Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುದ್ದುಲಕ್ಷ್ಮೀ ಧಾರಾವಾಹಿಗೆ ಗುಡ್​ಬೈ ಹೇಳಿದ ನಟ ಚರಿತ್​ ಬಾಳಪ್ಪ

ಮಂಗಳೂರು ಮೂಲದವರಾದ ಚರಿತ್​ ಉನ್ನತ ಹುದ್ದೆಯಲ್ಲಿ ಕೆಲಸ ಮಾಡಿದ್ದರು. ನಟನೆಯ ತುಡಿತ ಹೆಚ್ಚಿದ್ದರಿಂದ ಕೆಲಸವನ್ನು ತೊರೆದು ಅವರು ಬಣ್ಣದ ಲೋಕಕ್ಕೆ ಬಂದರು.

ಮುದ್ದುಲಕ್ಷ್ಮೀ ಧಾರಾವಾಹಿಗೆ ಗುಡ್​ಬೈ ಹೇಳಿದ ನಟ ಚರಿತ್​ ಬಾಳಪ್ಪ
ಮುದ್ದುಲಕ್ಷ್ಮೀ ಧಾರಾವಾಹಿ
Follow us
ರಾಜೇಶ್ ದುಗ್ಗುಮನೆ
|

Updated on: May 01, 2021 | 5:38 PM

ಮುದ್ದುಲಕ್ಷ್ಮೀ ಧಾರಾವಾಹಿ ಕಡೆಯಿಂದ ಕಹಿಸುದ್ದಿಯೊಂದು ಹೊರಬಿದ್ದಿದೆ. ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದ ನಟ ಚರಿತ್ ಬಾಳಪ್ಪ ಧಾರಾವಾಹಿಯಿಂದ ಹೊರ ನಡೆದಿದ್ದಾರೆ. ಇದಕ್ಕೆ ಅವರು ಕೊವಿಡ್​ ಕಾರಣ ನೀಡಿದ್ದಾರೆ. ಇತ್ತೀಚೆಗೆ ಈ ಧಾರಾವಾಹಿ 1000 ಕಂತುಗಳನ್ನು ಪೂರೈಸಿತ್ತು. ಹೀಗಿರುವಾಗಲೇ ಅವರು ಧಾರಾವಾಹಿಯಲ್ಲಿ ನಟಿಸುತ್ತಿಲ್ಲ ಎನ್ನುವ ವಿಚಾರ ಅಭಿಮಾನಿಗಳಿಗೆ ಬೇಸರ ತರಿಸಿದೆ.

ಕೊರೊನಾದಿಂದ ಪರಿಸ್ಥಿತಿ ತುಂಬಾನೇ ಕೆಟ್ಟದಾಗುತ್ತಿದೆ. ಹೀಗಾಗಿ ನಾನು ಮುದ್ದುಲಕ್ಷ್ಮೀ ಧಾರಾವಾಹಿಯಿಂದ ಹೊರ ಬರುತ್ತಿದ್ದೇನೆ. ಜಗತ್ತು ಮತ್ತೆ ಮೊದಲಿನಂತಾಗಲಿ. ನನಗೆ ಬೆಂಬಲವಾಗಿ ನಿಂತ ಎಲ್ಲರಿಗೂ ಧನ್ಯವಾದ ಎಂದು ಚರಿತ್​ ಫೇಸ್​ಬುಕ್​ನಲ್ಲಿ ಪೋಸ್ಟ್​ ಒಂದನ್ನು ಹಾಕಿದ್ದಾರೆ.

ಮಂಗಳೂರು ಮೂಲದವರಾದ ಚರಿತ್​ ಉನ್ನತ ಹುದ್ದೆಯಲ್ಲಿ ಕೆಲಸ ಮಾಡಿದ್ದರು. ನಟನೆಯ ತುಡಿತ ಹೆಚ್ಚಿದ್ದರಿಂದ ಕೆಲಸವನ್ನು ತೊರೆದು ಅವರು ಬಣ್ಣದ ಲೋಕಕ್ಕೆ ಬಂದರು. ಮುದ್ದುಲಕ್ಷ್ಮೀ ಧಾರಾವಾಹಿಗೂ ಮೊದಲು ಅವರು ಅನೇಕ ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿದ್ದರು.

ಚರಿತ್ ಮುದ್ದುಲಕ್ಷ್ಮೀ ಧಾರಾವಾಹಿಯಲ್ಲಿ ನಾಯಕ ಧ್ರುವಂತ್ ಪಾತ್ರಕ್ಕೆ ಜೀವ ತುಂಬಿದ್ದರು​. ಧ್ರುವಂತ್ ವೃತ್ತಿಯಲ್ಲಿ ವೈದ್ಯ. ಆತ ಸೌಂದರ್ಯವತಿ ಅಲ್ಲದ ಹೆಣ್ಣನ್ನು ಪ್ರೀತಿಸಿ ಮದುವೆ ಆಗುತ್ತಾನೆ. ನಂತರ ಅವರ ಜೀವನದಲ್ಲಿ ಏನೆಲ್ಲ ಆಗುತ್ತದೆ ಎಂಬುದು ಈ ಧಾರಾವಾಹಿಯ ಕಥೆ. ಹೀರೋ ಪಾತ್ರಕ್ಕೆ ನೆಗೆಟಿವ್​ ಶೇಡ್​ ಇತ್ತು. ಈ ಪಾತ್ರವನ್ನು ಅವರು ಯಶಸ್ವಿಯಾಗಿ ನಿರ್ವಹಿಸಿದ್ದರು.

ಕೊರೊನಾ ವೈರಸ್​ ದೇಶದಲ್ಲಿ ಮಿತಿಮೀರಿ ಹೆಚ್ಚುತ್ತಿದೆ. ಇಂದು ಒಂದೇ ದಿನ 4 ಲಕ್ಷ ಕೇಸ್​ಗಳು ಭಾರತದಲ್ಲಿ ವರದಿಯಾಗಿದೆ. ಕರ್ನಾಟಕ ಸೇರಿದಂತೆ ಅನೇಕ ಕಡೆಗಳಲ್ಲಿ ಶೂಟಿಂಗ್​ ನಿಲ್ಲಿಸಲಾಗಿದೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಅವರು ಧಾರಾವಾಹಿಯಿಂದ ಹೊರ ಬಂದಿರುವುದು ಅನೇಕರು ಸರಿ ಎಂದು ಹೇಳಿಕೊಂಡಿದ್ದಾರೆ.  

ಇದನ್ನೂ ಓದಿ: ಹೊಸ ಮೈಲಿಗಲ್ಲು ಸೃಷ್ಟಿಸಿದ ಅನಿರುದ್ಧ-ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿ

ಬೀದಿಗೆ ಬಂತು ಶ್ರೀಕೃಷ್ಣ ಧಾರಾವಾಹಿ ನಟನ ಬದುಕು; ಕಣ್ಣೀರಿಟ್ಟ ಸುನಿಲ್​ ನಗರ್​

ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್