AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sakshi Dhoni: ‘ಅಲ್ಲು ಅರ್ಜುನ್​ ಅವರ ಎಲ್ಲ ಸಿನಿಮಾ ನೋಡಿದ್ದೇನೆ’: ಅಭಿಮಾನ ಮೆರೆದ ಧೋನಿ ಪತ್ನಿ ಸಾಕ್ಷಿ

‘ನೀವು ಯಾವುದಾದರೂ ತೆಲುಗು ಸಿನಿಮಾಗಳನ್ನು ನೋಡಿದ್ದೀರಾ’ ಎಂದು ಸಾಕ್ಷಿ ಅವರಿಗೆ ಪ್ರಶ್ನೆ ಕೇಳಲಾಯಿತು. ಆಗ ಅವರು ಅಲ್ಲು ಅರ್ಜುನ್​ ಬಗ್ಗೆ ಮಾತನಾಡಿದರು.

Sakshi Dhoni: ‘ಅಲ್ಲು ಅರ್ಜುನ್​ ಅವರ ಎಲ್ಲ ಸಿನಿಮಾ ನೋಡಿದ್ದೇನೆ’: ಅಭಿಮಾನ ಮೆರೆದ ಧೋನಿ ಪತ್ನಿ ಸಾಕ್ಷಿ
ಸಾಕ್ಷಿ ಧೋನಿ, ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: Jul 25, 2023 | 11:07 AM

Share

ಟಾಲಿವುಡ್​ನ ಸ್ಟಾರ್​ ನಟ ಅಲ್ಲು ಅರ್ಜುನ್ (Allu Arjun) ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳಿಗೂ ಅಲ್ಲು ಅರ್ಜುನ್​ ಎಂದರೆ ಸಖತ್​ ಇಷ್ಟ. ಕ್ರಿಕೆಟರ್​ ಎಂ.ಎಸ್​. ಧೋನಿ (MS Dhoni) ಅವರ ಪತ್ನಿ ಸಾಕ್ಷಿ ಕೂಡ ಅಲ್ಲು ಅರ್ಜುನ್​ಗೆ ಫ್ಯಾನ್​ ಆಗಿದ್ದಾರೆ. ಹಾಗಂತ ಅದು ಕೇವಲ ‘ಪುಷ್ಪ’ ಸಿನಿಮಾದಿಂದ ಮಾತ್ರವಲ್ಲ. ‘ಪುಷ್ಪ’ ಬರುವುದಕ್ಕೂ ಮುನ್ನವೇ ಅಲ್ಲು ಅರ್ಜುನ್​ ಅವರ ಸಿನಿಮಾಗಳನ್ನು ನೋಡಿ ಸಾಕ್ಷಿ (Sakshi Dhoni) ಅವರು ಎಂಜಾಯ್​ ಮಾಡಿದ್ದರು. ಈ ವಿಚಾರವನ್ನು ಅವರು ಈಗ ಹೇಳಿಕೊಂಡಿದ್ದಾರೆ. ಹೈದರಾಬಾದ್​​ನಲ್ಲಿ ‘ಎಲ್​ಜಿಎಂ’ ಸಿನಿಮಾದ ಪ್ರಮೋಷನ್​ ವೇಳೆ ಅವರು ಈ ವಿಷಯ ಹೇಳಿದ್ದು ಕೇಳಿ ಅಲ್ಲು ಅರ್ಜುನ್​ ಫ್ಯಾನ್ಸ್​ಗೆ ಖುಷಿ ಆಗಿದೆ.

ಈಗಾಗಲೇ ತಿಳಿದಿರುವಂತೆ ಎಂ.ಎಸ್​. ಧೋನಿ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ಸಕ್ರಿಯರಾಗಿದ್ದಾರೆ. ‘ಧೋನಿ ಎಂಟರ್​ಟೇನ್ಮೆಂಟ್​’ ಸಂಸ್ಥೆ ಮೂಲಕ ಅವರು ತಮಿಳು ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಅವರ ಪತ್ನಿ ಸಾಕ್ಷಿ ಅವರು ನಿರ್ಮಾಣದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಅವರು ಹಣ ಹೂಡಿರುವ ‘ಎಲ್​ಜಿಎಂ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇದರ ಪ್ರಚಾರದ ಸಲುವಾಗಿ ಹೈದರಾಬಾದ್​ನಲ್ಲಿ ಇವೆಂಟ್​ ಮಾಡಲಾಗಿದೆ.

‘ನೀವು ಯಾವುದಾದರೂ ತೆಲುಗು ಸಿನಿಮಾಗಳನ್ನು ನೋಡಿದ್ದೀರಾ’ ಎಂದು ಸಾಕ್ಷಿ ಅವರಿಗೆ ಪ್ರಶ್ನೆ ಕೇಳಲಾಯಿತು. ಆಗ ಅವರು ಅಲ್ಲು ಅರ್ಜುನ್​ ಬಗ್ಗೆ ಮಾತನಾಡಿದರು. ‘ಅಲ್ಲು ಅರ್ಜುನ್​ ಅವರ ಎಲ್ಲ ಸಿನಿಮಾಗಳನ್ನು ನೋಡಿದ್ದೇನೆ. ಆ ಸಮಯದಲ್ಲಿ ನೆಟ್​ಫ್ಲಿಕ್ಸ್​, ಹಾಟ್​ಸ್ಟಾರ್​ ಇತ್ಯಾದಿ ಒಟಿಟಿ ಇರಲಿಲ್ಲ. ಅಲ್ಲು ಅರ್ಜುನ್​ ನಟನೆಯ ತೆಲುಗು ಸಿನಿಮಾಗಳನ್ನು ಹಿಂದಿಗೆ ಡಬ್​ ಮಾಡಿ ಯೂಟ್ಯೂಬ್​ನಲ್ಲಿ ಬಿಡುಗಡೆ ಮಾಡಲಾಗುತ್ತಿತ್ತು. ನಾನು ಅಲ್ಲು ಅರ್ಜುನ್​ ಅವರ ದೊಡ್ಡ ಅಭಿಮಾನಿ’ ಎಂದು ಸಾಕ್ಷಿ ಧೋನಿ ಹೇಳಿದ್ದಾರೆ. ಈ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ: Allu Arjun: ‘ಪುಷ್ಪ 2’ ಪೋಸ್ಟರ್​ ರೀತಿ ವೇಷ ಧರಿಸಿ ಬಂದ ಸಂಸದ; ಅಲ್ಲು ಅರ್ಜುನ್​ ಅಭಿಮಾನಿಗಳಲ್ಲಿ ಹೆಚ್ಚಿತು ಕ್ರೇಜ್​

ಧೋನಿ ಅವರಿಗೆ ತಮಿಳುನಾಡಿನಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಹಾಗಾಗಿ ಅವರು ತಮ್ಮ ಸಂಸ್ಥೆಯ ಮೊದಲ ಸಿನಿಮಾವನ್ನು ತಮಿಳಿನಲ್ಲಿ ನಿರ್ಮಿಸುತ್ತಿದ್ದಾರೆ. ‘ಎಲ್​ಜಿಎಂ’ ಸಿನಿಮಾಗೆ ರಮೇಶ್ ತಮಿಳ್ಮಣಿ ನಿರ್ದೇಶನ ಮಾಡಿದ್ದಾರೆ. ಹರೀಶ್ ಕಲ್ಯಾಣ್, ಇವಾನಾ, ಯೋಗಿ ಬಾಬು, ಮಿರ್ಚಿ ವಿಜಯ್, ನದಿಯಾ ಸೇರಿದಂತೆ ಅನೇಕರು ಈ ಚಿತ್ರದಲ್ಲಿ ನಟಿಸಿದ್ದಾರೆ. ಜುಲೈ 28ರಂದು ಈ ಸಿನಿಮಾ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು