AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟ್ಲಿ ಸಿನಿಮಾದಲ್ಲಿ ಅಲ್ಲು ಅರ್ಜುನ್​ಗೆ ಜೋಡಿ ಆಗ್ತಾರಾ ಮೃಣಾಲ್ ಠಾಕೂರ್?

ನಟ ಅಲ್ಲು ಅರ್ಜುನ್ ಅವರು ಅಟ್ಲಿ ಜೊತೆ ಮಾಡುತ್ತಿರುವ ಸಿನಿಮಾ ಬಗ್ಗೆ ಹಲವು ಇಂಟರೆಸ್ಟಿಂಗ್ ವಿಷಯಗಳು ಕೇಳಿಬರುತ್ತಿವೆ. ಈ ಚಿತ್ರಕ್ಕೆ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಬಾಲಿವುಡ್ ನಟಿ ಮೃಣಾಲ್ ಠಾಕೂರ್ ಅವರನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಅಟ್ಲಿ ಸಿನಿಮಾದಲ್ಲಿ ಅಲ್ಲು ಅರ್ಜುನ್​ಗೆ ಜೋಡಿ ಆಗ್ತಾರಾ ಮೃಣಾಲ್ ಠಾಕೂರ್?
Mrunal Thakur, Allu Arjun
ಮದನ್​ ಕುಮಾರ್​
|

Updated on: Apr 25, 2025 | 10:33 PM

Share

ನಿರ್ದೇಶಕ ಅಟ್ಲಿ (Atlee) ಮತ್ತು ನಟ ಅಲ್ಲು ಅರ್ಜುನ್ ಅವರು ಜೊತೆಯಾಗಿ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಮೂಡಿದೆ. ಯಾಕೆಂದರೆ, ಇದು ಪವರ್​ಫುಲ್ ಕಾಂಬಿನೇಷನ್​. ‘ಪುಷ್ಪ 2’ ಸಿನಿಮಾದ ಗ್ರ್ಯಾಂಡ್ ಸಕ್ಸಸ್ ಬಳಿಕ ಅಲ್ಲು ಅರ್ಜುನ್ (Allu Arjun) ಅವರು ಈ ಹೊಸ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈಗಾಗಲೇ ಈ ಚಿತ್ರದ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ಈಗ ಪಾತ್ರವರ್ಗದ ಬಗ್ಗೆ ಕೆಲವು ಗಾಸಿಪ್ ಕೇಳಿಬರುತ್ತಿವೆ. ವರದಿಗಳ ಪ್ರಕಾರ, ಬಾಲಿವುಡ್ ನಟಿ ಮೃಣಾಲ್ ಠಾಕೂರ್ (Mrunal Thakur) ಅವರು ಈ ಸಿನಿಮಾಗೆ ಹೀರೋಯಿನ್ ಆಗಲಿದ್ದಾರೆ.

ಹಿಂದಿ ಚಿತ್ರರಂಗದಲ್ಲಿ ಮೃಣಾಲ್ ಠಾಕೂರ್ ಅವರು ಹೆಸರು ಮಾಡಿದ್ದಾರೆ. ಅಲ್ಲದೇ ತೆಲುಗು ಚಿತ್ರರಂಗದಲ್ಲಿ ಕೂಡ ಅವರು ಖ್ಯಾತಿ ಗಳಿಸಿದ್ದಾರೆ. ಟಾಲಿವುಡ್​ನಲ್ಲಿ ಅವರು ನಟಿಸಿದ ‘ಸೀತಾ ರಾಮಂ’, ‘ಹಾಯ್ ನಾನ್ನ’ ಸಿನಿಮಾಗಳು ಸೂಪರ್ ಹಿಟ್ ಆಗಿವೆ. ಈಗ ಅವರನ್ನು ಅಲ್ಲು ಅರ್ಜುನ್ ನಟನೆಯ ಹೊಸ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.

ಈ ಬೆಳವಣಿಗೆ ಬಗ್ಗೆ ಚಿತ್ರತಂಡದಿಂದ ಇನ್ನೂ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಮೃಣಾಲ್ ಠಾಕೂರ್ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಇರುವುದರಿಂದ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಿಕೊಂಡಿದ್ದರೆ ಅಚ್ಚರಿ ಏನಿಲ್ಲ. ಸದ್ಯ ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ
Image
ಹೆಸರು ಬದಲಾವಣೆ ಮಾಡಿಕೊಳ್ಳಲಿರುವ ಅಲ್ಲು ಅರ್ಜುನ್, ಕಾರಣವೇನು?
Image
ಚಿತ್ರರಂಗದಲ್ಲಿ 22 ವರ್ಷ ಪೂರೈಸಿದ ಅಲ್ಲು ಅರ್ಜುನ್; ಮುಂದಿದೆ ದೊಡ್ಡ ಸವಾಲು
Image
‘ಪುಷ್ಪ 3’ ಚಿತ್ರಕ್ಕಾಗಿ ಎಷ್ಟು ವರ್ಷ ಕಾಯಬೇಕು? ಮಾಹಿತಿ ಕೊಟ್ಟ ನಿರ್ಮಾಪಕ
Image
ನಿರ್ಮಾಪಕರ ಜೊತೆ ಕಿರಿಕ್; ಸಲ್ಲುಗೆ ಮಾಡಬೇಕಿದ್ದ ಸಿನಿಮಾನ ಅಲ್ಲುಗೆ ಶಿಫ್ಟ್

ಅಟ್ಲಿ-ಅಲ್ಲು ಅರ್ಜುನ್ ಕಾಂಬಿನೇಷನ್​ನ ಸಿನಿಮಾ ಬಗ್ಗೆ ಇನ್ನೊಂದು ಇಂಟರೆಸ್ಟಿಂಗ್ ಗಾಸಿಪ್ ಕೇಳಿಬಂದಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರು ತ್ರಿಬಲ್ ರೋಲ್ ಮಾಡಲಿದ್ದಾರೆ ಎನ್ನಲಾಗಿದೆ. ತಂದೆ ಹಾಗೂ ಇಬ್ಬರು ಮಕ್ಕಳ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಇದನ್ನೂ ಓದಿ: ಅಲ್ಲು ಅರ್ಜುನ್ ಮನೆ ಎದುರು ಅಭಿಮಾನಿಗಳ ದಂಡು; ಎಚ್ಚರಿಕೆಯಿಂದ ನಡೆದುಕೊಂಡ ನಟ

ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಲಿದೆ. ಮುಂಬೈ ಮತ್ತು ಚೆನ್ನೈನಲ್ಲಿ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಕೆಲವೇ ದಿನಗಳ ಹಿಂದೆ ಮುಂಬೈನಲ್ಲಿ ಅಲ್ಲು ಅರ್ಜುನ್ ಅವರ ಲುಕ್ ಟೆಸ್ಟ್ ಕೂಡ ಮಾಡಲಾಗಿದೆ. ‘ಸನ್ ಪಿಕ್ಚರ್ಸ್’ ಸಂಸ್ಥೆಯು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ.

​ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?