AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಣದ ಜತೆಗೆ ನಟನೆ ಆರಂಭಿಸಿದ ಧೋನಿ? ಹಿಟ್ ನಿರ್ದೇಶಕನ ಚಿತ್ರದಲ್ಲಿ ಕೂಲ್ ಕ್ಯಾಪ್ಟನ್

ಚಿತ್ರರಂಗಕ್ಕೂ ಕ್ರಿಕೆಟ್ ಲೋಕಕ್ಕೂ ಉತ್ತಮ ನಂಟಿದೆ. ಟೀಂ ಇಂಡಿಯಾ ಮಾಜಿ ಬೌಲರ್ ಶ್ರೀಶಾಂತ್, ಇರ್ಫಾನ್ ಪಠಾಣ್ ಸೇರಿ ಅನೇಕರು ದೊಡ್ಡ ಪರದೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈಗ ಧೊನಿಯ ಸರದಿ. ‘

ನಿರ್ಮಾಣದ ಜತೆಗೆ ನಟನೆ ಆರಂಭಿಸಿದ ಧೋನಿ? ಹಿಟ್ ನಿರ್ದೇಶಕನ ಚಿತ್ರದಲ್ಲಿ ಕೂಲ್ ಕ್ಯಾಪ್ಟನ್
TV9 Web
| Edited By: |

Updated on: Nov 11, 2022 | 5:21 PM

Share

ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್, ಚೆನ್ನೈ ಸೂಪರ್ ಕಿಂಗ್ಸ್​​ನ ಹಾಲಿ ಕ್ಯಾಪ್ಟನ್ ಎಂ.ಎಸ್​. ಧೋನಿ (MS Dhoni) ಸದ್ಯ ಸುದ್ದಿಯಲ್ಲಿದ್ದಾರೆ. ಚಿತ್ರರಂಗದ ಜತೆ ಅವರು ನಂಟು ಬೆಳೆಸಿಕೊಳ್ಳುತ್ತಿದ್ದಾರೆ. ‘ಧೋನಿ ಎಂಟರ್​ಟೇನ್​ಮೆಂಟ್​’ ಹೆಸರಿನ ನಿರ್ಮಾಣಸಂಸ್ಥೆ ಆರಂಭಿಸಿ ಸಿನಿಮಾ ನಿರ್ಮಾಣಕ್ಕೆ ಅವರು ಮುಂದಾಗುತ್ತಿದ್ದಾರೆ. ಹೀಗಿರುವಾಗಲೇ ಹೊಸ ಅಪ್​ಡೇಟ್​ ಒಂದು ಸಿಕ್ಕಿದೆ. ಕೂಲ್ ಕ್ಯಾಪ್ಟನ್ ಈಗ ನಟನೆಯಲ್ಲೂ ತೊಡಗಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ. ಖ್ಯಾತ ನಿರ್ದೇಶಕನ ಜತೆ ಅವರು ಕೈ ಜೋಡಿಸುತ್ತಿದ್ದಾರೆ ಎನ್ನುತ್ತಿವೆ ಮೂಲಗಳು.

ಚಿತ್ರರಂಗಕ್ಕೂ ಕ್ರಿಕೆಟ್ ಲೋಕಕ್ಕೂ ಉತ್ತಮ ನಂಟಿದೆ. ಟೀಂ ಇಂಡಿಯಾ ಮಾಜಿ ಬೌಲರ್ ಶ್ರೀಶಾಂತ್, ಇರ್ಫಾನ್ ಪಠಾಣ್ ಸೇರಿ ಅನೇಕರು ದೊಡ್ಡ ಪರದೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈಗ ಧೊನಿಯ ಸರದಿ. ‘ವಿಕ್ರಮ್​’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಲೋಕೇಶ್ ಕನಗರಾಜ್ ಮುಂದಿನ ಪ್ರಾಜೆಕ್ಟ್​ನಲ್ಲಿ ಧೋನಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಸಿಗಬೇಕಿದೆ.

ಲೋಕೇಶ್ ಅವರು ತಮ್ಮ ಮುಂದಿನ ಪ್ರಾಜೆಕ್ಟ್​ ಮೇಲೆ ಗಮನ ಹರಿಸುತ್ತಿದ್ದಾರೆ. ಈ ಚಿತ್ರದಲ್ಲಿ ಧೋನಿಗೆ ಒಂದು ಪ್ರಮುಖ ಪಾತ್ರ ನೀಡಬೇಕು ಎನ್ನುವ ಆಲೋಚನೆಯಲ್ಲಿ ಲೋಕೇಶ್ ಇದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದಾರೆ.

ಇದನ್ನೂ ಓದಿ
Image
ಈ ಇಬ್ಬರಂತೆ ಸಾವಿರ ಆಟಗಾರರು ಸಿಗಬಹುದು, ಆದರೆ ಧೋನಿಯಂಥವರು ಸಿಗುವುದು ಅಸಾಧ್ಯ; ಗಂಭೀರ್
Image
ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಡೋಕೆ ರೆಡಿ ಆದ ಧೋನಿ; ಮೊದಲ ಸಿನಿಮಾ ಹೀಗಿರಲಿದೆ?
Image
T20 World Cup 2022: ಈ ಬಾರಿ ಉಡೀಸ್ ಆಗಲಿದೆ 10 ವಿಶ್ವ ದಾಖಲೆಗಳು

ಲೋಕೇಶ್ ಕನಗರಾಜ್ ಹಾಗೂ ದಳಪತಿ ವಿಜಯ್ ಅವರು ಒಂದಾಗುತ್ತಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ದಳಪತಿ 67’ ಎಂದು ನಾಮಕರಣ ಮಾಡಲಾಗಿದೆ. ಈ ಚಿತ್ರದಲ್ಲಿ ಧೋನಿ ನಟಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಧೋನಿ ಅವರು ಐಪಿಎಲ್​ನಲ್ಲಿ ‘ಚೆನ್ನೈ ಸೂಪರ್ ಕಿಂಗ್ಸ್’ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಕಾರಣಕ್ಕೆ ತಮಿಳುನಾಡಿನಲ್ಲಿ ಅವರಿಗೆ ಸಾಕಷ್ಟು ಅಭಿಮಾನಿಗಳು ಇದ್ದಾರೆ. ಹೀಗಾಗಿ, ಅವರು ತಮಿಳು ಚಿತ್ರರಂಗದತ್ತ ಹೆಚ್ಚು ವಾಲುತ್ತಿದ್ದಾರೆ.

ಧೋನಿ ನಿರ್ಮಾಣ ಮಾಡುವ ಮೊದಲ ಸಿನಿಮಾಗೆ ರಮೇಶ್ ತಮಿಳ್​ಮಣಿ ಅವರು ನಿರ್ದೇಶನ ಮಾಡಲಿದ್ದಾರೆ. ಅವರು ಈ ಮೊದಲು ‘ಅಥರ್ವ-ದಿ ಒರ್ಜಿನ್’ ಹೆಸರಿನ ಗ್ರಾಫಿಕ್ ನಾವೆಲ್ ಅನ್ನು ಬರೆದಿದ್ದಾರೆ. ಈ ಚಿತ್ರದಲ್ಲಿ ಯಾರೆಲ್ಲ ನಟಿಸಲಿದ್ದಾರೆ ಎಂಬ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

ಇದನ್ನೂ ಓದಿ: ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಡೋಕೆ ರೆಡಿ ಆದ ಧೋನಿ; ಮೊದಲ ಸಿನಿಮಾ ಹೀಗಿರಲಿದೆ?

ಧೋನಿ ಎಂಟರ್​ಟೇನ್​ಮೆಂಟ್ ಎದುರು ನಿಂತು ಧೋನಿ ಪೋಸ್ ನೀಡಿದ್ದ ಫೋಟೋ ಇತ್ತೀಚೆಗೆ ವೈರಲ್ ಆಗಿತ್ತು. ತಮಿಳು ಸಿನಿಮಾ ಮಾತ್ರವಲ್ಲದೆ ಇನ್ನೂ ಹಲವು ನಿರ್ದೇಶಕರ ಜತೆ ಧೋನಿ ಮಾತುಕತೆಯಲ್ಲಿ ಇದ್ದಾರೆ. ಧೋನಿಗೆ ಈ ಮೊದಲಿನಿಂದಲೂ ಸಿನಿಮಾ ಬಗ್ಗೆ ಆಸಕ್ತಿ ಇದೆ. ಕ್ರಿಕೆಟ್​ನಿಂದ ನಿವೃತ್ತಿ ಪಡೆದ ಬಳಿಕ ಅವರು ಈ ಬಗ್ಗೆ ಗಮನಹರಿಸುತ್ತಿದ್ದಾರೆ. ಮೂಲಗಳ ಪ್ರಕಾರ ವೆಬ್​ ಸೀರಿಸ್​ಗಳನ್ನು ನಿರ್ಮಾಣ ಮಾಡುವತ್ತವೂ ಧೋನಿ ಗಮನ ಹರಿಸುತ್ತಿದ್ದಾರೆ ಎನ್ನಲಾಗಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್