AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾಸ್ ಎಂಟರ್​ಟೇನರ್​’; ಅಜಿತ್ ನಟನೆಯ ‘ತುನಿವು’ಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್

Thunivu Twitter Review: ಅಜಿತ್ ಕುಮಾರ್ ನಟನೆಯ ‘ತುನಿವು’ ಚಿತ್ರಕ್ಕೆ ನಿರ್ದೇಶನ ಮಾಡಿದ್ದು ಎಚ್​​. ವಿನೋದ್. ಈ ಚಿತ್ರವನ್ನು ಬೋನಿ ಕಪೂರ್ ನಿರ್ಮಾಣ ಮಾಡಿದ್ದಾರೆ. ‘ವಲಿಮೈ’ ಚಿತ್ರದ ಬಳಿಕ ಈ ಮೂವರು ಮತ್ತೆ ಒಂದಾಗಿದ್ದಾರೆ.

‘ಮಾಸ್ ಎಂಟರ್​ಟೇನರ್​’; ಅಜಿತ್ ನಟನೆಯ ‘ತುನಿವು’ಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್
ತುನಿವು ಚಿತ್ರದಲ್ಲಿ ಅಜಿತ್ ಕುಮಾರ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jan 11, 2023 | 12:16 PM

Share

ಅಜಿತ್ ಕುಮಾರ್ (Ajith Kumar) ನಟನೆಯ ‘ತುನಿವು’ ಸಿನಿಮಾ ಇಂದು (ಜನವರಿ 11) ರಿಲೀಸ್ ಆಗಿದೆ. ಈ ಸಿನಿಮಾದ ಟ್ರೇಲರ್ ನೋಡಿದ ಫ್ಯಾನ್ಸ್​ಗೆ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಆಗಿತ್ತು. ‘ತುನಿವು’(Thunivu) ನೋಡಿದ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸಿನಿಮಾ ಸಖತ್ ಮಾಸ್ ಎಂಟರ್​ಟೇನಿಂಗ್ ಆಗಿದೆ ಎಂದುಹೇಳುತ್ತಿದ್ದಾರೆ. ವಿಂಟೇಜ್ ಅಜಿತ್ ಅವರನ್ನು ಕಣ್ತುಂಬಿಕೊಂಡಂತಾಯಿತು ಎಂದು ಅನೇಕರು ಬರೆದುಕೊಂಡಿದ್ದಾರೆ.

ಅಜಿತ್ ಕುಮಾರ್ ನಟನೆಯ ‘ತುನಿವು’ ಚಿತ್ರಕ್ಕೆ ನಿರ್ದೇಶನ ಮಾಡಿದ್ದು ಎಚ್​​. ವಿನೋದ್. ಈ ಚಿತ್ರವನ್ನು ಬೋನಿ ಕಪೂರ್ ನಿರ್ಮಾಣ ಮಾಡಿದ್ದಾರೆ. ‘ವಲಿಮೈ’ ಚಿತ್ರದ ಬಳಿಕ ಈ ಮೂವರು ಮತ್ತೆ ಒಂದಾಗಿದ್ದಾರೆ. ಈ ಚಿತ್ರವನ್ನು ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಿದ್ದಾರೆ. ಸಿನಿಮಾ ನೋಡಿದ ಅನೇಕರು ಭೇಷ್ ಎಂದಿದ್ದಾರೆ.

‘ಬ್ಲಾಕ್​​ಬಸ್ಟರ್ ಆಗೋದು ಪಕ್ಕಾ. ನೋ ಗಟ್ಸ್​, ನೋ ಗ್ಲೋರಿ. ಇದು ಜನರ ಸಿನಿಮಾ’ ಎಂದು ಅಭಿಮಾನಿಯೋರ್ವ ಬರೆದುಕೊಂಡಿದ್ದಾನೆ. ‘ಬ್ಲಾಕ್​ಬಸ್ಟರ್​ ಸಿನಿಮಾ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ನೋಡಲೇಬೇಕಾದ ಸಿನಿಮಾ. ಹಲವು ರೀತಿಯ ಭಾವನೆಗಳನ್ನು ಸಿನಿಮಾ ಒಳಗೊಂಡಿದೆ’ ಎಂದು ಕೆಲವರು ಹೇಳಿದ್ದಾರೆ.

ಅಜಿತ್ ಹಾಗೂ ವಿಜಯ್ ಅಭಿಮಾನಿಗಳ ಮಧ್ಯೆ ಒಂದು ರೇಸ್ ಮೊದಲಿನಿಂದಲೂ ಇದೆ. ಈಗ ಇಬ್ಬರು ಹೀರೋಗಳ ಸಿನಿಮಾ ಒಟ್ಟಿಗೆ ರಿಲೀಸ್ ಆಗಿದೆ. ಹೀಗಾಗಿ ನಮ್ಮ ಸಿನಿಮಾ ಉತ್ತಮವಾಗಿ ಎಂದು ಎರಡೂ ಹೀರೋಗಳು ಹೇಳಿಕೊಳ್ಳುತ್ತಿದ್ದಾರೆ. ಅಂತಿಮವಾಗಿ ಯಾವ ಸಿನಿಮಾ ಗೆಲ್ಲುತ್ತದೆ ಎಂಬುದನ್ನು ಸಿನಿಪ್ರಿಯರು ನಿರ್ಧರಿಸಲಿದ್ದಾರೆ.

ದಳಪತಿ ವಿಜಯ್ ನಟನೆಯ ‘ವಾರಿಸು’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ವಿಜಯ್ ಅವರ ಚಿತ್ರವನ್ನು ಫ್ಯಾನ್ಸ್ ಕೊಂಡಾಡಿದ್ದಾರೆ. ಪಕ್ಕಾ ಸಿನಿಮಾ ಪ್ರೇಮಿಗಳು ಚಿತ್ರವನ್ನು ಅಷ್ಟಾಗಿ ಮೆಚ್ಚಿಕೊಂಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:09 am, Wed, 11 January 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ