AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಪ್ಪು ತಿಳೀಬೇಡಿ’; ಧನುಶ್ ಜೊತೆಗಿನ ಡೇಟಿಂಗ್ ವಿಚಾರಕ್ಕೆ ಮೃಣಾಲ್ ಠಾಕೂರ್ ಸ್ಪಷ್ಟನೆ

ಇತ್ತೀಚೆಗೆ ಧನುಷ್ ಮತ್ತು ಮೃಣಾಲ್ ಠಾಕೂರ್ ಅವರ ನಡುವಿನ ಡೇಟಿಂಗ್ ವದಂತಿಗಳು ಹಬ್ಬಿದ್ದವು. ಆದರೆ, ಈ ವದಂತಿಗಳನ್ನು ಮೃಣಾಲ್ ಠಾಕೂರ್ ಅವರು ನಿರಾಕರಿಸಿದ್ದಾರೆ. ಧನುಶ್ ಉತ್ತಮ ಗೆಳೆಯ ಎಂದು ಹೇಳಿದ್ದಾರೆ. 'ಸನ್ ಆಫ್ ಸರ್ದಾರ್ 2' ಚಿತ್ರದ ಈವೆಂಟ್‌ನಲ್ಲಿ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದರು. ಇದು ಚರ್ಚೆಗೆ ಕಾರಣ ಆಗಿತ್ತು.

‘ತಪ್ಪು ತಿಳೀಬೇಡಿ’; ಧನುಶ್ ಜೊತೆಗಿನ ಡೇಟಿಂಗ್ ವಿಚಾರಕ್ಕೆ ಮೃಣಾಲ್ ಠಾಕೂರ್ ಸ್ಪಷ್ಟನೆ
ಧನುಶ್-ಮೃಣಾಲ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 12, 2025 | 10:38 AM

Share

ಮೃಣಾಲ್ ಠಾಕೂರ್ ಅವರು ಹಲವು ಭಾಷೆಗಳಲ್ಲಿ ನಟಿಸಿ ಫೇಮಸ್ ಆದವರು. ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಕಾಲಿವುಡ್ ನಟ ಧನುಶ್ ಜೊತೆ ಸುತ್ತಾಟ ಮಾಡುತ್ತಿದ್ದಾರೆ ಎನ್ನುವ ಸುದ್ದಿಯು ಇತ್ತೀಚೆಗೆ ಸಾಕಷ್ಟು ಹರಿದಾಡಿತ್ತು ಮತ್ತು ಅನೇಕರು ಇದನ್ನು ನಂಬಿದ್ದರು. ಈ ವಿಚಾರವಾಗಿ ಮೃಣಾಲ್ ಠಾಕೂರ್ (Mrunal Thakur) ಅವರು ಸ್ಪಷ್ಟನೆ ನೀಡಿದ್ದಾರೆ. ಸಂದರ್ಶನ ಒಂದರಲ್ಲಿ ಮಾತನಾಡುವಾಗ ಈ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ.

ನಟ-ನಟಿಯರು ಒಟ್ಟಿಗೆ ಕಾಣಿಸಿಕೊಂಡರೆ ಡೇಟಿಂಗ್ ವಿಚಾರವು ಹುಟ್ಟಿಕೊಳ್ಳುತ್ತದೆ. ಇದು ಚಿತ್ರರಂಗಕ್ಕೆ ಹೊಸದೇನು ಅಲ್ಲ. ಈ ಮೊದಲು ಅನೇಕ ನಟ-ನಟಿಯರ ಹೆಸರು ಈ ರೀತಿಯಲ್ಲಿ ತಳುಕು ಹಾಕಿಕೊಂಡಿತ್ತು. ಕೆಲವು ನಿಜವಾದಲ್ಲಿ, ಕೆಲವು ಸುಳ್ಳಾಗಿದೆ. ಈಗ ಮೃಣಾಲ್ ಠಾಕೂರ್​ಗೂ ಇದೇ ರೀತಿಯಲ್ಲಿ ತೊಂದರೆ ಉಂಟಾಗಿತ್ತು.

ಧನುಶ್ ಹಾಗೂ ಮೃಣಾಲ್ ಈವರೆಗೆ ಒಂದೇ ಸಿನಿಮಾದಲ್ಲಿ ನಟಿಸಿಲ್ಲ. ಆದಾಗ್ಯೂ ಇವರು ಕೆಲವು ಕಡೆ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ವಿಚಾರವು ಮೃಣಾಲ್ ಗಮನಕ್ಕೂ ಬಂದಿದೆ. ‘ನಾನು ಹಾಗೂ ಧನುಶ್ ಒಳ್ಳೆಯ ಗೆಳೆಯರಷ್ಟೇ’ ಎಂದು ನೇರ ಮಾತುಗಳಲ್ಲಿ ಹೇಳಿದರು. ಇದರ ಜೊತೆಗೆ ಒಂದು ವಿಚಾರಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ
Image
21ನೇ ವಯಸ್ಸಿಗೆ ಮದುವೆ ಆದ ಸ್ಟಾರ್ ನಟಿ; ಆ ಹೀರೋಯಿನ್ ಬಗ್ಗೆ ಇಲ್ಲಿದೆ ವಿವರ
Image
‘ಸು ಫ್ರಮ್ ಸೋ’ಗೆ 3ನೇ ಸೋಮವಾರವೂ ತಗ್ಗದ ಕಲೆಕ್ಷನ್; 100 ಕೋಟಿ ಕ್ಲಬ್ ಪಕ್ಕಾ
Image
ಗೇಲ್ ಜೊತೆ ಚಂದನ್ ಶೆಟ್ಟಿ ವಿಡಿಯೋ ಸಾಂಗ್; ಕನ್ನಡ ಹಾಡಿಗೆ ಎಗ್ಸೈಟ್ ಆದ್ರು
Image
‘ಕಾಟೇರ’ ಕಲೆಕ್ಷನ್​ ದಾಖಲೆ ಮುರಿಯಲು ‘ಸು ಫ್ರಮ್ ಸೋ’ಗೆ ಬೇಕು ಕೆಲವೇ ಕೋಟಿ

‘ಸನ್ ಆಫ್ ಸರ್ದಾರ್ 2’ ಕಾರ್ಯಕ್ರಮಕ್ಕೆ ಧನುಶ್ ಆಗಮಿಸಿದ್ದರು ಮತ್ತು ಮೃಣಾಲ್ ಜೊತೆ ಆಪ್ತವಾಗಿದ್ದರು. ಅವರೇ ಧನುಶ್ ಅವರನ್ನು ಆಮಂತ್ರಿಸಿದ್ದರು ಎಂದು ಹೇಳಲಾಗಿತ್ತು. ಆದರೆ, ಆ ರೀತಿ ಇಲ್ಲ. ‘ಧನುಶ್ ಸನ್ ಆಫ್ ಸರ್ದಾರ್ 2 ಚಿತ್ರದ ಈವೆಂಟ್​ನಲ್ಲಿ ಭಾಗವಹಿಸಿದ್ದರು. ಇದನ್ನು ಯಾರೂ ತಪ್ಪಾಗಿ ಭಾವಿಸಬಾರದು. ಅಜಯ್ ದೇವಗನ್ ಅವರು ಧನುಶ್​ನ ಆಮಂತ್ರಿಸಿದ್ದು’ ಎಂದು  ಹೇಳಿದ್ದಾರೆ.

ಇದನ್ನೂ ಓದಿ: ಧನುಷ್ ಜೊತೆ ಮೃಣಾಲ್ ಠಾಕೂರ್ ಸುತ್ತಾಟ? ಇಂಡಸ್ಟ್ರಿಯಲ್ಲಿ ಹೊಸ ಜೋಡಿ

ಧನುಶ್ ಹಾಗೂ ರಜನಿಕಾಂತ್ ಮಗಳು ಐಶ್ವರ್ಯಾ ವಿವಾಹ ಆಗಿದ್ದರು. ಹಲವು ವರ್ಷಗಳ ಬಳಿಕ ಇವರ ಸಂಬಂಧ ಕೊನೆ ಆಯಿತು. ಈ ದಂಪತಿ ಈಗ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದಾರೆ. ಈ ಬೆನ್ನಲ್ಲೇ ಧನುಶ್ ಅವರು ಮೃಣಾಲ್ ಜೊತೆ ಕಾಣಿಸಿಕೊಂಡಿದ್ದರಿಂದ ಸಾಕಷ್ಟು ಚರ್ಚೆಗಳು ಹುಟ್ಟಿಕೊಂಡವು. ಇವರು ವಿವಾಹ ಆಗುತ್ತಿದ್ದಾರೆ ಎಂದು ಕೂಡ ಹೇಳಲಾಗಿತ್ತು. ಈಗ ಮೃಣಾಲ್ ಅವರೇ ಈ ವಿಚಾರದಲ್ಲಿ ಸ್ಪಷ್ಟನೆ ಕೊಟ್ಟಂತೆ ಆಗಿದೆ. ಇನ್ನು, ಮುಂದಾದರೂ ಈ ವದಂತಿ ಹಬ್ಬೋದು ನಿಲ್ಲುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!