AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನುಶ್ ಹುಟ್ಟೂರಿನ ವಿಷಯ ಬರುತ್ತಿದ್ದಂತೆ ನಾಚಿ ನೀರಾದ ಮೃಣಾಲ್ ಠಾಕೂರ್

ಧನುಶ್ ಹುಟ್ಟೂರು ಚೆನ್ನೈ ವಿಷಯ ಪ್ರಸ್ತಾಪವಾಗುತ್ತಿದ್ದಂತೆ ನಟಿ ಮೃಣಾಲ್ ಠಾಕೂರ್ ನಾಚಿ ನೀರಾದರು. ಇತ್ತೀಚೆಗೆ ಧನುಶ್ ಜೊತೆಗಿನ ಮದುವೆ ವದಂತಿಗಳ ಹಿನ್ನೆಲೆಯಲ್ಲಿ ಈ ಪ್ರತಿಕ್ರಿಯೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿದ್ಧಾಂತ್ ಚತುರ್ವೇದಿ ಅವರೊಂದಿಗೆ ಸಿನಿಮಾ ಪ್ರಚಾರಕ್ಕೆ ಬಂದಿದ್ದ ವೇಳೆ ಈ ಘಟನೆ ನಡೆಯಿತು.

ಧನುಶ್ ಹುಟ್ಟೂರಿನ ವಿಷಯ ಬರುತ್ತಿದ್ದಂತೆ ನಾಚಿ ನೀರಾದ ಮೃಣಾಲ್ ಠಾಕೂರ್
ಧನುಶ್-ಮೃಣಾಲ್ ಹಾಗೂ ಸಿದ್ದಾಂತ್
ರಾಜೇಶ್ ದುಗ್ಗುಮನೆ
|

Updated on: Feb 05, 2026 | 12:34 PM

Share

ಮೃಣಾಲ್ ಠಾಕೂರ್ ಹಾಗೂ ಧನುಶ್ (Dhanush) ವಿವಾಹ ಆಗುತ್ತಾರೆ ಎಂಬ ಸುದ್ದಿ ಇತ್ತೀಚೆಗೆ ಜೋರಾಗಿದೆ. ಆದರೆ, ಇದಕ್ಕೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಕೆಲವರು ಇದನ್ನು ಫೇಕ್ ಸುದ್ದಿ ಎನ್ನುತ್ತಿದ್ದಾರೆ. ಹೀಗಿರುವಾಗಲೇ ಮೃಣಾಲ್ ಠಾಕೂರ್ ಅವರಿಗೆ ಧನುಶ್ ಹುಟ್ಟೂರಾದ ಚೆನ್ನೈ ವಿಷಯ ಚರ್ಚೆಗೆ ಬಂದಿದೆ. ಆ ಬಳಿಕ ಮೃಣಾಲ್ ಠಾಕೂರ್ ಅವರು ಅಕ್ಷರಶಃ ನಾಚಿ ನೀರಾಗಿದ್ದಾರೆ. ಅಷ್ಟಕ್ಕೂ ವೇದಿಕೆ ಮೇಲೆ ನಡೆದಿದ್ದು ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಮೃಣಾಲ್ ಠಾಕೂರ್ ಅವರು ‘ದೋ ದೀವಾನೆ ಸೆಹೆರ್ ಮೇ’ ಚಿತ್ರದಲ್ಲಿ ನಟಿಸಿದ್ದಾರೆ. ಇದು ಹಿಂದಿ ಸಿನಿಮಾ. ಈ ಚಿತ್ರದಲ್ಲಿ ಸಿದ್ದಾಂತ್ ಚತುರ್ವೇದಿ ನಟಿಸಿದ್ದಾರೆ. ಇಬ್ಬರೂ ಸಿನಿಮಾ ಪ್ರಚಾರ ಮಾಡಲು ವೇದಿಕೆ ಏರಿದ್ದರು. ಆಗ ಅಲ್ಲಿರುವವರು ‘ಚೆನ್ನೈ ವ್ಯಕ್ತಿ ನಿಮಗೆ ಪ್ರಶ್ನೆ ಕೇಳುತ್ತಿದ್ದರು’ ಎಂದು ಹೇಳಿದರು. ಸಿದ್ದಾಂತ್ ತಕ್ಷಣವೇ ಮೃಣಾಲ್ ಕಾಲೆಳೆದರು.

‘ಚೆನ್ನೈ ವ್ಯಕ್ತಿಯ ಪ್ರಶ್ನೆ ನನಗೋ ಅಥವಾ ಮೃಣಾಲ್​​​ಗೋ’ ಎಂದು ಸಿದ್ದಾಂತ್ ಕೇಳಿದರು. ಈ ವೇಳೆ ಮೃಣಾಲ್ ಅವರು, ‘ನಿಮಗೆ’ ಎಂದರು. ಆಗ ಮೃಣಾಲ್ ಹಾಗೂ ಸಿದ್ಧಾಂತ್ ಇಬ್ಬರೂ ನಕ್ಕರು. ವರದಿಗಾರರು, ‘ನಮಗೆ ಅರ್ಥವಾಯಿತು’ ಎಂದರು.

ಧನುಶ್ ಹುಟ್ಟೂರು ಚೆನ್ನೈ. ಅವರು ಈಗ ಅಲ್ಲಿಯೇ ವಾಸವಾಗಿದ್ದಾರೆ. ಧನುಶ್ ಹಾಗೂ ಮೃಣಾಲ್ ಮದುವೆ ಆಗುತ್ತಾರೆ ಎಂಬ ಮಾತು ಜೋರಾಗಿದೆ. ‘ಸನ್ ಆಫ್ ಸರ್ದಾರ್ 2’ ಪ್ರೀಮಿಯರ್ ವೇಳೆ ಧನುಶ್ ಹಾಗೂ ಮೃಣಾಲ್ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇದು ಕೂಡ ಚರ್ಚೆಯ ಕೇಂದ್ರ ಬಿಂದು ಆಗಿತ್ತು.

ಇದನ್ನೂ ಓದಿ: ಕದ್ದುಮುಚ್ಚಿ ಶಾಸ್ತ್ರೋಕ್ತವಾಗಿ ಮದುವೆ ಆದ್ರಾ ಧನುಶ್-ಮೃಣಾಲ್ ಠಾಕೂರ್?

ಧನುಶ್ ಅವರು ಈ ಮೊದಲು ಐಶ್ವರ್ಯಾ ರಜನಿಕಾಂತ್​​​ನ ವಿವಾಹ ಆಗಿದ್ದರು. ಆ ಬಳಿಕ ಇವರು ವಿಚ್ಛೇದನ ಪಡೆದರು. ಈಗ ಮಗನ ಸಾಕೋ ಜವಾಬ್ದಾರಿ ಇಬ್ಬರ ಮೇಲೂ ಇದೆ. ಹೀಗಾಗಿ, ಎರಡನೇ ಮದುವೆ ಆದರೆ ಮಕ್ಕಳಿಗೆ ತೊಂದರೆ ಆಗುತ್ತದೆ ಎಂಬುದು ಧನುಶ್ ಆಲೋಚನೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ಅವರು ಎರಡನೇ ಮದುವೆ ಆಗಲು ಸಿದ್ಧರಿಲ್ಲ ಎಂಬ ವರದಿಗಳೂ ಇವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!