಾರ್​
|

Updated on:Apr 14, 2023 | 12:04 PM

Share

ಚಿತ್ರ: ಶಿವಾಜಿ ಸುರತ್ಕಲ್​ 2

ನಿರ್ಮಾಣ: ರೇಖಾ ಕೆ.ಎನ್​., ಅನೂಪ್​ ಗೌಡ

ನಿರ್ದೇಶನ: ಆಕಾಶ್​ ಶ್ರೀವತ್ಸ

ಇದನ್ನೂ ಓದಿ
Image
Triple Riding Movie Review: ‘ತ್ರಿಬಲ್​ ರೈಡಿಂಗ್​’ ರೇಸ್​ನಲ್ಲಿ ಓವರ್​ಟೇಕ್​ ಮಾಡಿದ ಸಾಧುಕೋಕಿಲ, ರಂಗಾಯಣ ರಘು
Image
Shubhamangala: ‘ಶುಭಮಂಗಳ’ ಸಿನಿಮಾ ವಿಮರ್ಶೆ; ಇದು ಆರು ಪ್ರೇಮಕಥೆಗಳ ಸುಂದರ ಸಂಕಲನ
Image
Kantara Review: ಹಲವು ಸಂಘರ್ಷಗಳ ‘ಕಾಂತಾರ’; ರಿಷಬ್​ ಶೆಟ್ಟಿಯ ಹೊಸ ಅವತಾರ
Image
Guru Shishyaru Review: ರೋಚಕ ಖೊಖೊ ಪಂದ್ಯದ ಜೊತೆ ಹಿತ-ಮಿತವಾದ ಕಾಮಿಡಿ

ಪಾತ್ರವರ್ಗ: ರಮೇಶ್​ ಅರವಿಂದ್​, ರಾಧಿಕಾ ನಾರಾಯಣ್​, ಪೂರ್ಣ ಮೈಸೂರು, ನಾಸರ್​, ರಘು ರಾಮನಕೊಪ್ಪ, ಮೇಘನಾ ಗಾಂವ್ಕರ್​, ಆರಾಧ್ಯಾ ಮುಂತಾದವರು.

ಸ್ಟಾರ್​: 3/5

ಆಕಾಶ್​ ಶ್ರೀವತ್ಸ ನಿರ್ದೇಶನದ ‘ಶಿವಾಜಿ ಸುರತ್ಕಲ್​’ ಸಿನಿಮಾ 2020ರ ಫೆಬ್ರವರಿಯಲ್ಲಿ ಬಿಡುಗಡೆ ಆಗಿತ್ತು. ಸಸ್ಪೆನ್ಸ್​ ಕಹಾನಿ ಹೊಂದಿದ್ದ ಆ ಚಿತ್ರಕ್ಕೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದರು. ರಮೇಶ್​ ಅರವಿಂದ್​ ಅವರ ನಟನೆಗೆ ಅಭಿಮಾನಿಗಳು ಫುಲ್​ ಮಾರ್ಕ್ಸ್​ ನೀಡಿದ್ದರು. ಬಾಕ್ಸ್​ ಆಫೀಸ್​ನಲ್ಲಿ ಆ ಸಿನಿಮಾ ಗೆದ್ದಿದ್ದರಿಂದ ನಿರ್ಮಾಪಕರು ಅದಕ್ಕೆ ಸೀಕ್ವೆಲ್​ ಘೋಷಿಸಿದರು. ಇಂದು (ಏಪ್ರಿಲ್​ 14) ‘ಶಿವಾಜಿ ಸುರತ್ಕಲ್​ 2’ ಚಿತ್ರ ಬಿಡುಗಡೆ ಆಗಿದೆ. ಇದು ಮೊದಲ ಚಿತ್ರದ ಮುಂದುವರಿದ ಕಥೆ. ಆದರೆ ಇಲ್ಲಿ ಪೊಲೀಸ್​ ಅಧಿಕಾರಿಯಾಗಿ ಶಿವಾಜಿ ಸುರತ್ಕಲ್​ ಭೇದಿಸುವ ಕೇಸ್​ ಬೇರೆ. ಒಂದಲ್ಲ ಎರಡಲ್ಲ.. ನಾಲ್ಕೈದು ಕೊಲೆಗಳ ಹಿಂದಿರುವ ರಾಕ್ಷಸನನ್ನು ಕಂಡು ಹಿಡಿಯುವ ಕಾರ್ಯದಲ್ಲಿ ಶಿವಾಜಿ ಹೇಗೆ ಯಶಸ್ವಿ ಆಗುತ್ತಾನೆ ಎಂಬುದನ್ನು ನಿರ್ದೇಶಕ ಆಕಾಶ್​ ಶ್ರೀವತ್ಸ ಅವರು ಕೌತುಕಮಯವಾಗಿ ವಿವರಿಸಿದ್ದಾರೆ.

‘ಶಿವಾಜಿ ಸುರತ್ಕಲ್​ 2’ ಚಿತ್ರದ ಟ್ರೇಲರ್​ ನೋಡಿದವರಿಗೆ ಹಲವು ಕಲ್ಪನೆಗಳು ಮೂಡಿದ್ದವು. ಕಥಾನಾಯಕನೇ ಕೊಲೆಗಾರ ಆಗಿರಬಹುದೇ ಎಂಬ ಪ್ರಶ್ನೆ ಉದ್ಘವ ಆಗಿತ್ತು. ಅದೇ ರೀತಿಯ ಫೀಲ್​ನೊಂದಿಗೆ ಈ ಸಿನಿಮಾದ ಕಥೆ ಆರಂಭ ಆಗುತ್ತದೆ. ತಾನೇ ಕೊಲೆ ಮಾಡುತ್ತಿರುವ ರೀತಿಯಲ್ಲಿ ಸ್ವತಃ ಶಿವಾಜಿಗೆ ಕನಸು ಬೀಳುತ್ತದೆ. ಪ್ರೇಕ್ಷಕರ ಗಮನವನ್ನು ಬೇರೆಡೆಗೆ ಸೆಳೆಯಲು ಈ ರೀತಿಯ ಅನೇಕ ತಂತ್ರಗಳನ್ನು ಬಳಸಿಕೊಂಡಿದ್ದಾರೆ ನಿರ್ದೇಶಕರು. ಆದರೆ ಅಸಲಿ ಕಥೆ ಬೇರೆಯೇ ಇರುತ್ತದೆ.

ಮೊದಲ ಪಾರ್ಟ್​ನಲ್ಲಿ ಪತ್ನಿಯನ್ನು ಕಳೆದುಕೊಂಡಿದ್ದ ಶಿವಾಜಿ ಎರಡನೇ ಪಾರ್ಟ್​ನಲ್ಲಿ ಆಕೆಯ ನೆನಪಿನಲ್ಲೇ ಕಳೆದುಹೋಗುತ್ತಾನೆ. ಅದೊಂದು ರೀತಿಯ ಮಾನಸಿಕ ಕಾಯಿಲೆಯಾಗಿ ಪರಿಣಮಿಸುತ್ತದೆ. ಇದನ್ನು ಕಥಾನಾಯಕನ ವೀಕ್​ನೆಸ್​ ರೀತಿ ತೋರಿಸಲಾಗಿದೆ. ಅದರ ಜೊತೆಗೆ ಮಗಳ ಪಾತ್ರದ ಎಂಟ್ರಿ ಕೂಡ ಆಗುತ್ತದೆ. ಅಲ್ಲದೇ, ತಂದೆ-ಮಗನ ಫ್ಲ್ಯಾಶ್​ಬ್ಯಾಕ್​ ಸಹ ನುಸುಳುತ್ತದೆ. ಅದರಿಂದ ಫ್ಯಾಮಿಲಿ ಸೆಂಟಿಮೆಂಟ್​ನ ಭಾರ ಸೇರಿಕೊಳ್ಳುತ್ತದೆ. ಹಾಗಾಗಿ ನೋಡುಗರಿಗೆ ಶಿವಾಜಿ ಮೇಲೆ ಒಂದು ಬಗೆಯ ಮರುಕ ಹುಟ್ಟುತ್ತದೆ. ಈ ಸೆಂಟಿಮೆಂಟ್​ನ ಸೆಳೆತಕ್ಕೆ ಸಿಕ್ಕಿಬಿಟ್ಟರೆ ಶಿವಾಜಿಯ ಸಣ್ಣಪುಟ್ಟ ಲೋಪಗಳನ್ನು ಅಡ್ಜೆಸ್ಟ್​ ಮಾಡಿಕೊಂಡು ಪ್ರೇಕ್ಷಕ ಮುಂದೆ ಸಾಗುತ್ತಾನೆ.

ಇದನ್ನೂ ಓದಿ: Hoysala Review: ಹೆಚ್ಚಿಗೆ ಸುತ್ತಾಡಿದರೂ ಮೆಚ್ಚುಗೆ ಗಳಿಸುವ ಹೊಯ್ಸಳ; ಆ್ಯಕ್ಷನ್​ ಜೊತೆ ಜಾತಿ, ಪ್ರೀತಿ, ನೀತಿ ಇತ್ಯಾದಿ..

ಪತ್ತೇದಾರಿ ಕಥೆಗಳಲ್ಲಿ ಸಾಮಾನ್ಯವಾಗಿ ಎಲ್ಲ ಪಾತ್ರಗಳ ಮೇಲೆ ಅನುಮಾನ ಮೂಡುವಂತೆ ಮಾಡಲಾಗುತ್ತದೆ. ಆ ಸೂತ್ರವನ್ನು ‘ಶಿವಾಜಿ ಸುರತ್ಕಲ್​ 2’ ಚಿತ್ರದಲ್ಲೂ ಬಳಸಿಕೊಳ್ಳಲಾಗಿದೆ. ಶಿವಾಜಿಯ ಸುತ್ತಮುತ್ತ ಇರುವ ಎಲ್ಲ ಪಾತ್ರಗಳ ಮೇಲೂ ಪ್ರೇಕ್ಷಕರಿಗೆ ಒಮ್ಮೆಯಾದರೂ ಅನುಮಾನ ಮೂಡುತ್ತದೆ. ಆದರೆ ಅಸಲಿ ಕೊಲೆಗಾರ ಯಾರು ಎಂಬುದು ತಿಳಿಯಬೇಕಾದರೆ ಕ್ಲೈಮ್ಯಾಕ್ಸ್​ ತನಕ ಕಾಯಲೇಬೇಕು.

ಶಿವಾಜಿ ಮದುವೆ ಆಗಿದ್ದು ಹೇಗೆ ಎಂಬ ಫ್ಲ್ಯಾಶ್​ ಬ್ಯಾಕ್​ ಕಹಾನಿಯನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಪ್ರಸ್ತುತ ಕಾಲಘಟದ ಕಥೆಯ ನಡುನಡುವೆ ಫ್ಲ್ಯಾಶ್​ಬ್ಯಾಕ್​ ದೃಶ್ಯಗಳು ಆಗಾಗ ಬರುತ್ತವೆ. ಆದಷ್ಟು ಬೇಗ ಕೊಲೆಗಾರ ಸಿಗಲಿ ಎಂದು ಕಾಯುತ್ತಿರುವ ಪ್ರೇಕ್ಷಕರಿಗೆ ಈ ಫ್ಲ್ಯಾಶ್​ಬ್ಯಾಕ್​ನಿಂದ ಸ್ವಲ್ಪ ಕಿರಿಕಿರಿ ಎನಿಸಬಹುದು. ಹಾಗಿದ್ದರೂ ಕೂಡ ಆ ದೃಶ್ಯಗಳು ಕಥೆಗೆ ಪೂರಕವಾಗಿಯೇ ಇವೆ.

ಇದನ್ನೂ ಓದಿ: Kabzaa Movie Review: 1970ರ ಕಾಲಕ್ಕೆ ಕರೆದೊಯ್ಯುವ ‘ಕಬ್ಜ’; ತೆರೆ ಹಿಂದಿನ ಹೀರೋಗಳ ಅದ್ದೂರಿ ಸಿನಿಮಾ

ಎಂದಿನಂತೆ ರಮೇಶ್​ ಅರವಿಂದ್​ ಅವರು ಲವಲವಿಕೆಯಿಂದ ನಟಿಸಿದ್ದಾರೆ. ರಾಧಿಕಾ ನಾರಾಯಣ್​ ಅವರ ಪಾತ್ರಕ್ಕೆ ಹೆಚ್ಚಿನ ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ. ಇರುವ ಅವಕಾಶದಲ್ಲೇ ಅವರು ಗಮನ ಸೆಳೆಯಲು ಪ್ರಯತ್ನಿಸಿ​ದ್ದಾರೆ. ಮೇಘನಾ ಗಾಂವ್ಕರ್​ ಮಾಡಿರುವ ಪಾತ್ರಕ್ಕೂ ಈ ಮಾತು ಅನ್ವಯ. ಒಂದು ಹಾಡಿಗೆ ಮಾತ್ರ ಸೀಮಿತವಾಗಿದ್ದಾರೆ ಸಂಗೀತಾ ಶೃಂಗೇರಿ. ಬಾಲ ನಟಿ ಆರಾಧ್ಯ ಮುದ್ದುಮುದ್ದಾಗಿ ಕಾಣಿಸಿಕೊಂಡಿದ್ದಾಳೆ.

ಇದನ್ನೂ ಓದಿ: 19 20 21 Movie Review: ನಾಡಿನ ಜನ ನೋಡಲೇಬೇಕಾದ ಕಾಡಿನ ಮಕ್ಕಳ ಕಥೆ ಮತ್ತು ಘನತೆ

ಜ್ಯೂಡಾ ಸ್ಯಾಂಡಿ ಅವರಿಗೆ ಸಂಗೀತದ ಮೂಲಕ ಸೆಳೆಯುವ ಅವಕಾಶ ಇತ್ತು. ಹಾಡುಗಳಲ್ಲಿ ಹಾಗೂ ಹಿನ್ನೆಲೆ ಸಂಗೀತದಲ್ಲಿ  ಅವರು ಹೊಸತನ ಪ್ರಯತ್ನಿಸಿದ್ದರೆ ಚೆನ್ನಾಗಿರುತ್ತಿತ್ತು. ನಿರ್ದೇಶಕರೇ ಸಂಕಲನದ ಜವಾಬ್ದಾರಿ ಹೊತ್ತುಕೊಂಡಿರುವುದರಿಂದ ಹೆಚ್ಚೇನೂ ಎಳೆದಾಡದೇ 2 ಗಂಟೆ 3 ನಿಮಿಷ ಅವಧಿಯಲ್ಲಿ ಕಥೆ ವಿವರಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:04 pm, Fri, 14 April 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?