AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಸೂಪರ್ ಬೆಡಗಿ ಜೊತೆ ಸಿನಿಮಾ ನಿರ್ಮಿಸಲು ಮುಂದಾದ ಧೋನಿ..!

Nayanthara: ಸೌತ್ ಸಿನಿರಂಗದಲ್ಲಿ ನಯನತಾರಾ ಅತ್ಯಂತ ಯಶಸ್ವಿ ನಟಿ. ಅದರಲ್ಲೂ ತಮಿಳು, ತೆಲುಗು, ಮಲಯಾಳಂ ಹಾಗೂ ಕನ್ನಡ ಪ್ರೇಕ್ಷಕರಿಗೆ ನಯನತಾರಾ ಚಿರಪರಿಚಿತ.

MS Dhoni: ಸೂಪರ್ ಬೆಡಗಿ ಜೊತೆ ಸಿನಿಮಾ ನಿರ್ಮಿಸಲು ಮುಂದಾದ ಧೋನಿ..!
MS Dhoni-Nayanthara
TV9 Web
| Edited By: |

Updated on:May 11, 2022 | 7:46 PM

Share

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಮುಟ್ಟಿದೆಲ್ಲಾ ಚಿನ್ನ ಎಂಬ ಮಾತಿದೆ. ಇದಕ್ಕೆ ಸಾಕ್ಷಿಯೇ ಧೋನಿಯ ಕ್ರಿಕೆಟ್ ಕೆರಿಯರ್. ಝೀರೋದಿಂದ ಶುರುವಾದ ಅವರ ಕ್ರಿಕೆಟ್ ಪಯಣ ಅಂತ್ಯವಾಗಿದ್ದು ಅತ್ಯಂತ ಯಶಸ್ವಿ ನಾಯಕ ಎಂಬ ಹೀರೋ ಪಟ್ಟದೊಂದಿಗೆ ಎಂಬುದು ವಿಶೇಷ. ಆ ಬಳಿಕ ಒಂದಷ್ಟು ಬ್ಯುಸಿನೆಸ್​ನಲ್ಲೂ ಧೋನಿ ತೊಡಗಿಸಿಕೊಂಡಿದ್ದರು. ಅತ್ತ ಧೋನಿಯ ಹೆಸರು ತಳುಕು ಹಾಕಿಕೊಳ್ಳುತ್ತಿದ್ದಂತೆ ಅವರ ಮಾಡುತ್ತಿದ್ದ ವ್ಯವಹಾರಗಳಿಗೆ ಭಾರೀ ಪ್ರಚಾರ ಕೂಡ ಲಭಿಸುತ್ತಿತ್ತು. ಇದೀಗ ಕ್ರಿಕೆಟ್​ನಿಂದ ನೇರವಾಗಿ ಧೋನಿ ಸಿನಿರಂಗಕ್ಕೆ ಕಾಲಿಡಲು ಮುಂದಾಗಿದ್ದಾರೆ. ಕ್ರಿಕೆಟ್​ಗೂ ಸಿನಿಮಾಗೂ ಅವಿನಾಭಾವ ಸಂಬಂಧ ಇದ್ದರೂ, ಧೋನಿಯ ಎಂಟ್ರಿ ಮಾತ್ರ ವಿಶೇಷವಾಗಿದೆ. ಏಕೆಂದರೆ ಸಿನಿರಂಗಕ್ಕೆ ಧೋನಿ ಬರುತ್ತಿರುವುದು ನಟನಾಗಿ ಅಲ್ಲ, ಬದಲಾಗಿ ಚಿತ್ರ ನಿರ್ಮಾಪಕನಾಗಿ ಎಂಬುದು ವಿಶೇಷ.

ಹೌದು, ಮಹೇಂದ್ರ ಸಿಂಗ್ ಧೋನಿ ಕಾಲಿವುಡ್ ಅಂಗಳಕ್ಕೆ ನಿರ್ಮಾಪಕರಾಗಿ ಕಾಲಿಡುತ್ತಿದ್ದಾರೆ. ಈಗಾಗಲೇ ವಿಶ್ವದಾದ್ಯಂತ ಸಿನಿಪ್ರಿಯರನ್ನು ಸೆಳೆದಿರುವ ಕಾಲಿವುಡ್ ಚಿತ್ರದ ಮೂಲಕ ಹೊಸ ಇನಿಂಗ್ಸ್ ಆರಂಭಿಸಲು ಸಿಎಸ್​ಕೆ ನಾಯಕ ಮುಂದಾಗಿದ್ದಾರೆ. ಇದಕ್ಕಾಗಿ ಈಗಾಗಲೇ ಒಂದು ಸುತ್ತಿನ ಮಾತುಕತೆ ಕೂಡ ನಡೆದಿದೆ. ಸಿನಿರಂಗದ ಮೂಲಗಳ ಮಾಹಿತಿ ಪ್ರಕಾರ, ಧೋನಿ ತಮಿಳು ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ನಯನತಾರಾ ನಾಯಕಿಯಾಗಿ ನಟಿಸಲಿರುವ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ.

ಈ ಬಗ್ಗೆ ನಯನತಾರಾ ಜೊತೆ ಕೂಡ ಮಾತುಕತೆ ನಡೆದಿದ್ದು, ಅತ್ತ ಲೇಡಿ ಸೂಪರ್ ಸ್ಟಾರ್ ಕಡೆಯಿಂದ ಕೂಡ ಗ್ರೀನ್ ಸಿಗ್ನಲ್ ಸಿಕ್ಕಿದೆಯಂತೆ. ಹೀಗಾಗಿ ಈ ಚಿತ್ರವು ಶೀಘ್ರದಲ್ಲೇ ಸೆಟ್ಟೇರುವ ಸಾಧ್ಯತೆಯಿದೆ. ಇದಾಗ್ಯೂ ಚಿತ್ರದ ನಿರ್ದೇಶಕ ಯಾರು ಹಾಗೂ ಇತರೆ ತಾರಾಬಳಗದಲ್ಲಿ ಯಾರೆಲ್ಲಾ ಇದ್ದಾರೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ
Image
IPL 2022: ಸಚಿನ್​ರ 13 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಗಿಲ್
Image
IPL 2022: ಸೋಲುತ್ತೆ ನಿಜ, ಆದರೆ ಇದು?, LSG ಆಟಗಾರರ ವಿರುದ್ದ ಗಂಭೀರ್ ಗರಂ
Image
IPL 2022: ಅಂದು ಲಯನ್ಸ್, ಇಂದು ಟೈಟನ್ಸ್: ಗುಜರಾತ್ ತಂಡದ ಫ್ಯಾನ್ಸ್​ಗೆ ಹೊಸ ಚಿಂತೆ ಶುರು..!
Image
AB De Villiers: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಮತ್ತೆ ಬರ್ತಾರಂತೆ ABD

ಧೋನಿ ಕಾಲಿವುಡ್​ಗೆ ಕಾಲಿಡುತ್ತಿರುವುದೇಕೆ? 2016 ರಲ್ಲಿ ಮಹೇಂದ್ರ ಸಿಂಗ್ ಧೋನಿ ಜೀವನಾಧಾರಿತ ಚಿತ್ರ ಎಂಎಸ್​ ಧೋನಿ- ದಿ ಅನ್​ಟೋಲ್ಡ್​ ಸ್ಟೋರಿ ಚಿತ್ರವು ಹಿಂದಿ ಹಾಗೂ ತಮಿಳಿನಲ್ಲಿ ತೆರೆಕಂಡಿತ್ತು. ಈ ವೇಳೆ ತಮಿಳುನಾಡಿನಾದ್ಯಂತ ಈ ಚಿತ್ರವು ಭರ್ಜರಿ ಪ್ರದರ್ಶನ ಕಂಡಿತು. ಇತ್ತ ಸಿಎಸ್​ಕೆ ಫೇಮ್​ನೊಂದಿಗೆ ತಮಿಳುನಾಡಿನ ಅಭಿಮಾನಿಗಳ ಪಾಲಿನ ಥಲಾ ಎಂದೇ ಖ್ಯಾತರಾಗಿರುವ ಧೋನಿ ಚಿತ್ರವೊಂದನ್ನು ನಿರ್ಮಿಸಿದರೆ ಅದು ಕಾಲಿವುಡ್​ನಲ್ಲಿ ಯಶಸ್ವಿಯಾಗುವುದರಲ್ಲಿ ಅನುಮಾನವೇ ಇಲ್ಲ. ಹೀಗಾಗಿ ಕಾಲಿವುಡ್ ಮೂಲಕವೇ ಹೊಸ ಇನಿಂಗ್ಸ್ ಆರಂಭಿಸಲು ಧೋನಿ ಮುಂದಾಗಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಹೊಸ ಉದ್ಯಮದಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್ ಅವರ ಆಪ್ತ ಸಹಾಯಕ ಸಂಜಯ್ ಅವರನ್ನು ನೇಮಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದೊಂದು ಮಹಿಳಾ ಕೇಂದ್ರಿತ ಮನರಂಜನಾ ಚಿತ್ರ ಎನ್ನಲಾಗಿದ್ದು, ಹೀಗಾಗಿಯೇ ಲೇಡಿ ಸೂಪರ್ ಸ್ಟಾರ್ ನಯನತಾರಾ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಏಕೆಂದರೆ ಸೌತ್ ಸಿನಿರಂಗದಲ್ಲಿ ನಯನತಾರಾ ಅತ್ಯಂತ ಯಶಸ್ವಿ ನಟಿ. ಅದರಲ್ಲೂ ತಮಿಳು, ತೆಲುಗು, ಮಲಯಾಳಂ ಹಾಗೂ ಕನ್ನಡ ಪ್ರೇಕ್ಷಕರಿಗೆ ನಯನತಾರಾ ಚಿರಪರಿಚಿತ. ಈ ಹಿಂದೆ ಕನ್ನಡದಲ್ಲಿ ಉಪೇಂದ್ರ ನಿರ್ದೇಶನದ ಸೂಪರ್ ಚಿತ್ರದಲ್ಲಿ ಸೌತ್ ಸುಂದರಿ ಕಾಣಿಸಿಕೊಂಡಿದ್ದರು. ಹೀಗಾಗಿ  ತಮಿಳಿ​ನಲ್ಲಿ ಚಿತ್ರ ನಿರ್ಮಿಸಿದರೂ ಉಳಿದ ಭಾಷೆಗಳಲ್ಲಿ ಡಬ್​ ಮಾಡುವ ಮೂಲಕ ಪ್ರೇಕ್ಷಕರನ್ನು ಸೆಳೆಯಬಹುದು. ಈ ಎಲ್ಲಾ ಪ್ಲ್ಯಾನ್​ಗಳೊಂದಿಗೆ ಮಹೇಂದ್ರ ಸಿಂಗ್ ಧೋನಿ ಸಿನಿರಂಗದಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಮುಂದಾಗಿದ್ದಾರೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:47 pm, Wed, 11 May 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?