AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಡೋಕೆ ರೆಡಿ ಆದ ಧೋನಿ; ಮೊದಲ ಸಿನಿಮಾ ಹೀಗಿರಲಿದೆ?

‘ಧೋನಿ ಪತ್ನಿ ಸಾಕ್ಷಿ ಅವರು ಒಂದು ಕಥೆಯ ಪರಿಕಲ್ಪನೆಯನ್ನು ಹೇಳಿದ್ದರು. ಇದು ಧೋನಿಗೆ ಇಷ್ಟವಾಗಿದೆ. ಇದೇ ವಿಚಾರದ ಮೇಲೆ ಸಿನಿಮಾ ಮಾಡಲು ಅವರು ನಿರ್ಧರಿಸಿದ್ದಾರೆ.

ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಡೋಕೆ ರೆಡಿ ಆದ ಧೋನಿ; ಮೊದಲ ಸಿನಿಮಾ ಹೀಗಿರಲಿದೆ?
ಧೋನಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 25, 2022 | 3:57 PM

Share

ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಎಂ.ಎಸ್​. ಧೋನಿ (MS Dhoni) ಅವರು ಐಪಿಎಲ್ ಮಾತ್ರ ಆಡುತ್ತಿದ್ದಾರೆ. ಇದಲ್ಲದೆ, ಅವರು ಹಲವು ಉದ್ಯಮಗಳಲ್ಲಿ ತೊಡಗಿಕೊಂಡಿದ್ದಾರೆ. ಧೋನಿ ಸಿನಿಮಾ ಉದ್ಯಮಕ್ಕೆ ಬರುತ್ತಾರೆ ಎಂಬ ವಿಚಾರ ಈ ಮೊದಲಿನಿಂದಲೇ ಚರ್ಚೆಯಲ್ಲಿ ಇದ್ದ ವಿಚಾರ. ಆದರೆ, ಈ ವಿಷಯ ಇನ್ನೂ ಅಧಿಕೃತವಾಗಿಲ್ಲ. ‘ಧೋನಿ ಎಂಟರ್​ಟೇನ್​ಮೆಂಟ್’ ಮೂಲಕ ಧೋನಿ ಅವರು ಸಿನಿಮಾ ನಿರ್ಮಾಣದಲ್ಲಿ ಬ್ಯುಸಿ ಆಗಲಿದ್ದಾರೆ. ವಿಶೇಷ ಎಂದರೆ, ಪತ್ನಿ ಸಾಕ್ಷಿ ಅವರ ಪರಿಕಲ್ಪನೆಯಲ್ಲಿ ಮೊದಲ ಸಿನಿಮಾ ಮೂಡಿ ಬರುತ್ತಿದೆ ಅನ್ನೋದು ವಿಶೇಷ. ಈ ಬಗ್ಗೆ ಮಾಹಿತಿ ಹೊರಬಿದ್ದಿದೆ.

ಧೋನಿಗೂ ತಮಿಳುನಾಡಿಗೂ ಒಳ್ಳೆಯ ನಂಟಿದೆ. ಇದಕ್ಕೆ ಕಾರಣ ಐಪಿಎಲ್. ಧೋನಿ ಅವರು ಈ ಮೊದಲಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಹೀಗಾಗಿ, ತಮಿಳುನಾಡಿನಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಮೊದಲ ಚಿತ್ರವನ್ನು ತಮಿಳಿನಲ್ಲೇ ರಿಲೀಸ್ ಮಾಡುವ ಆಲೋಚನೆಯಲ್ಲಿ ಅವರಿದ್ದಾರೆ.

ಧೋನಿ ನಿರ್ಮಾಣ ಮಾಡುವ ಮೊದಲ ಸಿನಿಮಾಗೆ ರಮೇಶ್ ತಮಿಳ್​ಮಣಿ ಅವರು ನಿರ್ದೇಶನ ಮಾಡಲಿದ್ದಾರೆ. ಅವರು ಈ ಮೊದಲು ‘ಅಥರ್ವ-ದಿ ಒರ್ಜಿನ್’ ಹೆಸರಿನ ಗ್ರಾಫಿಕ್ ನಾವೆಲ್ ಅನ್ನು ಬರೆದಿದ್ದಾರೆ. ಈ ಚಿತ್ರದಲ್ಲಿ ಯಾರೆಲ್ಲ ನಟಿಸಲಿದ್ದರೆ ಎಂಬ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

‘ಧೋನಿ ಪತ್ನಿ ಸಾಕ್ಷಿ ಅವರು ಒಂದು ಕಥೆಯ ಪರಿಕಲ್ಪನೆಯನ್ನು ಹೇಳಿದ್ದರು. ಇದು ಧೋನಿಗೆ ಇಷ್ಟವಾಗಿದೆ. ಇದೇ ವಿಚಾರದ ಮೇಲೆ ಸಿನಿಮಾ ಮಾಡಲು ಅವರು ನಿರ್ಧರಿಸಿದ್ದಾರೆ. ಫ್ಯಾಮಿಲಿ ಎಂಟರ್​ಟೇನ್​ಮೆಂಟ್ ಮಾದರಿಯಲ್ಲಿ ಈ ಸಿನಿಮಾ ಮೂಡಿ ಬರಲಿದೆ’ ಎಂದು ರಮೇಶ್ ಹೇಳಿರುವುದಾಗಿ ಕೆಲ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: MS Dhoni Entertainment: 3 ಭಾಷೆಗಳಲ್ಲಿ ಚಿತ್ರ ನಿರ್ಮಿಸಲಿದೆ ಧೋನಿ ಎಂಟರ್‌ಟೈನ್‌ಮೆಂಟ್

ಧೋನಿ ಎಂಟರ್​ಟೇನ್​ಮೆಂಟ್ ಎದುರು ನಿಂತು ಧೋನಿ ಪೋಸ್ ನೀಡಿದ್ದ ಫೋಟೋ ಇತ್ತೀಚೆಗೆ ವೈರಲ್ ಆಗಿತ್ತು. ತಮಿಳು ಸಿನಿಮಾ ಮಾತ್ರವಲ್ಲದೆ ಇನ್ನೂ ಹಲವು ನಿರ್ದೇಶಕರ ಜತೆ ಧೋನಿ ಮಾತುಕತೆಯಲ್ಲಿ ಇದ್ದಾರೆ. ಧೋನಿಗೆ ಈ ಮೊದಲಿನಿಂದಲೂ ಸಿನಿಮಾ ಬಗ್ಗೆ ಆಸಕ್ತಿ ಇದೆ. ಕ್ರಿಕೆಟ್​ನಿಂದ ನಿವೃತ್ತಿ ಪಡೆದ ಬಳಿಕ ಅವರು ಈ ಬಗ್ಗೆ ಗಮನಹರಿಸುತ್ತಿದ್ದಾರೆ. ಮೂಲಗಳ ಪ್ರಕಾರ ವೆಬ್​ ಸೀರಿಸ್​ಗಳನ್ನು ನಿರ್ಮಾಣ ಮಾಡುವತ್ತವೂ ಧೋನಿ ಗಮನ ಹರಿಸುತ್ತಿದ್ದಾರೆ ಎನ್ನಲಾಗಿದೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ