AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona Review: ವಿದೇಶಿ ಸೆನ್ಸಾರ್​ ಸದಸ್ಯರಿಂದ ‘ವಿಕ್ರಾಂತ್​ ರೋಣ’ ವಿಮರ್ಶೆ; ಕ್ಲೈಮ್ಯಾಕ್ಸ್​ ಬಗ್ಗೆ ವಿಶೇಷ ಮೆಚ್ಚುಗೆ

Vikrant Rona First Review: ವಿದೇಶದಲ್ಲೂ ‘ವಿಕ್ರಾಂತ್​ ರೋಣ’ ಸಿನಿಮಾ ಭರ್ಜರಿಯಾಗಿ ಬಿಡುಗಡೆ ಆಗಿದೆ. ಅದಕ್ಕೂ ಮುನ್ನ ಸೆನ್ಸಾರ್​ ಮಂಡಳಿ ಸದಸ್ಯರೊಬ್ಬರು ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ.

Vikrant Rona Review: ವಿದೇಶಿ ಸೆನ್ಸಾರ್​ ಸದಸ್ಯರಿಂದ ‘ವಿಕ್ರಾಂತ್​ ರೋಣ’ ವಿಮರ್ಶೆ; ಕ್ಲೈಮ್ಯಾಕ್ಸ್​ ಬಗ್ಗೆ ವಿಶೇಷ ಮೆಚ್ಚುಗೆ
ಕಿಚ್ಚ ಸುದೀಪ್
TV9 Web
| Edited By: |

Updated on:Jul 28, 2022 | 9:25 AM

Share

ಸಖತ್​ ನಿರೀಕ್ಷೆ ಮೂಡಿಸಿದ್ದ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾ ಇಂದು (ಜುಲೈ 28) ಎಲ್ಲೆಡೆ ರಿಲೀಸ್​ ಆಗಿದೆ. ಅಭಿಮಾನಿಗಳು ಮುಗಿಬಿದ್ದು ಈ ಸಿನಿಮಾವನ್ನು ನೋಡುತ್ತಿದ್ದಾರೆ. ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ ಪಡೆದ ಪ್ರೇಕ್ಷಕರ ಸಡಗರ ಜೋರಾಗಿದೆ. ಕಿಚ್ಚ ಸುದೀಪ್ (Kichcha Sudeep)​ ಅವರ ನಟನೆ ಬಗ್ಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅದ್ದೂರಿ ಮೇಕಿಂಗ್​, 3ಡಿ ದೃಶ್ಯ ವೈಭವದ ಬಗ್ಗೆಯೂ ಉತ್ತಮ ಮಾತುಗಳು ಕೇಳಿಬರುತ್ತಿವೆ. ಅದಕ್ಕೂ ಮುನ್ನ ವಿದೇಶಿ ಸೆನ್ಸಾರ್​ ಮಂಡಳಿ ಸದಸ್ಯ ಉಮೈರ್​ ಸಂಧು ಅವರಿಂದ ಬೆಸ್ಟ್​ ವಿಮರ್ಶೆ (Vikrant Rona Review) ಸಿಕ್ಕಿದೆ. ‘ವಿಕ್ರಾಂತ್​ ರೋಣ’ ನೋಡಿದ ಅವರು ಭೇಷ್​ ಎಂದಿದ್ದಾರೆ. ಸಿನಿಮಾದ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಈ ಚಿತ್ರದ ಮುಖ್ಯ ಅಂಶವೇ ಕ್ಲೈಮ್ಯಾಕ್ಸ್​ ಎಂದು ಅವರು ಹೇಳಿದ್ದಾರೆ.

ವಿದೇಶದಲ್ಲಿ ರಿಲೀಸ್​ ಆಗುವ ಭಾರತದ ಬಹುತೇಕ ಸಿನಿಮಾಗಳ ಬಗ್ಗೆ ಉಮೈರ್​ ಸಂಧು ಅವರು ವಿಮರ್ಶೆ ಹಂಚಿಕೊಳ್ಳುತ್ತಾರೆ. ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ಕನ್ನಡ ಚಿತ್ರರಂಗದಿಂದ ಮತ್ತೊಂದು ಅದ್ಭುತ ಸಿನಿಮಾ ಬಂದಿದೆ. ಅಭಿಮಾನಿಗಳು ಮತ್ತು ಪ್ರೇಕ್ಷಕರು ಸಂಭ್ರಮಿಸಬೇಕಾದ ಸಮಯ ಇದು. ಕನ್ನಡ ಚಿತ್ರರಂಗಕ್ಕೆ ಇದು ಅತ್ಯುತ್ತಮ ಕಾಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
Vikrant Rona: ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರದ ಮೊದಲಾರ್ಧದ ವಿಮರ್ಶೆ ಇಲ್ಲಿದೆ
Image
Vikrant Rona: ವಿಶ್ವಾದ್ಯಂತ ಘರ್ಜಿಸುತ್ತಿರುವ ‘ವಿಕ್ರಾಂತ್​ ರೋಣ’; ಸುದೀಪ್​ ಎಂಟ್ರಿಗೆ ಫ್ಯಾನ್ಸ್​ ಫಿದಾ
Image
‘ವಿಕ್ರಾಂತ್​ ರೋಣ’ ರಿಲೀಸ್​ಗೂ ಮುನ್ನ ಸುದೀಪ್​ಗೆ ಪ್ರೀತಿಯಿಂದ ವಿಶ್ ಮಾಡಿದ ನಿರ್ದೇಶಕ ರಾಜಮೌಳಿ
Image
‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಕತ್ರಿನಾ ಜಪ ಮಾಡಿದ ಸಲ್ಮಾನ್​ ಖಾನ್​; ಕಾರಣ ಏನು?

‘ದಕ್ಷಿಣ ಭಾರತದಲ್ಲಿ ಕಿಚ್ಚ ಸುದೀಪ್​ ಅವರು ಸೂಪರ್​ ಸ್ಟಾರ್​. ಉತ್ತರ ಭಾರತದಲ್ಲೂ ಅವರಿಗೆ ಅಭಿಮಾನಿಗಳಿದ್ದಾರೆ. ವಿಕ್ರಾಂತ್​ ರೋಣ ಸಿನಿಮಾದಿಂದ ಅವರು ಹಿಂದಿ ಪ್ರೇಕ್ಷಕರಿಗೂ ಹೆಚ್ಚು ಇಷ್ಟ ಆಗುತ್ತಾರೆ. ಈ ಚಿತ್ರದಲ್ಲಿ ಅವರ ಸಾಹಸ ದೃಶ್ಯಗಳು ಉತ್ಕೃಷ್ಟವಾಗಿವೆ’ ಎಂದು ಉಮೈರ್​ ಸಂಧು ಟ್ವೀಟ್​ ಮಾಡಿದ್ದಾರೆ. ಅವರ ಮಾತುಗಳನ್ನು ಕೇಳಿದ ಬಳಿಕ ಚಿತ್ರದ ಮೇಲಿನ ಹೈಪ್​ ಇನ್ನಷ್ಟು ಹೆಚ್ಚಿದೆ.

‘ಇದು ಪಕ್ಕಾ ಪೈಸಾ ವಸೂಲ್​ ಸಿನಿಮಾ. ಅನೂಪ್​ ಭಂಡಾರಿ ಅವರ ನಿರ್ದೇಶನ ಚೆನ್ನಾಗಿದೆ. ಕಥೆ, ಸಾಹಸದೃಶ್ಯ, ಛಾಯಾಗ್ರಹಣ ಎಲ್ಲವೂ ಉತ್ತಮ ಗಣಮಟ್ಟದಲ್ಲಿ ಇವೆ’ ಎಂದು ಉಮೈರ್​ ಸಂಧು ಹೇಳಿದ್ದಾರೆ. ಅವರು ಹಿಂದಿ ಅವತರಣಿಕೆಯನ್ನು ನೋಡಿ ಈ ವಿಮರ್ಶೆ ತಿಳಿಸಿದ್ದಾರೆ.

Published On - 8:08 am, Thu, 28 July 22

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್