AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tatsama Tadbhava Review: ಕೊಲೆ ಕೌತುಕದ ಕಥೆಯೊಂದಿಗೆ ನೋಡುಗರ ತಲೆಗೆ ಹುಳ ಬಿಡುವ ‘ತತ್ಸಮ ತದ್ಭವ’

ಪತ್ತೆದಾರಿ ಮಾದರಿಯ ಸಿನಿಮಾ ಬಯಸುವವರಿಗೆ ‘ತತ್ಸಮ ತದ್ಭವ’ ಇಷ್ಟವಾಗುತ್ತದೆ. ಈ ಸಿನಿಮಾ ನೋಡುವಾಗ ಪ್ರೇಕ್ಷಕರು ಸಂಪೂರ್ಣ ಗಮನ ನೀಡಬೇಕು. ಮೇಘನಾ ರಾಜ್​ ಅವರು ಒಂದು ಸವಾಲಿನ ಪಾತ್ರವನ್ನು ನಿಭಾಯಿಸಿದ್ದಾರೆ. ಪೊಲೀಸ್​ ಪಾತ್ರದಲ್ಲಿ ಪ್ರಜ್ವಲ್​ ದೇವರಾಜ್​ ಕಾಣಿಸಿಕೊಂಡಿದ್ದಾರೆ. ‘ತತ್ಸಮ ತದ್ಭವ’ ಚಿತ್ರದ ವಿಮರ್ಶೆ ಇಲ್ಲಿದೆ..

Tatsama Tadbhava Review: ಕೊಲೆ ಕೌತುಕದ ಕಥೆಯೊಂದಿಗೆ ನೋಡುಗರ ತಲೆಗೆ ಹುಳ ಬಿಡುವ ‘ತತ್ಸಮ ತದ್ಭವ’
ಪ್ರಜ್ವಲ್​ ದೇವರಾಜ್​, ಮೇಘನಾ ರಾಜ್​
ಮದನ್​ ಕುಮಾರ್​
|

Updated on: Sep 15, 2023 | 3:07 PM

Share

ಚಿತ್ರ: ತತ್ಸಮ ತದ್ಭವ. ನಿರ್ಮಾಣ: ಪಿ.ಬಿ. ಸ್ಡುಡಿಯೋಸ್​, ಅನ್ವಿತ್​ ಸಿನಿಮಾಸ್​. ನಿರ್ದೇಶನ: ವಿಶಾಲ್​ ಆತ್ರೇಯ. ಪಾತ್ರವರ್ಗ: ಮೇಘನಾ ರಾಜ್​, ಪ್ರಜ್ವಲ್​ ದೇವರಾಜ್​, ಅರವಿಂದ್​​ ಅಯ್ಯರ್​, ಮಹತಿ ವೈಷ್ಣವಿ ಭಟ್​, ಶ್ರುತಿ, ಟಿಎಸ್​ ನಾಗಾಭರಣ, ಗಿರಿಜಾ ಲೋಕೇಶ್​, ರಾಜಶ್ರೀ ಪೊನ್ನಪ್ಪ ಮುಂತಾದವರು. ಸ್ಟಾರ್​: 3/5

ನಟಿ ಮೇಘನಾ ರಾಜ್​ (Meghana Raj) ಅವರು ಒಂದಷ್ಟು ವರ್ಷಗಳ ಹಿಂದೆ ಬ್ಯಾಕ್​ ಟು ಬ್ಯಾಕ್​ ಸಿನಿಮಾ ಮಾಡುತ್ತಿದ್ದರು. ಆದರೆ ಚಿರಂಜೀವಿ ಸರ್ಜಾ ನಿಧನದ ಬಳಿಕ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದರು. ಇತ್ತೀಚೆಗೆ ಎಲ್ಲ ನೋವನ್ನು ಪಕ್ಕಕ್ಕೆ ಇಟ್ಟು ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದು ಅವರ ಅಭಿಮಾನಿಗಳಿಗೆ ಖುಷಿ ನೀಡಿತ್ತು. ಮೇಘನಾ ರಾಜ್​ ಅವರು ‘ತತ್ಸಮ ತದ್ಭವ’ (Tatsama Tadbhava) ಸಿನಿಮಾದ ಮೂಲಕ ಕಮ್​ಬ್ಯಾಕ್​ ಮಾಡಿದ್ದಾರೆ. ಸೈಕಲಾಜಿಕಲ್​ ಥ್ರಿಲ್ಲರ್​ ಶೈಲಿಯಲ್ಲಿ ಈ ಸಿನಿಮಾ ಮೂಡಿಬಂದಿದೆ. ಹೊಸ ನಿರ್ದೇಶಕ ವಿಶಾಲ್​ ಆತ್ರೇಯಾ ಅವರು ಪ್ರೇಕ್ಷಕರ ಕುತೂಹಲವನ್ನು ಹಿಡಿದಿಡುವಂತಹ ಪ್ರಯತ್ನ ಮಾಡಿದ್ದಾರೆ. ಮೇಘನಾ ರಾಜ್​ ಅವರ ಜೊತೆ ಪ್ರಜ್ವಲ್​ ದೇವರಾಜ್​ (Prajwal Devaraj) ಕೂಡ ಈ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಮೇಘನಾ ರಾಜ್ ಅವರಿಗೆ ಒಂದು ರೀತಿಯಲ್ಲಿ ಈ ಸಿನಿಮಾ ಚಾಲೆಂಜಿಂಗ್​ ಆಗಿದೆ. ಪೂರ್ತಿ ಸಿನಿಮಾ ಹೇಗಿದೆ ತಿಳಿಯಲು ಈ ವಿಮರ್ಶೆ ಓದಿ.

ಮರ್ಡರ್​ ಮಿಸ್ಟರಿ:

‘ತತ್ಸಮ ತದ್ಭಮ’ ಸಿನಿಮಾದಲ್ಲಿ ಒಂದು ಮರ್ಡರ್ ಮಿಸ್ಟರಿ ಕಥೆ ಇದೆ. ಗಂಡನನ್ನು ಕಳೆದುಕೊಂಡ ಕಥಾನಾಯಕಿ ಆರಿಕಾ (ಮೇಘನಾ ರಾಜ್​) ಪೊಲೀಸ್​ ಠಾಣೆಗೆ ಬಂದು ದೂರು ನೀಡುತ್ತಾಳೆ. ಅಲ್ಲಿ ಇರುವ ದಕ್ಷ ಪೊಲೀಸ್​ ಅಧಿಕಾರಿ ಅರವಿಂದ್​ಗೆ (ಪ್ರಜ್ವಲ್​) ಈ ಕೇಸ್​ ಬಹಳ ಸವಾಲಾಗಿ ಪರಿಣಮಿಸುತ್ತದೆ. ಪ್ರತಿ ಹಂತದಲ್ಲೂ ಅನುಮಾನ ಹೆಚ್ಚುತ್ತದೆ. ಆದರೆ ಅಪರಾಧಿ ಯಾರು ಎಂಬುದನ್ನು ಕಂಡುಹಿಡಿಯುವುದು ಅಷ್ಟು ಸುಲಭವಲ್ಲ. ಅದರ ನಡುವೆ ಹೊಸ ಪಾತ್ರಗಳು ಕೂಡ ಎಂಟ್ರಿ ಪಡೆದುಕೊಳ್ಳುತ್ತವೆ. ನಂತರ ಬರುವುದು ಅಸಲಿ ಟ್ವಿಸ್ಟ್​. ಹಾಗಾದರೆ ಕೊಲೆ ಮಾಡಿದವರು ಯಾರು? ಆ ಕೊಲೆಯ ಹಿಂದಿನ ಉದ್ದೇಶ ಏನು? ಕಥಾನಾಯಕಿ ಹೇಳಿದ್ದು ನಿಜವೋ ಸುಳ್ಳೋ ಎಂಬುದೆಲ್ಲ ತಿಳಿಯಬೇಕಾದರೆ ಪೂರ್ತಿ ಸಿನಿಮಾ ನೋಡಬೇಕು.

ಮೇಘನಾ ರಾಜ್​ಗೆ ಸಖತ್ ಇಷ್ಟವಾಯ್ತು ‘ಆಚಾರ್ ಆ್ಯಂಡ್ ಕೋ’ ಸಿನಿಮಾ; ಕಾರಣ ತಿಳಿಸಿದ ನಟಿ

ಮೇಘನಾಗೆ ಮೆಚ್ಚುಗೆ:

ನಟಿ ಮೇಘನಾ ರಾಜ್​ ಅವರಿಗೆ ಈ ಸಿನಿಮಾದಲ್ಲಿ ಸವಾಲಿನ ಪಾತ್ರ ಇದೆ. ಎರಡು ಡಿಫರೆಂಟ್​ ಶೇಡ್​ ಇರುವ ಪಾತ್ರವನ್ನು ಅವರು ನಿಭಾಯಿಸಿದ್ದಾರೆ. ಇಡೀ ಸಿನಿಮಾದ ಕಥೆ ಅವರ ಸುತ್ತವೇ ಸುತ್ತುತ್ತದೆ. ಇದೊಂದು ನಾಯಕಿ ಪ್ರಧಾನ ಸಿನಿಮಾ ಆದ್ದರಿಂದ ಮೇಘನಾ ರಾಜ್​ ಅವರು ಹೆಚ್ಚು ಸ್ಕ್ರೀನ್​ ಸ್ಪೇಸ್​ ಪಡೆದುಕೊಂಡಿದ್ದಾರೆ. ಹಾಗಾಗಿ ಅವರ ಅಭಿಮಾನಿಗಳಿಗೆ ‘ತತ್ಸಮ ತದ್ಭವ’ ಸಿನಿಮಾ ಇಷ್ಟ ಆಗಲಿದೆ. ಮೇಘನಾ ರಾಜ್​ ಅವರ ಕಮ್​ಬ್ಯಾಕ್​ಗೆ ಸೂಕ್ತವಾದಂತಹ ಕಥೆ ಈ ಸಿನಿಮಾದಲ್ಲಿದೆ.

ಮೆರುಗು ತಂದ ಪ್ರಜ್ವಲ್​ ದೇವರಾಜ್​:

ನಟ ಪ್ರಜ್ವಲ್​ ದೇವರಾಜ್​ ಅವರದ್ದು ‘ತತ್ಸಮ ತದ್ಭವ’ ಸಿನಿಮಾದಲ್ಲಿ ಹೀರೋ ಪಾತ್ರ ಅಲ್ಲ. ಆದರೂ ಕೂಡ ಅವರು ಹೀರೋ ರೀತಿಯಲ್ಲೇ ಸಿನಿಮಾವನ್ನು ಆವರಿಸಿಕೊಂಡಿದ್ದಾರೆ. ಕಥೆಗೆ ಪ್ರಮುಖ ತಿರುವುಗಳನ್ನು ನೀಡುವ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಅವರಿಂದಾಗಿ ಈ ಚಿತ್ರದ ಮೆರುಗು ಹೆಚ್ಚಿದೆ. ಇನ್ನುಳಿದಂತೆ ಬಾಲಾಜಿ ಮನೋಹರ್​, ಅರವಿಂದ್​ ಅಯ್ಯರ್​, ಗಿರಿಜಾ ಲೋಕೇಶ್​, ಶ್ರುತಿ, ಟಿ.ಎಸ್​. ನಾಗಾಭರಣ, ರಾಜಶ್ರೀ ಪೊನ್ನಪ್ಪ ಅವರ ಪಾತ್ರಗಳು ಕೆಲವೇ ದೃಶ್ಯಗಳಲ್ಲಿ ಕಾಣಿಸಿಕೊಂಡರೂ ಕೂಡ ಪರಿಣಾಮಕಾರಿ ಆಗಿವೆ.

ಇದನ್ನೂ ಓದಿ: Jawan Movie Review: ಶಾರುಖ್​ ಖಾನ್​ ಅಭಿಮಾನಿಗಳಿಗಾಗಿ ಅಟ್ಲಿ ಮಾಡಿದ ಮಿಕ್ಸ್​ ಮಸಾಲಾ ಸಿನಿಮಾ

ಪ್ರೇಕ್ಷಕರ ತಲೆಗೆ ಕೆಲಸ:

ಬೇರೆ ಸಿನಿಮಾಗಳಂತೆ ಗಮನ ಎತ್ತಲೋ ಇಟ್ಟುಕೊಂಡು ‘ತತ್ಸಮ ತದ್ಭವ’ ಚಿತ್ರವನ್ನು ನೋಡಲು ಸಾಧ್ಯವಿಲ್ಲ. ಯಾಕೆಂದರೆ, ಈ ಸಿನಿಮಾದ ಕಥೆಯು ಪ್ರೇಕ್ಷಕರ ತಲೆಗೆ ಕೆಲಸ ಕೊಡುತ್ತದೆ. ಎಲ್ಲ ದೃಶ್ಯಗಳನ್ನು ಬಹಳ ಗಮನವಹಿಸಿ ನೋಡಿದರೆ ಮಾತ್ರ ಅಸಲಿ ಕಹಾನಿ ಏನು ಎಂಬುದು ಅರ್ಥವಾಗುತ್ತದೆ. ಅತ್ತಿತ್ತ ನೋಡಿದರೆ ಲಿಂಕ್​ ಮಿಸ್​ ಆಗುವ ಸಾಧ್ಯತೆ ಜಾಸ್ತಿ ಇರುತ್ತದೆ. ಈ ಪ್ರಕಾರದ ಸಿನಿಮಾಗಳನ್ನು ಬಯಸುವ ಪ್ರೇಕ್ಷಕರಿಗೆ ‘ತತ್ಸಮ ತದ್ಭವ’ ಹಿಡಿಸುತ್ತದೆ. ಗಮನ ಬೇರೆಡೆಗೆ ಇಟ್ಟುಕೊಂಡು ಅರೆಬರೆ ಸಿನಿಮಾ ನೋಡಿದರೆ ರುಚಿಸದೇ ಇರಬಹುದು. ಬೇರೆ ಬೇರೆ ಕಾಲಘಟ್ಟದಲ್ಲಿ ಕಥೆಯನ್ನು ಹೇಳುವ ಕೆಲವು ದೃಶ್ಯಗಳಲ್ಲಿ ಈ ಸಿನಿಮಾ ಗೊಂದಲ ಮೂಡಿಸುತ್ತದೆ. ಎರಡನೇ ಬಾರಿ ನೋಡಿದರೆ ಮಾತ್ರ ಗ್ರಹಿಕೆಗೆ ಸಿಗುವಂತಹ ನಿರೂಪಣೆ ಈ ಚಿತ್ರದಲ್ಲಿದೆ.

ಚುರುಕಾಗಿ, ಚುಟುಕಾಗಿ

‘ತತ್ಸಮ ತದ್ಭವ’ ಸಿನಿಮಾದ ಅವಧಿ ಕೇವಲ 2 ಗಂಟೆ 2 ನಿಮಿಷ ಮಾತ್ರ ಇದೆ. ಅಷ್ಟರೊಳಗೆ ಹೇಳಬೇಕಾದ ಕಥೆಯನ್ನು ಬಹಳ ಚುರುಕಾಗಿ, ಚುಟುಕಾಗಿ ಹೇಳಿ ಮುಗಿಸಲಾಗಿದೆ. ಹಾಗಾಗಿ ಈ ಸಿನಿಮಾ ಎಲ್ಲಿಯೂ ಬೋರು ಹೊಡೆಯುವುದಿಲ್ಲ. ಆರಂಭದಲ್ಲಿ ಕಥೆ ತೆರೆದುಕೊಳ್ಳಲು ಸ್ವಲ್ಪ ಸಮಯ ಹಿಡಿಯುತ್ತದೆ. ಇಂಟರ್​ವಲ್​ ಬಳಿಕ ಚಿತ್ರದ ವೇಗ ಹೆಚ್ಚುತ್ತದೆ. ಸಂಗೀತ ನಿರ್ದೇಶಕ ವಾಸುಕಿ ವೈಭವ್​ ಅವರು ಹಿನ್ನೆಲೆ ಸಂಗೀತದಲ್ಲಿ ಹಾಗೂ ‘ದೂರಿ ಲಾಲಿ..’ ಹಾಡಿನಲ್ಲಿ ಇಷ್ಟವಾಗುತ್ತಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?