AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಡೋಕೆ ರೆಡಿ ಆದ ಧೋನಿ; ಮೊದಲ ಸಿನಿಮಾ ಹೀಗಿರಲಿದೆ?

‘ಧೋನಿ ಪತ್ನಿ ಸಾಕ್ಷಿ ಅವರು ಒಂದು ಕಥೆಯ ಪರಿಕಲ್ಪನೆಯನ್ನು ಹೇಳಿದ್ದರು. ಇದು ಧೋನಿಗೆ ಇಷ್ಟವಾಗಿದೆ. ಇದೇ ವಿಚಾರದ ಮೇಲೆ ಸಿನಿಮಾ ಮಾಡಲು ಅವರು ನಿರ್ಧರಿಸಿದ್ದಾರೆ.

ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಡೋಕೆ ರೆಡಿ ಆದ ಧೋನಿ; ಮೊದಲ ಸಿನಿಮಾ ಹೀಗಿರಲಿದೆ?
ಧೋನಿ
TV9 Web
| Edited By: |

Updated on: Oct 25, 2022 | 3:57 PM

Share

ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಎಂ.ಎಸ್​. ಧೋನಿ (MS Dhoni) ಅವರು ಐಪಿಎಲ್ ಮಾತ್ರ ಆಡುತ್ತಿದ್ದಾರೆ. ಇದಲ್ಲದೆ, ಅವರು ಹಲವು ಉದ್ಯಮಗಳಲ್ಲಿ ತೊಡಗಿಕೊಂಡಿದ್ದಾರೆ. ಧೋನಿ ಸಿನಿಮಾ ಉದ್ಯಮಕ್ಕೆ ಬರುತ್ತಾರೆ ಎಂಬ ವಿಚಾರ ಈ ಮೊದಲಿನಿಂದಲೇ ಚರ್ಚೆಯಲ್ಲಿ ಇದ್ದ ವಿಚಾರ. ಆದರೆ, ಈ ವಿಷಯ ಇನ್ನೂ ಅಧಿಕೃತವಾಗಿಲ್ಲ. ‘ಧೋನಿ ಎಂಟರ್​ಟೇನ್​ಮೆಂಟ್’ ಮೂಲಕ ಧೋನಿ ಅವರು ಸಿನಿಮಾ ನಿರ್ಮಾಣದಲ್ಲಿ ಬ್ಯುಸಿ ಆಗಲಿದ್ದಾರೆ. ವಿಶೇಷ ಎಂದರೆ, ಪತ್ನಿ ಸಾಕ್ಷಿ ಅವರ ಪರಿಕಲ್ಪನೆಯಲ್ಲಿ ಮೊದಲ ಸಿನಿಮಾ ಮೂಡಿ ಬರುತ್ತಿದೆ ಅನ್ನೋದು ವಿಶೇಷ. ಈ ಬಗ್ಗೆ ಮಾಹಿತಿ ಹೊರಬಿದ್ದಿದೆ.

ಧೋನಿಗೂ ತಮಿಳುನಾಡಿಗೂ ಒಳ್ಳೆಯ ನಂಟಿದೆ. ಇದಕ್ಕೆ ಕಾರಣ ಐಪಿಎಲ್. ಧೋನಿ ಅವರು ಈ ಮೊದಲಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಹೀಗಾಗಿ, ತಮಿಳುನಾಡಿನಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಮೊದಲ ಚಿತ್ರವನ್ನು ತಮಿಳಿನಲ್ಲೇ ರಿಲೀಸ್ ಮಾಡುವ ಆಲೋಚನೆಯಲ್ಲಿ ಅವರಿದ್ದಾರೆ.

ಧೋನಿ ನಿರ್ಮಾಣ ಮಾಡುವ ಮೊದಲ ಸಿನಿಮಾಗೆ ರಮೇಶ್ ತಮಿಳ್​ಮಣಿ ಅವರು ನಿರ್ದೇಶನ ಮಾಡಲಿದ್ದಾರೆ. ಅವರು ಈ ಮೊದಲು ‘ಅಥರ್ವ-ದಿ ಒರ್ಜಿನ್’ ಹೆಸರಿನ ಗ್ರಾಫಿಕ್ ನಾವೆಲ್ ಅನ್ನು ಬರೆದಿದ್ದಾರೆ. ಈ ಚಿತ್ರದಲ್ಲಿ ಯಾರೆಲ್ಲ ನಟಿಸಲಿದ್ದರೆ ಎಂಬ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

‘ಧೋನಿ ಪತ್ನಿ ಸಾಕ್ಷಿ ಅವರು ಒಂದು ಕಥೆಯ ಪರಿಕಲ್ಪನೆಯನ್ನು ಹೇಳಿದ್ದರು. ಇದು ಧೋನಿಗೆ ಇಷ್ಟವಾಗಿದೆ. ಇದೇ ವಿಚಾರದ ಮೇಲೆ ಸಿನಿಮಾ ಮಾಡಲು ಅವರು ನಿರ್ಧರಿಸಿದ್ದಾರೆ. ಫ್ಯಾಮಿಲಿ ಎಂಟರ್​ಟೇನ್​ಮೆಂಟ್ ಮಾದರಿಯಲ್ಲಿ ಈ ಸಿನಿಮಾ ಮೂಡಿ ಬರಲಿದೆ’ ಎಂದು ರಮೇಶ್ ಹೇಳಿರುವುದಾಗಿ ಕೆಲ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: MS Dhoni Entertainment: 3 ಭಾಷೆಗಳಲ್ಲಿ ಚಿತ್ರ ನಿರ್ಮಿಸಲಿದೆ ಧೋನಿ ಎಂಟರ್‌ಟೈನ್‌ಮೆಂಟ್

ಧೋನಿ ಎಂಟರ್​ಟೇನ್​ಮೆಂಟ್ ಎದುರು ನಿಂತು ಧೋನಿ ಪೋಸ್ ನೀಡಿದ್ದ ಫೋಟೋ ಇತ್ತೀಚೆಗೆ ವೈರಲ್ ಆಗಿತ್ತು. ತಮಿಳು ಸಿನಿಮಾ ಮಾತ್ರವಲ್ಲದೆ ಇನ್ನೂ ಹಲವು ನಿರ್ದೇಶಕರ ಜತೆ ಧೋನಿ ಮಾತುಕತೆಯಲ್ಲಿ ಇದ್ದಾರೆ. ಧೋನಿಗೆ ಈ ಮೊದಲಿನಿಂದಲೂ ಸಿನಿಮಾ ಬಗ್ಗೆ ಆಸಕ್ತಿ ಇದೆ. ಕ್ರಿಕೆಟ್​ನಿಂದ ನಿವೃತ್ತಿ ಪಡೆದ ಬಳಿಕ ಅವರು ಈ ಬಗ್ಗೆ ಗಮನಹರಿಸುತ್ತಿದ್ದಾರೆ. ಮೂಲಗಳ ಪ್ರಕಾರ ವೆಬ್​ ಸೀರಿಸ್​ಗಳನ್ನು ನಿರ್ಮಾಣ ಮಾಡುವತ್ತವೂ ಧೋನಿ ಗಮನ ಹರಿಸುತ್ತಿದ್ದಾರೆ ಎನ್ನಲಾಗಿದೆ.

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ