AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟ್ಲಿ ಸಿನಿಮಾದಲ್ಲಿ ಅಲ್ಲು ಅರ್ಜುನ್​ಗೆ ಜೋಡಿ ಆಗ್ತಾರಾ ಮೃಣಾಲ್ ಠಾಕೂರ್?

ನಟ ಅಲ್ಲು ಅರ್ಜುನ್ ಅವರು ಅಟ್ಲಿ ಜೊತೆ ಮಾಡುತ್ತಿರುವ ಸಿನಿಮಾ ಬಗ್ಗೆ ಹಲವು ಇಂಟರೆಸ್ಟಿಂಗ್ ವಿಷಯಗಳು ಕೇಳಿಬರುತ್ತಿವೆ. ಈ ಚಿತ್ರಕ್ಕೆ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಬಾಲಿವುಡ್ ನಟಿ ಮೃಣಾಲ್ ಠಾಕೂರ್ ಅವರನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಅಟ್ಲಿ ಸಿನಿಮಾದಲ್ಲಿ ಅಲ್ಲು ಅರ್ಜುನ್​ಗೆ ಜೋಡಿ ಆಗ್ತಾರಾ ಮೃಣಾಲ್ ಠಾಕೂರ್?
Mrunal Thakur, Allu Arjun
ಮದನ್​ ಕುಮಾರ್​
|

Updated on: Apr 25, 2025 | 10:33 PM

Share

ನಿರ್ದೇಶಕ ಅಟ್ಲಿ (Atlee) ಮತ್ತು ನಟ ಅಲ್ಲು ಅರ್ಜುನ್ ಅವರು ಜೊತೆಯಾಗಿ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಮೂಡಿದೆ. ಯಾಕೆಂದರೆ, ಇದು ಪವರ್​ಫುಲ್ ಕಾಂಬಿನೇಷನ್​. ‘ಪುಷ್ಪ 2’ ಸಿನಿಮಾದ ಗ್ರ್ಯಾಂಡ್ ಸಕ್ಸಸ್ ಬಳಿಕ ಅಲ್ಲು ಅರ್ಜುನ್ (Allu Arjun) ಅವರು ಈ ಹೊಸ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈಗಾಗಲೇ ಈ ಚಿತ್ರದ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ಈಗ ಪಾತ್ರವರ್ಗದ ಬಗ್ಗೆ ಕೆಲವು ಗಾಸಿಪ್ ಕೇಳಿಬರುತ್ತಿವೆ. ವರದಿಗಳ ಪ್ರಕಾರ, ಬಾಲಿವುಡ್ ನಟಿ ಮೃಣಾಲ್ ಠಾಕೂರ್ (Mrunal Thakur) ಅವರು ಈ ಸಿನಿಮಾಗೆ ಹೀರೋಯಿನ್ ಆಗಲಿದ್ದಾರೆ.

ಹಿಂದಿ ಚಿತ್ರರಂಗದಲ್ಲಿ ಮೃಣಾಲ್ ಠಾಕೂರ್ ಅವರು ಹೆಸರು ಮಾಡಿದ್ದಾರೆ. ಅಲ್ಲದೇ ತೆಲುಗು ಚಿತ್ರರಂಗದಲ್ಲಿ ಕೂಡ ಅವರು ಖ್ಯಾತಿ ಗಳಿಸಿದ್ದಾರೆ. ಟಾಲಿವುಡ್​ನಲ್ಲಿ ಅವರು ನಟಿಸಿದ ‘ಸೀತಾ ರಾಮಂ’, ‘ಹಾಯ್ ನಾನ್ನ’ ಸಿನಿಮಾಗಳು ಸೂಪರ್ ಹಿಟ್ ಆಗಿವೆ. ಈಗ ಅವರನ್ನು ಅಲ್ಲು ಅರ್ಜುನ್ ನಟನೆಯ ಹೊಸ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.

ಈ ಬೆಳವಣಿಗೆ ಬಗ್ಗೆ ಚಿತ್ರತಂಡದಿಂದ ಇನ್ನೂ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಮೃಣಾಲ್ ಠಾಕೂರ್ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಇರುವುದರಿಂದ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಿಕೊಂಡಿದ್ದರೆ ಅಚ್ಚರಿ ಏನಿಲ್ಲ. ಸದ್ಯ ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ
Image
ಹೆಸರು ಬದಲಾವಣೆ ಮಾಡಿಕೊಳ್ಳಲಿರುವ ಅಲ್ಲು ಅರ್ಜುನ್, ಕಾರಣವೇನು?
Image
ಚಿತ್ರರಂಗದಲ್ಲಿ 22 ವರ್ಷ ಪೂರೈಸಿದ ಅಲ್ಲು ಅರ್ಜುನ್; ಮುಂದಿದೆ ದೊಡ್ಡ ಸವಾಲು
Image
‘ಪುಷ್ಪ 3’ ಚಿತ್ರಕ್ಕಾಗಿ ಎಷ್ಟು ವರ್ಷ ಕಾಯಬೇಕು? ಮಾಹಿತಿ ಕೊಟ್ಟ ನಿರ್ಮಾಪಕ
Image
ನಿರ್ಮಾಪಕರ ಜೊತೆ ಕಿರಿಕ್; ಸಲ್ಲುಗೆ ಮಾಡಬೇಕಿದ್ದ ಸಿನಿಮಾನ ಅಲ್ಲುಗೆ ಶಿಫ್ಟ್

ಅಟ್ಲಿ-ಅಲ್ಲು ಅರ್ಜುನ್ ಕಾಂಬಿನೇಷನ್​ನ ಸಿನಿಮಾ ಬಗ್ಗೆ ಇನ್ನೊಂದು ಇಂಟರೆಸ್ಟಿಂಗ್ ಗಾಸಿಪ್ ಕೇಳಿಬಂದಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರು ತ್ರಿಬಲ್ ರೋಲ್ ಮಾಡಲಿದ್ದಾರೆ ಎನ್ನಲಾಗಿದೆ. ತಂದೆ ಹಾಗೂ ಇಬ್ಬರು ಮಕ್ಕಳ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಇದನ್ನೂ ಓದಿ: ಅಲ್ಲು ಅರ್ಜುನ್ ಮನೆ ಎದುರು ಅಭಿಮಾನಿಗಳ ದಂಡು; ಎಚ್ಚರಿಕೆಯಿಂದ ನಡೆದುಕೊಂಡ ನಟ

ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಲಿದೆ. ಮುಂಬೈ ಮತ್ತು ಚೆನ್ನೈನಲ್ಲಿ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಕೆಲವೇ ದಿನಗಳ ಹಿಂದೆ ಮುಂಬೈನಲ್ಲಿ ಅಲ್ಲು ಅರ್ಜುನ್ ಅವರ ಲುಕ್ ಟೆಸ್ಟ್ ಕೂಡ ಮಾಡಲಾಗಿದೆ. ‘ಸನ್ ಪಿಕ್ಚರ್ಸ್’ ಸಂಸ್ಥೆಯು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ.

​ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು