Vikrant Rona: ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರದ ಮೊದಲಾರ್ಧದ ವಿಮರ್ಶೆ ಇಲ್ಲಿದೆ

| Updated By: ಮದನ್​ ಕುಮಾರ್​

Updated on: Jul 28, 2022 | 7:45 AM

Vikrant Rona First Half Review: ‘ವಿಕ್ರಾಂತ್ ರೋಣ’ ಚಿತ್ರಕ್ಕೆ ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದು, ಜಾಕ್ ಮಂಜು ಬಂಡವಾಳ ಹೂಡಿದ್ದಾರೆ. ಈ ಚಿತ್ರದ ಮೊದಲಾರ್ಧ ವಿಮರ್ಶೆ ಇಲ್ಲಿದೆ.

Vikrant Rona: ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರದ ಮೊದಲಾರ್ಧದ ವಿಮರ್ಶೆ ಇಲ್ಲಿದೆ
ಸುದೀಪ್
Follow us on

ಕಿಚ್ಚ ಸುದೀಪ್ (Kichcha Sudeep) ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಇಂದು (ಜುಲೈ 28) ರಿಲೀಸ್ ಆಗಿದೆ. ಕನ್ನಡದಲ್ಲಿ 3ಡಿ ಸಿನಿಮಾ ಬಂದಿದ್ದು ಅತೀ ಕಡಿಮೆ. ಈ ಸಾಲಿಗೆ ‘ವಿಕ್ರಾಂತ್ ರೋಣ’ (Vikrant Rona Movie) ಚಿತ್ರ ಕೂಡ ಸೇರ್ಪಡೆ ಆಗಿದೆ. ಹಾಡು ಹಾಗೂ ಟ್ರೇಲರ್ ಮೂಲಕ ಸುದೀಪ್ ಅಭಿನಯದ ಈ ಚಿತ್ರ ಸಾಕಷ್ಟು ಗಮನ ಸೆಳೆದಿತ್ತು. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದು ಕೂತಿದ್ದರು. ಕೊನೆಗೂ ಆ ದಿನ ಬಂದಿದೆ. ‘ವಿಕ್ರಾಂತ್ ರೋಣ’ ಚಿತ್ರಕ್ಕೆ ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದು, ಜಾಕ್ ಮಂಜು ಬಂಡವಾಳ ಹೂಡಿದ್ದಾರೆ. ಅಜನೀಶ್ ಲೋಕನಾಥ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಚಿತ್ರದ ಮೊದಲಾರ್ಧ ವಿಮರ್ಶೆ(Vikrant Rona First Half Review) ಇಲ್ಲಿದೆ.

  1. ಅನೂಪ್​ ಭಂಡಾರಿ ಅವರ ಈ ಹಿಂದಿನ ‘ರಂಗಿತರಂಗ’ ಶೈಲಿಯಲ್ಲಿಯೇ ‘ವಿಕ್ರಾಂತ್​ ರೋಣ’ ಸಿನಿಮಾ ಮೂಡಿಬಂದಿದೆ. ಸಾಕಷ್ಟು ದೃಶ್ಯಗಳಲ್ಲಿ ಆ ವೈಭವ ಕಾಣಿಸುತ್ತದೆ.
  2. ಕಿಚ್ಚ ಸುದೀಪ್​ ಅವರು ಪೊಲೀಸ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಎಂಟ್ರಿ ಸೀನ್​ ಅಭಿಮಾನಿಗಳಿಗೆ ಮೆಚ್ಚುಗೆ ಆಗುವಂತಿದೆ.
  3. ಚಿತ್ರದ ಮೊದಲಾರ್ಧದ ಕಥೆ ಸಸ್ಪೆನ್ಸ್​ ಮತ್ತು ಕಾಮಿಡಿ ಜೊತೆಯಲ್ಲಿ ಸಾಗುತ್ತದೆ. ಪ್ರತಿ ದೃಶ್ಯವೂ ಅದ್ದೂರಿಯಾಗಿ ಮೂಡಿಬಂದಿದೆ.
  4. ಸಖತ್​ ಹಿಟ್​ ಆಗಿರುವ ‘ರಾ ರಾ​ ರಕ್ಕಮ್ಮ..’ ಸಾಂಗ್​ ಮೊದಲಾರ್ಧದಲ್ಲಿ ಬರುವುದಿಲ್ಲ. ಆದರೆ ಜಾಕ್ವೆಲಿನ್​ ಫರ್ನಾಂಡಿಸ್​ ನಟನೆಯ ದೃಶ್ಯ ಫಸ್ಟ್​ ಹಾಫ್​ನಲ್ಲಿಯೇ ಬರುತ್ತದೆ. ‘ರಾ ರಾ​ ರಕ್ಕಮ್ಮ..’ ಹಾಡಿಗಾಗಿ ಪ್ರೇಕ್ಷಕರು ಸೆಕೆಂಡ್​ ಹಾಫ್​ಗೆ ಕಾಯಬೇಕು.
  5. ಇದನ್ನೂ ಓದಿ
    ‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಕತ್ರಿನಾ ಜಪ ಮಾಡಿದ ಸಲ್ಮಾನ್​ ಖಾನ್​; ಕಾರಣ ಏನು?
    Salman Khan: ‘ವಿಕ್ರಾಂತ್​ ರೋಣ’ ವೇದಿಕೆಯಲ್ಲಿ ಸುದೀಪ್​-ಸಲ್ಮಾನ್​​; ಕಿಚ್ಚನ ಜತೆಗಿನ ಬಾಂಧವ್ಯದ ಬಗ್ಗೆ ಸಲ್ಲು ಮಾತು
    Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
    Kichcha Sudeep: ಕೆಲವೇ ಗಂಟೆಗಳಲ್ಲಿ ಕೋಟ್ಯಂತರ ಬಾರಿ ವೀಕ್ಷಣೆ ಕಂಡ ‘ವಿಕ್ರಾಂತ್​ ರೋಣ’ ಟ್ರೇಲರ್​
  6. ಬೃಹತ್​ ಸೆಟ್​ಗಳಲ್ಲಿ ಈ ಸಿನಿಮಾವನ್ನು ಚಿತ್ರೀಕರಿಸಲಾಗಿದೆ. ಆ ದೃಶ್ಯಗಳು 3ಡಿಯಲ್ಲಿ ತುಂಬ ಅದ್ಭುತವಾಗಿ ಕಾಣಿಸುತ್ತವೆ. ಪ್ರೇಕ್ಷಕರಿಗೆ ಹೊಸ ಅನುಭವ ನೀಡುತ್ತದೆ.
  7. ಕಿಚ್ಚ ಸುದೀಪ್​ ಅವರು ಹಿಂದೆಂದಿಗಿಂತಲೂ ಡಿಫರೆಂಟ್​ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಮ್ಯಾನರಿಸಂ ಕೂಡ ಬೇರೆ ರೀತಿ ಇದೆ.
  8. ನಿರೂಪ್​ ಭಂಡಾರಿ ಮತ್ತು ನೀತಾ ಅಶೋಕ್​ ಅವರ ಕೆಮಿಸ್ಟ್ರಿ ಚೆನ್ನಾಗಿ ಮೂಡಿಬಂದಿದೆ. ಪ್ರೇಕ್ಷಕರಿಗೆ ಇಬ್ಬರ ಕಾಂಬಿನೇಷನ್​ ಇಷ್ಟ ಆಗುತ್ತದೆ.
  9. ಸಿನಿಮಾದ ಬಹುತೇಕ ದೃಶ್ಯಗಳನ್ನು ಕತ್ತಲ ವಾತಾವರಣದಲ್ಲಿ ಸೆರೆ ಹಿಡಿಯಲಾಗಿದೆ. ಇದು ಪ್ರೇಕ್ಷಕರಿಗೆ ಡಿಫರೆಂಟ್​ ಫೀಲ್​ ನೀಡುತ್ತದೆ.
  10. ಫಸ್ಟ್​ ಹಾಫ್​ ಕೊನೆಯಲ್ಲಿ ಒಂದು ಸಸ್ಪೆನ್ಸ್​ ನೀಡಲಾಗಿದೆ. ಅದನ್ನು ನೋಡಿದಾಗ ಪ್ರೇಕ್ಷಕರು ಥ್ರಿಲ್​ ಆಗುವುದು ಗ್ಯಾರಂಟಿ.