Sakshi Dhoni: ‘ಅಲ್ಲು ಅರ್ಜುನ್​ ಅವರ ಎಲ್ಲ ಸಿನಿಮಾ ನೋಡಿದ್ದೇನೆ’: ಅಭಿಮಾನ ಮೆರೆದ ಧೋನಿ ಪತ್ನಿ ಸಾಕ್ಷಿ

‘ನೀವು ಯಾವುದಾದರೂ ತೆಲುಗು ಸಿನಿಮಾಗಳನ್ನು ನೋಡಿದ್ದೀರಾ’ ಎಂದು ಸಾಕ್ಷಿ ಅವರಿಗೆ ಪ್ರಶ್ನೆ ಕೇಳಲಾಯಿತು. ಆಗ ಅವರು ಅಲ್ಲು ಅರ್ಜುನ್​ ಬಗ್ಗೆ ಮಾತನಾಡಿದರು.

Sakshi Dhoni: ‘ಅಲ್ಲು ಅರ್ಜುನ್​ ಅವರ ಎಲ್ಲ ಸಿನಿಮಾ ನೋಡಿದ್ದೇನೆ’: ಅಭಿಮಾನ ಮೆರೆದ ಧೋನಿ ಪತ್ನಿ ಸಾಕ್ಷಿ
ಸಾಕ್ಷಿ ಧೋನಿ, ಅಲ್ಲು ಅರ್ಜುನ್​
Follow us
|

Updated on: Jul 25, 2023 | 11:07 AM

ಟಾಲಿವುಡ್​ನ ಸ್ಟಾರ್​ ನಟ ಅಲ್ಲು ಅರ್ಜುನ್ (Allu Arjun) ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳಿಗೂ ಅಲ್ಲು ಅರ್ಜುನ್​ ಎಂದರೆ ಸಖತ್​ ಇಷ್ಟ. ಕ್ರಿಕೆಟರ್​ ಎಂ.ಎಸ್​. ಧೋನಿ (MS Dhoni) ಅವರ ಪತ್ನಿ ಸಾಕ್ಷಿ ಕೂಡ ಅಲ್ಲು ಅರ್ಜುನ್​ಗೆ ಫ್ಯಾನ್​ ಆಗಿದ್ದಾರೆ. ಹಾಗಂತ ಅದು ಕೇವಲ ‘ಪುಷ್ಪ’ ಸಿನಿಮಾದಿಂದ ಮಾತ್ರವಲ್ಲ. ‘ಪುಷ್ಪ’ ಬರುವುದಕ್ಕೂ ಮುನ್ನವೇ ಅಲ್ಲು ಅರ್ಜುನ್​ ಅವರ ಸಿನಿಮಾಗಳನ್ನು ನೋಡಿ ಸಾಕ್ಷಿ (Sakshi Dhoni) ಅವರು ಎಂಜಾಯ್​ ಮಾಡಿದ್ದರು. ಈ ವಿಚಾರವನ್ನು ಅವರು ಈಗ ಹೇಳಿಕೊಂಡಿದ್ದಾರೆ. ಹೈದರಾಬಾದ್​​ನಲ್ಲಿ ‘ಎಲ್​ಜಿಎಂ’ ಸಿನಿಮಾದ ಪ್ರಮೋಷನ್​ ವೇಳೆ ಅವರು ಈ ವಿಷಯ ಹೇಳಿದ್ದು ಕೇಳಿ ಅಲ್ಲು ಅರ್ಜುನ್​ ಫ್ಯಾನ್ಸ್​ಗೆ ಖುಷಿ ಆಗಿದೆ.

ಈಗಾಗಲೇ ತಿಳಿದಿರುವಂತೆ ಎಂ.ಎಸ್​. ಧೋನಿ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ಸಕ್ರಿಯರಾಗಿದ್ದಾರೆ. ‘ಧೋನಿ ಎಂಟರ್​ಟೇನ್ಮೆಂಟ್​’ ಸಂಸ್ಥೆ ಮೂಲಕ ಅವರು ತಮಿಳು ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಅವರ ಪತ್ನಿ ಸಾಕ್ಷಿ ಅವರು ನಿರ್ಮಾಣದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಅವರು ಹಣ ಹೂಡಿರುವ ‘ಎಲ್​ಜಿಎಂ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇದರ ಪ್ರಚಾರದ ಸಲುವಾಗಿ ಹೈದರಾಬಾದ್​ನಲ್ಲಿ ಇವೆಂಟ್​ ಮಾಡಲಾಗಿದೆ.

‘ನೀವು ಯಾವುದಾದರೂ ತೆಲುಗು ಸಿನಿಮಾಗಳನ್ನು ನೋಡಿದ್ದೀರಾ’ ಎಂದು ಸಾಕ್ಷಿ ಅವರಿಗೆ ಪ್ರಶ್ನೆ ಕೇಳಲಾಯಿತು. ಆಗ ಅವರು ಅಲ್ಲು ಅರ್ಜುನ್​ ಬಗ್ಗೆ ಮಾತನಾಡಿದರು. ‘ಅಲ್ಲು ಅರ್ಜುನ್​ ಅವರ ಎಲ್ಲ ಸಿನಿಮಾಗಳನ್ನು ನೋಡಿದ್ದೇನೆ. ಆ ಸಮಯದಲ್ಲಿ ನೆಟ್​ಫ್ಲಿಕ್ಸ್​, ಹಾಟ್​ಸ್ಟಾರ್​ ಇತ್ಯಾದಿ ಒಟಿಟಿ ಇರಲಿಲ್ಲ. ಅಲ್ಲು ಅರ್ಜುನ್​ ನಟನೆಯ ತೆಲುಗು ಸಿನಿಮಾಗಳನ್ನು ಹಿಂದಿಗೆ ಡಬ್​ ಮಾಡಿ ಯೂಟ್ಯೂಬ್​ನಲ್ಲಿ ಬಿಡುಗಡೆ ಮಾಡಲಾಗುತ್ತಿತ್ತು. ನಾನು ಅಲ್ಲು ಅರ್ಜುನ್​ ಅವರ ದೊಡ್ಡ ಅಭಿಮಾನಿ’ ಎಂದು ಸಾಕ್ಷಿ ಧೋನಿ ಹೇಳಿದ್ದಾರೆ. ಈ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ: Allu Arjun: ‘ಪುಷ್ಪ 2’ ಪೋಸ್ಟರ್​ ರೀತಿ ವೇಷ ಧರಿಸಿ ಬಂದ ಸಂಸದ; ಅಲ್ಲು ಅರ್ಜುನ್​ ಅಭಿಮಾನಿಗಳಲ್ಲಿ ಹೆಚ್ಚಿತು ಕ್ರೇಜ್​

ಧೋನಿ ಅವರಿಗೆ ತಮಿಳುನಾಡಿನಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಹಾಗಾಗಿ ಅವರು ತಮ್ಮ ಸಂಸ್ಥೆಯ ಮೊದಲ ಸಿನಿಮಾವನ್ನು ತಮಿಳಿನಲ್ಲಿ ನಿರ್ಮಿಸುತ್ತಿದ್ದಾರೆ. ‘ಎಲ್​ಜಿಎಂ’ ಸಿನಿಮಾಗೆ ರಮೇಶ್ ತಮಿಳ್ಮಣಿ ನಿರ್ದೇಶನ ಮಾಡಿದ್ದಾರೆ. ಹರೀಶ್ ಕಲ್ಯಾಣ್, ಇವಾನಾ, ಯೋಗಿ ಬಾಬು, ಮಿರ್ಚಿ ವಿಜಯ್, ನದಿಯಾ ಸೇರಿದಂತೆ ಅನೇಕರು ಈ ಚಿತ್ರದಲ್ಲಿ ನಟಿಸಿದ್ದಾರೆ. ಜುಲೈ 28ರಂದು ಈ ಸಿನಿಮಾ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ