AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀತಾ ಮಹಾಲಕ್ಷ್ಮಿಯ ನೆನಪಿನಲ್ಲಿ ರಾಮ್​; ಹೇಗಿದೆ ಮೃಣಾಲ್​ ಠಾಕೂರ್​-ದುಲ್ಕರ್​ ಸಲ್ಮಾನ್​ ನಡುವಿನ ಬಾಂಧವ್ಯ?

Mrunal Thakur Birthday: ‘ಸೀತಾ ರಾಮಂ’ ಚಿತ್ರದಲ್ಲಿ ದುಲ್ಕರ್​ ಸಲ್ಮಾನ್​ ಮತ್ತು ಮೃಣಾಲ್​ ಠಾಕೂರ್​ ನಡುವಿನ ಕಾಂಬಿನೇಷನ್​ ನೋಡಿ ಜನರು ಫಿದಾ ಆದರು. ರಿಯಲ್​ ಲೈಫ್​ನಲ್ಲಿಯೂ ಇಬ್ಬರ ನಡುವೆ ಬಾಂಧವ್ಯ ಇದೆ.

ಸೀತಾ ಮಹಾಲಕ್ಷ್ಮಿಯ ನೆನಪಿನಲ್ಲಿ ರಾಮ್​; ಹೇಗಿದೆ ಮೃಣಾಲ್​ ಠಾಕೂರ್​-ದುಲ್ಕರ್​ ಸಲ್ಮಾನ್​ ನಡುವಿನ ಬಾಂಧವ್ಯ?
ದುಲ್ಕರ್​ ಸಲ್ಮಾನ್​, ಮೃಣಾಲ್​ ಠಾಕೂರ್​
ಮದನ್​ ಕುಮಾರ್​
|

Updated on: Aug 01, 2023 | 7:10 PM

Share

ಖ್ಯಾತ ನಟಿ ಮೃಣಾಲ್​ ಠಾಕೂರ್ (Mrunal Thakur)​ ಅವರು ಇಂದು (ಆಗಸ್ಟ್​ 1) ಜನ್ಮದಿನ ಆಚರಿಸಿಕೊಂಡಿದ್ದಾರೆ. ಬಾಲಿವುಡ್​ ಮಾತ್ರವಲ್ಲದೇ ದಕ್ಷಿಣ ಭಾರತದಲ್ಲೂ ಫೇಮಸ್​ ಆಗಿರುವ ಅವರಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ. ಅಭಿಮಾನಿಗಳು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಮೃಣಾಲ್​ ಠಾಕೂರ್​ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಆ ಪೈಕಿ ಹೆಚ್ಚು ಗಮನ ಸೆಳೆದಿರುವುದು ನಟ ದುಲ್ಕರ್​ ಸಲ್ಮಾನ್​ ಅವರ ವಿಶ್​. ‘ಸೀತಾ ರಾಮಂ’ (Sita Ramam) ಸಿನಿಮಾದಲ್ಲಿ ಮೃಣಾಲ್​ ಠಾಕೂರ್​ ಮತ್ತು ದುಲ್ಕರ್​ ಸಲ್ಮಾನ್​ ಅವರು ಜೋಡಿಯಾಗಿ ನಟಿಸಿದ್ದರು. ಆ ಚಿತ್ರದ ಬಳಿಕ ಇಬ್ಬರ ನಡುವೆ ಸ್ನೇಹ ಹೆಚ್ಚಾಯಿತು. ಇಂದು ಮೃಣಾಲ್​ ಠಾಕೂರ್​ ಅವರ ಜನ್ಮದಿನದ ಪ್ರಯುಕ್ತ ದುಲ್ಕರ್​ ಸಲ್ಮಾನ್​ (Dulquer Salmaan) ವಿಶೇಷವಾಗಿ ವಿಶ್​ ಮಾಡಿದ್ದಾರೆ.

‘ಸೀತಾ ರಾಮಂ’ ಸಿನಿಮಾ 2022ರಲ್ಲಿ ಬಿಡುಗಡೆಯಾಗಿ ಸೂಪರ್​ ಹಿಟ್​ ಆಯಿತು. ಒಟಿಟಿಯಲ್ಲಿ ಬಿಡುಗಡೆ ಆದಾಗಲೂ ಜನರಿಂದ ಅಪಾರ ಮೆಚ್ಚುಗೆ ವ್ಯಕ್ತವಾಯಿತು. ಆ ಸಿನಿಮಾದಲ್ಲಿ ಮೃಣಾಲ್​ ಠಾಕೂರ್​ ಅವರು ಸೀತಾ ಮಹಾಲಕ್ಷ್ಮಿ ಅಲಿಯಾಸ್​ ಪ್ರಿನ್ಸಸ್​ ನೂರ್​ ಜಹಾನ್​ ಎಂಬ ಪಾತ್ರ ಮಾಡಿದರು. ರಾಮ್​ ಎಂಬ ಸೈನಿಕನ ಪಾತ್ರದಲ್ಲಿ ದುಲ್ಕರ್​ ಸಲ್ಮಾನ್​ ಕಾಣಿಸಿಕೊಂಡರು. ಇಬ್ಬರ ಕಾಂಬಿನೇಷನ್​ ನೋಡಿ ಜನರು ಫಿದಾ ಆದರು. ರಿಯಲ್​ ಲೈಫ್​ನಲ್ಲಿಯೂ ದುಲ್ಕರ್​ ಸಲ್ಮಾನ್​ ಮತ್ತು ಮೃಣಾಲ್​ ಠಾಕೂರ್​ ಅವರ ನಡುವೆ ಬಾಂಧವ್ಯ ಇದೆ.

ಇದನ್ನೂ ಓದಿ: ದುಲ್ಕರ್ ಸಲ್ಮಾನ್ ಮನಸ್ಸಲ್ಲಿ ಹೇಳಿಕೊಳ್ಳಲಾಗದ ಸಂಕಟ; ಕಣ್ಣೀರು ಹಾಕುತ್ತಿರುವ ವಿಡಿಯೋ ಪೋಸ್ಟ್ ಮಾಡಿ, ಡಿಲೀಟ್ ಮಾಡಿದ ನಟ  

‘ನಿಮಗೆ ಹುಟ್ಟುಹಬ್ಬದ ಶುಭಾಶಯಗಳು. ಈ ವರ್ಷ ನಿಮಗೆ ಅದ್ಭುತವಾಗಿತ್ತು ಎಂದು ಭಾವಿಸಿದ್ದೇನೆ. ನಿಮ್ಮ ಎಲ್ಲ ಸಿನಿಮಾಗಳನ್ನು ನೋಡಲು ಕಾದಿದ್ದೇನೆ. ನೀವು ಇಲ್ಲದೇ ಇದ್ದಿದ್ದರೆ ಸೀತಾ ರಾಮಂ ಸಿನಿಮಾ ಮತ್ತು ಅದರ ಅನುಭವ ಈ ರೀತಿಯಾಗಿ ಇರುತ್ತಿರಲಿಲ್ಲ. ನಮ್ಮ ನಡುವೆ ಇರುವ ಶ್ರೇಷ್ಠವಾದ ಸ್ನೇಹ ಮತ್ತು ನೆನಪುಗಳಿಗಾಗಿ ಧನ್ಯವಾದಗಳು’ ಎಂದು ದುಲ್ಕರ್​ ಸಲ್ಮಾನ್​ ಅವರು ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ಮೃಣಾಲ್​ ಠಾಕೂರ್​ಗೆ ಜನ್ಮದಿನದ ಶುಭ ಕೋರಿದ್ದಾರೆ.

ಇದನ್ನೂ ಓದಿ: Dulquer Salmaan: ದುಲ್ಕರ್​ ಸಲ್ಮಾನ್​ ಬಗ್ಗೆ ಬಂದಿತ್ತು ಕೆಟ್ಟ ವಿಮರ್ಶೆ; ‘ಸೀತಾ ರಾಮಂ’ ನಟನ ಆ ನೋವಿನ ದಿನಗಳು ಹೇಗಿತ್ತು?

ಹಿಂದಿ ಕಿರುತೆರೆಯಿಂದ ಬಂದು, ನಂತರ ಬಾಲಿವುಡ್​ನಲ್ಲೂ ಮಿಂಚಿದ ಮೃಣಾಲ್​ ಠಾಕೂರ್​ ಅವರಿಗೆ ಈಗ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ‘ಸೀತಾ ರಾಮಂ’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ದಕ್ಷಿಣ ಭಾರತದಲ್ಲಿ ಅವರಿಗೆ ಬೇಡಿಕೆ ಹೆಚ್ಚಾಗಿದೆ. ನಾನಿ ನಟನೆಯ ‘ಹಾಯ್​ ನಾನ್ನ’ ಮತ್ತು ವಿಜಯ್​ ದೇವರಕೊಂಡ ನಟನೆಯ ಹೊಸ ಸಿನಿಮಾಗೆ ಮೃಣಾಲ್​ ಠಾಕೂರ್​ ಅವರು ನಾಯಕಿ ಆಗಿದ್ದಾರೆ. ಇನ್ನೂ ಅನೇಕ ಅವಕಾಶಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಈ ವರ್ಷ ಅವರು ನಟಿಸಿದ ‘ಲಸ್ಟ್​ ಸ್ಟೋರೀಸ್​ 2’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗಿ ಗಮನ ಸೆಳೆದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್