AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್​’ಗೆ ಮೆಚ್ಚುಗೆ; ಹೇಗಿದೆ ಟಾಮ್ ಹಾಲೆಂಡ್ ಚಿತ್ರ?

Spider-Man: No Way Home Twitter Review: ಸ್ಪೈಡರ್ ಮ್ಯಾನ್ ನೋ ವೇ ಹೋಮ್ ನನ್ನ ನೆಚ್ಚಿನ ಚಲನಚಿತ್ರ. ಟಾಮ್ ಹಾಲೆಂಡ್ ನೀವು ಎಂದೆಂದಿಗೂ ನನ್ನ ಸ್ಪೈಡರ್ ಮ್ಯಾನ್ ಆಗಿರುತ್ತೀರಿ ಎಂದು ಅಭಿಮಾನಿ ಬರೆದುಕೊಂಡಿದ್ದಾನೆ.

‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್​’ಗೆ ಮೆಚ್ಚುಗೆ; ಹೇಗಿದೆ ಟಾಮ್ ಹಾಲೆಂಡ್ ಚಿತ್ರ?
ಸ್ಪೈಡರ್​ ಮ್ಯಾನ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 16, 2021 | 3:15 PM

Share

‘ಸ್ಪೈಡರ್​ ಮ್ಯಾನ್​’ (Spider Man) ಸರಣಿಯ ಹೊಸ ಸಿನಿಮಾ ‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್​’ (Spider-Man: No Way Home) ಇಂದು (ಡಿಸೆಂಬರ್​ 16) ಬಿಡುಗಡೆ ಆಗಿದೆ. ಅನೇಕ ಕಾರಣಗಳಿಗಾಗಿ ಈ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿತ್ತು. ಅದನ್ನು ಈ ಸಿನಿಮಾ ಪೂರೈಸಿದೆ ಎಂದು ಸಿನಿಮಾ ನೋಡಿದವರು ಟ್ವಿಟರ್​ನಲ್ಲಿ ಹೇಳುತ್ತಿದ್ದಾರೆ. ‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್​’ ಚಿತ್ರ ಈ ಸರಣಿಯ ಫೇವರಿಟ್​ ಸಿನಿಮಾ ಎಂದು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಅದ್ಭುತ ಪ್ರತಿಕ್ರಿಯೆ ಸಿಗುತ್ತಿದೆ.

‘ಸ್ಪೈಡರ್ ಮ್ಯಾನ್: ಫಾರ್ ಫ್ರಮ್ ಹೋಮ್’ 2019ರಲ್ಲಿ ತೆರೆಗೆ ಬಂದಿತ್ತು. ಈ ಚಿತ್ರ ಎಲ್ಲಿ ಕೊನೆಯಾಗಿತ್ತೋ ಆ ಸ್ಥಳದಿಂದ ಹೊಸ ಸರಣಿ ಪ್ರಾರಂಭವಾಗುತ್ತದೆ. ‘ಸ್ಪೈಡರ್ ಮ್ಯಾನ್ ನೋ ವೇ ಹೋಮ್ ನನ್ನ ನೆಚ್ಚಿನ ಚಲನಚಿತ್ರ. ಟಾಮ್ ಹಾಲೆಂಡ್ ನೀವು ಎಂದೆಂದಿಗೂ ನನ್ನ ಸ್ಪೈಡರ್ ಮ್ಯಾನ್ ಆಗಿರುತ್ತೀರಿ’ ಎಂದು ಅಭಿಮಾನಿಯೋರ್ವ ಬರೆದುಕೊಂಡಿದ್ದಾನೆ. ಕೆಲವರು ‘ಈ ವರ್ಷದ ಬೆಸ್ಟ್​ ಸಿನಿಮಾಗಳಲ್ಲಿ ಇದು ಒಂದು’ ಎಂದಿದ್ದಾರೆ.

ಟಾಮ್ ಹಾಲೆಂಡ್ ನಟಿಸಿರುವ ಈ ಚಿತ್ರದ ಟ್ರೇಲರ್ ಹವಾ ಸೃಷ್ಟಿ ಮಾಡಿತ್ತು. ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಡಿ.17ರಂದು ‘ಸ್ಪೈಡರ್ ಮ್ಯಾನ್: ನೋ ವೇ ಹೋಮ್’ ಚಿತ್ರ ಬಿಡುಗಡೆ ಆಗುತ್ತಿದೆ. ವಿಶೇಷ ಎಂದರೆ ಭಾರತದಲ್ಲಿ ಒಂದು ದಿನ ಮೊದಲು ಅಂದರೆ ಇಂದು (ಡಿಸೆಂಬರ್ 16ರಂದು) ರಿಲೀಸ್ ಆಗಿದೆ. ಈಗ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಬಾಕ್ಸ್ ಆಫೀಸ್ ಉಡೀಸ್ನಲ್ಲಿ ಒಳ್ಳೆಯ ಕಲೆಕ್ಷನ್ ಆಗುವ ಸಾಧ್ಯತೆ ಇದೆ.

ಡಿಸೆಂಬರ್ 17ರಂದು ‘ಪುಷ್ಪ’ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರಕ್ಕೂ ದೊಡ್ಡ ಹೈಪ್ ಇದೆ. ಅದಕ್ಕೂ ಮೊದಲೇ ‘ಸ್ಪೈಡರ್ ಮ್ಯಾನ್’ ರಿಲೀಸ್ ಆಗಿ ಹವಾ ಸೃಷ್ಟಿ ಮಾಡಿದೆ. 3ಡಿ ಅವತರಣಿಕೆಯಲ್ಲೂ ಸಿನಿಮಾ ರಿಲೀಸ್ ಆಗಿದ್ದು, ಭಾರೀ ಬೇಡಿಕೆ ಸೃಷ್ಟಿ ಆಗಿದೆ. ಬೆಂಗಳೂರಲ್ಲಿ ಬಹುತೇಕ ಶೋಗಳು ಮಲ್ಟಿಫ್ಲೆಕ್ಸ್ನಲ್ಲಿದ್ದು, ಹೌಸ್ಫುಲ್ ಆಗಿದೆ.

ಇದನ್ನೂ ಓದಿ: ‘ಸ್ಪೈಡರ್​ ಮ್ಯಾನ್​’ ಟ್ರೇಲರ್​: ಗುಟ್ಟು ಕಾಪಾಡಲು ಚಿತ್ರತಂಡ ಮಾಡಿದ ಎಡವಟ್ಟು ಪತ್ತೆ ಹಚ್ಚಿದ ಫ್ಯಾನ್ಸ್​

‘ಪುಷ್ಪ’ ವಿರುದ್ಧ ತೊಡೆತಟ್ಟಿದ ‘ಸ್ಪೈಡರ್​ ಮ್ಯಾನ್​’; ಮೊದಲ ದಿನ ಬೆಂಗಳೂರಿನಲ್ಲಿ 700ಕ್ಕೂ ಅಧಿಕ ಶೋ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ