AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona Review: ವಿದೇಶಿ ಸೆನ್ಸಾರ್​ ಸದಸ್ಯರಿಂದ ‘ವಿಕ್ರಾಂತ್​ ರೋಣ’ ವಿಮರ್ಶೆ; ಕ್ಲೈಮ್ಯಾಕ್ಸ್​ ಬಗ್ಗೆ ವಿಶೇಷ ಮೆಚ್ಚುಗೆ

Vikrant Rona First Review: ವಿದೇಶದಲ್ಲೂ ‘ವಿಕ್ರಾಂತ್​ ರೋಣ’ ಸಿನಿಮಾ ಭರ್ಜರಿಯಾಗಿ ಬಿಡುಗಡೆ ಆಗಿದೆ. ಅದಕ್ಕೂ ಮುನ್ನ ಸೆನ್ಸಾರ್​ ಮಂಡಳಿ ಸದಸ್ಯರೊಬ್ಬರು ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ.

Vikrant Rona Review: ವಿದೇಶಿ ಸೆನ್ಸಾರ್​ ಸದಸ್ಯರಿಂದ ‘ವಿಕ್ರಾಂತ್​ ರೋಣ’ ವಿಮರ್ಶೆ; ಕ್ಲೈಮ್ಯಾಕ್ಸ್​ ಬಗ್ಗೆ ವಿಶೇಷ ಮೆಚ್ಚುಗೆ
ಕಿಚ್ಚ ಸುದೀಪ್
TV9 Web
| Edited By: |

Updated on:Jul 28, 2022 | 9:25 AM

Share

ಸಖತ್​ ನಿರೀಕ್ಷೆ ಮೂಡಿಸಿದ್ದ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾ ಇಂದು (ಜುಲೈ 28) ಎಲ್ಲೆಡೆ ರಿಲೀಸ್​ ಆಗಿದೆ. ಅಭಿಮಾನಿಗಳು ಮುಗಿಬಿದ್ದು ಈ ಸಿನಿಮಾವನ್ನು ನೋಡುತ್ತಿದ್ದಾರೆ. ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ ಪಡೆದ ಪ್ರೇಕ್ಷಕರ ಸಡಗರ ಜೋರಾಗಿದೆ. ಕಿಚ್ಚ ಸುದೀಪ್ (Kichcha Sudeep)​ ಅವರ ನಟನೆ ಬಗ್ಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅದ್ದೂರಿ ಮೇಕಿಂಗ್​, 3ಡಿ ದೃಶ್ಯ ವೈಭವದ ಬಗ್ಗೆಯೂ ಉತ್ತಮ ಮಾತುಗಳು ಕೇಳಿಬರುತ್ತಿವೆ. ಅದಕ್ಕೂ ಮುನ್ನ ವಿದೇಶಿ ಸೆನ್ಸಾರ್​ ಮಂಡಳಿ ಸದಸ್ಯ ಉಮೈರ್​ ಸಂಧು ಅವರಿಂದ ಬೆಸ್ಟ್​ ವಿಮರ್ಶೆ (Vikrant Rona Review) ಸಿಕ್ಕಿದೆ. ‘ವಿಕ್ರಾಂತ್​ ರೋಣ’ ನೋಡಿದ ಅವರು ಭೇಷ್​ ಎಂದಿದ್ದಾರೆ. ಸಿನಿಮಾದ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಈ ಚಿತ್ರದ ಮುಖ್ಯ ಅಂಶವೇ ಕ್ಲೈಮ್ಯಾಕ್ಸ್​ ಎಂದು ಅವರು ಹೇಳಿದ್ದಾರೆ.

ವಿದೇಶದಲ್ಲಿ ರಿಲೀಸ್​ ಆಗುವ ಭಾರತದ ಬಹುತೇಕ ಸಿನಿಮಾಗಳ ಬಗ್ಗೆ ಉಮೈರ್​ ಸಂಧು ಅವರು ವಿಮರ್ಶೆ ಹಂಚಿಕೊಳ್ಳುತ್ತಾರೆ. ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ಕನ್ನಡ ಚಿತ್ರರಂಗದಿಂದ ಮತ್ತೊಂದು ಅದ್ಭುತ ಸಿನಿಮಾ ಬಂದಿದೆ. ಅಭಿಮಾನಿಗಳು ಮತ್ತು ಪ್ರೇಕ್ಷಕರು ಸಂಭ್ರಮಿಸಬೇಕಾದ ಸಮಯ ಇದು. ಕನ್ನಡ ಚಿತ್ರರಂಗಕ್ಕೆ ಇದು ಅತ್ಯುತ್ತಮ ಕಾಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
Vikrant Rona: ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರದ ಮೊದಲಾರ್ಧದ ವಿಮರ್ಶೆ ಇಲ್ಲಿದೆ
Image
Vikrant Rona: ವಿಶ್ವಾದ್ಯಂತ ಘರ್ಜಿಸುತ್ತಿರುವ ‘ವಿಕ್ರಾಂತ್​ ರೋಣ’; ಸುದೀಪ್​ ಎಂಟ್ರಿಗೆ ಫ್ಯಾನ್ಸ್​ ಫಿದಾ
Image
‘ವಿಕ್ರಾಂತ್​ ರೋಣ’ ರಿಲೀಸ್​ಗೂ ಮುನ್ನ ಸುದೀಪ್​ಗೆ ಪ್ರೀತಿಯಿಂದ ವಿಶ್ ಮಾಡಿದ ನಿರ್ದೇಶಕ ರಾಜಮೌಳಿ
Image
‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಕತ್ರಿನಾ ಜಪ ಮಾಡಿದ ಸಲ್ಮಾನ್​ ಖಾನ್​; ಕಾರಣ ಏನು?

‘ದಕ್ಷಿಣ ಭಾರತದಲ್ಲಿ ಕಿಚ್ಚ ಸುದೀಪ್​ ಅವರು ಸೂಪರ್​ ಸ್ಟಾರ್​. ಉತ್ತರ ಭಾರತದಲ್ಲೂ ಅವರಿಗೆ ಅಭಿಮಾನಿಗಳಿದ್ದಾರೆ. ವಿಕ್ರಾಂತ್​ ರೋಣ ಸಿನಿಮಾದಿಂದ ಅವರು ಹಿಂದಿ ಪ್ರೇಕ್ಷಕರಿಗೂ ಹೆಚ್ಚು ಇಷ್ಟ ಆಗುತ್ತಾರೆ. ಈ ಚಿತ್ರದಲ್ಲಿ ಅವರ ಸಾಹಸ ದೃಶ್ಯಗಳು ಉತ್ಕೃಷ್ಟವಾಗಿವೆ’ ಎಂದು ಉಮೈರ್​ ಸಂಧು ಟ್ವೀಟ್​ ಮಾಡಿದ್ದಾರೆ. ಅವರ ಮಾತುಗಳನ್ನು ಕೇಳಿದ ಬಳಿಕ ಚಿತ್ರದ ಮೇಲಿನ ಹೈಪ್​ ಇನ್ನಷ್ಟು ಹೆಚ್ಚಿದೆ.

‘ಇದು ಪಕ್ಕಾ ಪೈಸಾ ವಸೂಲ್​ ಸಿನಿಮಾ. ಅನೂಪ್​ ಭಂಡಾರಿ ಅವರ ನಿರ್ದೇಶನ ಚೆನ್ನಾಗಿದೆ. ಕಥೆ, ಸಾಹಸದೃಶ್ಯ, ಛಾಯಾಗ್ರಹಣ ಎಲ್ಲವೂ ಉತ್ತಮ ಗಣಮಟ್ಟದಲ್ಲಿ ಇವೆ’ ಎಂದು ಉಮೈರ್​ ಸಂಧು ಹೇಳಿದ್ದಾರೆ. ಅವರು ಹಿಂದಿ ಅವತರಣಿಕೆಯನ್ನು ನೋಡಿ ಈ ವಿಮರ್ಶೆ ತಿಳಿಸಿದ್ದಾರೆ.

Published On - 8:08 am, Thu, 28 July 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?