AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ಬದಲಾಗಲಿದೆ ಮುದ್ದುಲಕ್ಷ್ಮೀ ಧಾರಾವಾಹಿ ಕಥೆ

‘ಮುದ್ದುಲಕ್ಷ್ಮೀ’ ಧಾರಾವಾಹಿ ರಿಮೇಕ್ ಶೋ ಎನ್ನಲಾಗಿತ್ತು. ಆದರೆ, ಈಗ ಧಾರಾವಾಹಿ ತಂಡದವರು ತಮ್ಮದೇ ಕಥೆಯೊಂದಿಗೆ ಧಾರಾವಾಹಿ ಮುಂದುವರಿಸಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

ಶೀಘ್ರವೇ ಬದಲಾಗಲಿದೆ ಮುದ್ದುಲಕ್ಷ್ಮೀ ಧಾರಾವಾಹಿ ಕಥೆ
ಶೀಘ್ರವೇ ಬದಲಾಗಲಿದೆ ಮುದ್ದುಲಕ್ಷ್ಮೀ ಧಾರಾವಾಹಿ ಕಥೆ
TV9 Web
| Edited By: |

Updated on: Jun 12, 2021 | 5:21 PM

Share

ಸಾಮಾಜಿಕ ಸಂದೇಶ ಹೊಂದಿರುವ ‘ಮುದ್ದುಲಕ್ಷ್ಮೀ’ ಧಾರಾವಾಹಿ ಇತ್ತೀಚೆಗೆ 1000 ಎಪಿಸೋಡ್​​ಗಳನ್ನು ಪೂರೈಸಿದೆ. ಈ ಮೂಲಕ ಧಾರಾವಾಹಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಈ ಸಂಭ್ರಮದ ಮಧ್ಯೆಯೇ ‘ಮುದ್ದುಲಕ್ಷ್ಮೀ’ ವೀಕ್ಷಕರಿಗೆ ಅಚ್ಚರಿಯ ವಿಚಾರ ನೀಡಿದೆ. ಈ ಧಾರಾವಾಹಿಯ ಕಥೆ ಸಂಪೂರ್ಣವಾಗಿ ಬದಲಾಗಲಿದೆ ಎನ್ನಲಾಗಿದೆ. ಈ ವಿಚಾರ ತಿಳಿದು ವೀಕ್ಷಕರು ಸಾಕಷ್ಟು ಖುಷಿಯಾಗಿದ್ದಾರೆ.

‘ಮುದ್ದುಲಕ್ಷ್ಮೀ’ ಧಾರಾವಾಹಿ ರಿಮೇಕ್ ಶೋ ಎನ್ನಲಾಗಿತ್ತು. ಆದರೆ, ಈಗ ಧಾರಾವಾಹಿ ತಂಡದವರು ತಮ್ಮದೇ ಕಥೆಯೊಂದಿಗೆ ಧಾರಾವಾಹಿ ಮುಂದುವರಿಸಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಸದ್ಯ, ಹೊಸ ಪಾತ್ರಗಳನ್ನು ಧಾರಾವಾಹಿ ಪರಿಚಯಿಸುತ್ತಿದ್ದು, ಕಥೆಗೆ ಹೊಸ ಆಯಾಮ ಸಿಗುವ ನಿರೀಕ್ಷೆ ಇದೆ.

‘ಮುದ್ದುಲಕ್ಷ್ಮೀ’ ಧಾರಾವಾಹಿಯಲ್ಲಿ ನಾಯಕ ಧ್ರುವಂತ್ ವೃತ್ತಿಯಲ್ಲಿ ವೈದ್ಯ. ಆತ ಸೌಂದರ್ಯವತಿ ಅಲ್ಲದ ಹೆಣ್ಣನ್ನು ಪ್ರೀತಿಸಿ ಮದುವೆ ಆಗುತ್ತಾನೆ. ನಂತರ ಅವರ ಜೀವನದಲ್ಲಿ ಏನೆಲ್ಲ ಆಗುತ್ತದೆ ಎಂಬುದು ಈ ಧಾರಾವಾಹಿಯ ಕಥೆ.

ಇನ್ನು, ಮುದ್ದುಲಕ್ಷ್ಮೀ ಧಾರಾವಾಹಿ ಇತ್ತೀಚೆಗೆ 1000 ಎಪಿಸೋಡ್​ಗಳನ್ನು ಪೂರ್ಣಗೊಳಿಸಿತ್ತು. ಲಾಕ್​ಡೌನ್​ ಸಂದರ್ಭವಾದ್ದರಿಂದ ಇದನ್ನು ಸೆಲೆಬ್ರೆಟ್​ ಮಾಡೋಕೆ ಸಾಧ್ಯವಾಗಿರಲಿಲ್ಲ. ಈಗ ‘ಮುದ್ದುಲಕ್ಷ್ಮೀ’ ತಂಡ ಕೇಕ್ ಕತ್ತರಿಸುವ ಮೂಲಕ ಹೊಸ ಮೈಲಿಗಲ್ಲಿಗೆ ಕಾಲಿಟ್ಟಿದ್ದನ್ನು ಸಂಭ್ರಮಿಸಿದೆ. ತಂಡದ ಎಲ್ಲಾ ಸಿಬ್ಬಂದಿ ಇದರಲ್ಲಿ ಪಾಲ್ಗೊಂಡಿದ್ದು, ಫೋಟೋ ಹಾಗೂ ವಿಡಿಯೋಗಳು ಸಾಕಷ್ಟು ವೈರಲ್​ ಆಗಿವೆ.

ಇನ್ನು, ದೇಶಾದ್ಯಂತ ಕೊವಿಡ್ ಪ್ರಕರಣಗಳು ಹೆಚ್ಚಿವೆ. ಈ ಕಾರಣಕ್ಕೆ ಕೊವಿಡ್​ ನಿಯಂತ್ರಣಕ್ಕೆ ಸರ್ಕಾರ ಸಾಕಷ್ಟು ಪ್ರಯತ್ನಪಡುತ್ತಿದೆ. ಈ ಧಾರಾವಾಹಿಯಲ್ಲೂ ಕೊವಿಡ್​ ಬಗ್ಗೆ ಜಾಗೃತಿ ಮೂಡಿಸುವ ಎಳೆಯನ್ನು ಸೇರಿಸಲಾಗಿದೆ.

ಇದನ್ನೂ ಓದಿ: ಕನ್ನಡದಲ್ಲಿ ಬರ್ತಿದೆ ನೇತಾಜಿ ಸುಭಾಷ್​ ಚಂದ್ರ ಬೋಸ್​ ಬಗ್ಗೆ ಧಾರಾವಾಹಿ; ಜೂನ್​ 7ರಿಂದ ಶುರು

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?