AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LGM Movie: ಕರುನಾಡಿನ ಸಿನಿ ಪ್ರೇಕ್ಷಕರ ಮೇಲೆ ಕಣ್ಣಿಟ್ಟ ಧೋನಿ; ಕರ್ನಾಟಕದಲ್ಲಿ ತೆರೆ ಕಾಣಲಿದೆ ‘ಎಲ್​ಜಿಎಂ’ ಚಿತ್ರ

MS Dhoni: ನಿರ್ಮಾಪಕನಾಗಿ ಮೊದಲ ಪ್ರಯತ್ನದಲ್ಲೇ ಧೋನಿ ಅವರು ಫ್ಯಾಮಿಲಿ ಪ್ರೇಕ್ಷಕರನ್ನು ಟಾರ್ಗೆಟ್​ ಮಾಡಿದ್ದಾರೆ. ಕೌಟುಂಬಿಕ ಕಥಾಹಂದರ ಇರುವ ‘ಲೆಟ್ಸ್ ಗೆಟ್ ಮ್ಯಾರೀಡ್’ ಚಿತ್ರವನ್ನು ಅವರು ನಿರ್ಮಿಸುತ್ತಿದ್ದಾರೆ.

LGM Movie: ಕರುನಾಡಿನ ಸಿನಿ ಪ್ರೇಕ್ಷಕರ ಮೇಲೆ ಕಣ್ಣಿಟ್ಟ ಧೋನಿ; ಕರ್ನಾಟಕದಲ್ಲಿ ತೆರೆ ಕಾಣಲಿದೆ ‘ಎಲ್​ಜಿಎಂ’ ಚಿತ್ರ
ಎಲ್​ಜಿಎಂ ಸಿನಿಮಾ ಪೋಸ್ಟರ್​, ಸಾಕ್ಷಿ ಧೋನಿ, ಎಂ.ಎಸ್​. ಧೋನಿ
ಮದನ್​ ಕುಮಾರ್​
|

Updated on: Jun 16, 2023 | 1:56 PM

Share

ಕ್ರಿಕೆಟ್​ನಲ್ಲಿ ಮಿಂಚಿದ ಎಂ.ಎಸ್​. ಧೋನಿ (MS Dhoni) ಅವರಿಗೆ ಈಗ ಚಿತ್ರರಂಗದ ಮೇಲೆ ಆಸಕ್ತಿ ಹೆಚ್ಚಾಗಿದೆ. ನಿರ್ಮಾಪಕನಾಗಿ ಅವರು ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ಬ್ಯಾನರ್​ ಮೂಲಕ ಅವರು ಅನೇಕರಿಗೆ ಅವಕಾಶ ನೀಡುತ್ತಿದ್ದಾರೆ. ಕ್ಯಾಪ್ಟನ್ ಕೂಲ್ ಅಂತಲೇ ಫೇಮಸ್​ ಆದವರು ಎಂ.ಎಸ್ ಧೋನಿ. ಅವರ ನಿರ್ಮಾಣದಲ್ಲಿ ಮೂಡಿಬರುವ ಸಿನಿಮಾಗಳ ಬಗ್ಗೆ ಪ್ರೇಕ್ಷಕರಿಗೆ ನಿರೀಕ್ಷೆ ಸೃಷ್ಟಿ ಆಗಿದೆ. ಪತ್ನಿ‌ ಸಾಕ್ಷಿ (Sakshi Dhoni) ಜೊತೆಗೂಡಿ ಮಹೇಂದ್ರ ಸಿಂಗ್​ ಧೋನಿ ಅವರು ‘ಧೋನಿ ಎಂಟರ್​ಟೇನ್ಮೆಂಟ್​ ಪ್ರೈವೆಟ್​ ಲಿಮಿಡೆಟ್​’ ಕಂಪನಿ ಶುರು ಮಾಡಿದ್ದರು. ಅವರ ಸಂಸ್ಥೆ ಮೂಲಕ ನಿರ್ಮಾಣ ಆಗುತ್ತಿರುವ ಚೊಚ್ಚಲ ಸಿನಿಮಾ ಹೆಸರು ‘ಲೆಟ್ಸ್ ಗೆಟ್ ಮ್ಯಾರೀಡ್’. ಇದನ್ನು ಶಾರ್ಟ್​ ಆಗಿ ‘ಎಲ್​ಜಿಎಂ’ (LGM Movie) ಎಂದು ಕರೆಯಲಾಗುತ್ತಿದೆ. ತಮಿಳಿನ ಈ ಸಿನಿಮಾ ಕರ್ನಾಟಕದಲ್ಲಿ ಕೂಡ ರಿಲೀಸ್​ ಆಗಲಿದೆ.

‘ಲೆಟ್ಸ್ ಗೆಟ್ ಮ್ಯಾರೀಡ್’ ಚಿತ್ರವು ಟೀಸರ್ ಮೂಲಕ ನಗುವಿನ ಕಚಗುಳಿ ಇಟ್ಟಿತ್ತು. ಕರ್ನಾಟಕದಲ್ಲಿನ ಜನರಿಂದಲೂ ಟೀಸರ್​ಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ‘ಲೆಟ್ಸ್ ಗೆಟ್ ಮ್ಯಾರೀಡ್’ ಈ ಚಿತ್ರವನ್ನು ಕರುನಾಡಿನಲ್ಲಿಯೂ ರಿಲೀಸ್​ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. ಇತ್ತೀಚೆಗೆ ಡಿಫರೆಂಟ್​ ಕಾನ್ಸೆಪ್ಟ್​ ಇರುವ ಪರಭಾಷೆ ಚಿತ್ರಗಳಿಗೆ ಕರ್ನಾಟಕದಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದ ಉದಾಹರಣೆ ಇದೆ. ಆದ್ದರಿಂದ ‘ಲೆಟ್ಸ್ ಗೆಟ್ ಮ್ಯಾರೀಡ್’ ಸಿನಿಮಾವನ್ನು ಕೂಡ ಕರ್ನಾಟಕದಲ್ಲಿ ಬಿಡುಗಡೆ ಮಾಡಲಾಗುವುದು. ಈ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ: ಧೋನಿಯನ್ನು ವಿಶ್ವಕಪ್​ ಹೀರೋ ಮಾಡಿದ್ದು ಆತನ PR ಟೀಮ್: ಗಂಭೀರ್ ಗಂಭೀರ ಆರೋಪ

ನಿರ್ಮಾಪಕನಾಗಿ ಮೊದಲ ಪ್ರಯತ್ನದಲ್ಲೇ ಧೋನಿ ಅವರು ಫ್ಯಾಮಿಲಿ ಪ್ರೇಕ್ಷಕರನ್ನು ಟಾರ್ಗೆಟ್​ ಮಾಡಿದ್ದಾರೆ. ಕೌಟುಂಬಿಕ ಮನರಂಜನಾ ಕಥಾಹಂದರ ಇರುವ ‘ಲೆಟ್ಸ್ ಗೆಟ್ ಮ್ಯಾರೀಡ್’ ಚಿತ್ರವನ್ನು ಅವರು ಪ್ರೇಕ್ಷಕರಿಗೆ ನೀಡುತ್ತಿದ್ದಾರೆ. ಈ ಸಿನಿಮಾಗೆ ರಮೇಶ್ ತಮಿಳ್​ಮಣಿ ನಿರ್ದೇಶನ ಮಾಡಿದ್ದಾರೆ. ನಾಯಕನಾಗಿ ಹರೀಶ್ ಕಲ್ಯಾಣ್ ನಟಿಸಿದ್ದಾರೆ. ನಾಯಕಿ ಪಾತ್ರವನ್ನು ಇವಾನಾ ನಿಭಾಯಿಸಿದ್ದಾರೆ. ಪೋಸ್ಟರ್​ಗಳು ಕೂಡ ಗಮನ ಸೆಳೆದಿವೆ. ‘ಲೆಟ್ಸ್ ಗೆಟ್ ಮ್ಯಾರೀಡ್’ ಚಿತ್ರಕ್ಕೆ ಈಗಾಗಲೇ ಶೂಟಿಂಗ್​ ಮುಗಿದಿದೆ. ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಈ ಸಿನಿಮಾವನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕು ಎಂಬ ಗುರಿ ಇಟ್ಟುಕೊಂಡು ಚಿತ್ರತಂಡ ಕೆಲಸ ಮಾಡುತ್ತಿದೆ.

ಇದನ್ನೂ ಓದಿ: MS Dhoni: ಸಖತ್ ಫನ್ನಿ ಆಗಿರಲಿದೆ ಧೋನಿ ನಿರ್ಮಾಣದ ಮೊದಲ ಸಿನಿಮಾ; ಇಲ್ಲಿದೆ ಟೀಸರ್

ರಮೇಶ್ ತಮಿಳ್​ಮಣಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡುವುದರ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನೂ ನಿಭಾಯಿಸಿದ್ದಾರೆ ಎಂಬುದು ವಿಶೇಷ. ಸಿನಿಮಾದ ಟೀಸರ್ ನೋಡಿದವರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು ಚಿತ್ರತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ. ಸದ್ಯದಲ್ಲೇ ಈ ಸಿನಿಮಾದ ಹಾಡುಗಳು ಮತ್ತು ಟ್ರೇಲರ್‌ ಬಿಡುಗಡೆ ಆಗಲಿದೆ. ಅದಕ್ಕಾಗಿ ಧೋನಿ ಫ್ಯಾನ್ಸ್​ ಕಾದಿದ್ದಾರೆ. ಹಿರಿಯ ಕಲಾವಿದೆ ನದಿಯಾ, ಖ್ಯಾತ ನಟ ಯೋಗಿ ಬಾಬು ಹಾಗೂ ಆರ್‌ಜೆ ವಿಜಯ್ ಅವರು ಕೂಡ ‘ಲೆಟ್ಸ್ ಗೆಟ್ ಮ್ಯಾರೀಡ್’ ಸಿನಿಮಾದಲ್ಲಿ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?