AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುದ್ದುಲಕ್ಷ್ಮೀ ಧಾರಾವಾಹಿಗೆ ಗುಡ್​ಬೈ ಹೇಳಿದ ನಟ ಚರಿತ್​ ಬಾಳಪ್ಪ

ಮಂಗಳೂರು ಮೂಲದವರಾದ ಚರಿತ್​ ಉನ್ನತ ಹುದ್ದೆಯಲ್ಲಿ ಕೆಲಸ ಮಾಡಿದ್ದರು. ನಟನೆಯ ತುಡಿತ ಹೆಚ್ಚಿದ್ದರಿಂದ ಕೆಲಸವನ್ನು ತೊರೆದು ಅವರು ಬಣ್ಣದ ಲೋಕಕ್ಕೆ ಬಂದರು.

ಮುದ್ದುಲಕ್ಷ್ಮೀ ಧಾರಾವಾಹಿಗೆ ಗುಡ್​ಬೈ ಹೇಳಿದ ನಟ ಚರಿತ್​ ಬಾಳಪ್ಪ
ಮುದ್ದುಲಕ್ಷ್ಮೀ ಧಾರಾವಾಹಿ
ರಾಜೇಶ್ ದುಗ್ಗುಮನೆ
|

Updated on: May 01, 2021 | 5:38 PM

Share

ಮುದ್ದುಲಕ್ಷ್ಮೀ ಧಾರಾವಾಹಿ ಕಡೆಯಿಂದ ಕಹಿಸುದ್ದಿಯೊಂದು ಹೊರಬಿದ್ದಿದೆ. ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದ ನಟ ಚರಿತ್ ಬಾಳಪ್ಪ ಧಾರಾವಾಹಿಯಿಂದ ಹೊರ ನಡೆದಿದ್ದಾರೆ. ಇದಕ್ಕೆ ಅವರು ಕೊವಿಡ್​ ಕಾರಣ ನೀಡಿದ್ದಾರೆ. ಇತ್ತೀಚೆಗೆ ಈ ಧಾರಾವಾಹಿ 1000 ಕಂತುಗಳನ್ನು ಪೂರೈಸಿತ್ತು. ಹೀಗಿರುವಾಗಲೇ ಅವರು ಧಾರಾವಾಹಿಯಲ್ಲಿ ನಟಿಸುತ್ತಿಲ್ಲ ಎನ್ನುವ ವಿಚಾರ ಅಭಿಮಾನಿಗಳಿಗೆ ಬೇಸರ ತರಿಸಿದೆ.

ಕೊರೊನಾದಿಂದ ಪರಿಸ್ಥಿತಿ ತುಂಬಾನೇ ಕೆಟ್ಟದಾಗುತ್ತಿದೆ. ಹೀಗಾಗಿ ನಾನು ಮುದ್ದುಲಕ್ಷ್ಮೀ ಧಾರಾವಾಹಿಯಿಂದ ಹೊರ ಬರುತ್ತಿದ್ದೇನೆ. ಜಗತ್ತು ಮತ್ತೆ ಮೊದಲಿನಂತಾಗಲಿ. ನನಗೆ ಬೆಂಬಲವಾಗಿ ನಿಂತ ಎಲ್ಲರಿಗೂ ಧನ್ಯವಾದ ಎಂದು ಚರಿತ್​ ಫೇಸ್​ಬುಕ್​ನಲ್ಲಿ ಪೋಸ್ಟ್​ ಒಂದನ್ನು ಹಾಕಿದ್ದಾರೆ.

ಮಂಗಳೂರು ಮೂಲದವರಾದ ಚರಿತ್​ ಉನ್ನತ ಹುದ್ದೆಯಲ್ಲಿ ಕೆಲಸ ಮಾಡಿದ್ದರು. ನಟನೆಯ ತುಡಿತ ಹೆಚ್ಚಿದ್ದರಿಂದ ಕೆಲಸವನ್ನು ತೊರೆದು ಅವರು ಬಣ್ಣದ ಲೋಕಕ್ಕೆ ಬಂದರು. ಮುದ್ದುಲಕ್ಷ್ಮೀ ಧಾರಾವಾಹಿಗೂ ಮೊದಲು ಅವರು ಅನೇಕ ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿದ್ದರು.

ಚರಿತ್ ಮುದ್ದುಲಕ್ಷ್ಮೀ ಧಾರಾವಾಹಿಯಲ್ಲಿ ನಾಯಕ ಧ್ರುವಂತ್ ಪಾತ್ರಕ್ಕೆ ಜೀವ ತುಂಬಿದ್ದರು​. ಧ್ರುವಂತ್ ವೃತ್ತಿಯಲ್ಲಿ ವೈದ್ಯ. ಆತ ಸೌಂದರ್ಯವತಿ ಅಲ್ಲದ ಹೆಣ್ಣನ್ನು ಪ್ರೀತಿಸಿ ಮದುವೆ ಆಗುತ್ತಾನೆ. ನಂತರ ಅವರ ಜೀವನದಲ್ಲಿ ಏನೆಲ್ಲ ಆಗುತ್ತದೆ ಎಂಬುದು ಈ ಧಾರಾವಾಹಿಯ ಕಥೆ. ಹೀರೋ ಪಾತ್ರಕ್ಕೆ ನೆಗೆಟಿವ್​ ಶೇಡ್​ ಇತ್ತು. ಈ ಪಾತ್ರವನ್ನು ಅವರು ಯಶಸ್ವಿಯಾಗಿ ನಿರ್ವಹಿಸಿದ್ದರು.

ಕೊರೊನಾ ವೈರಸ್​ ದೇಶದಲ್ಲಿ ಮಿತಿಮೀರಿ ಹೆಚ್ಚುತ್ತಿದೆ. ಇಂದು ಒಂದೇ ದಿನ 4 ಲಕ್ಷ ಕೇಸ್​ಗಳು ಭಾರತದಲ್ಲಿ ವರದಿಯಾಗಿದೆ. ಕರ್ನಾಟಕ ಸೇರಿದಂತೆ ಅನೇಕ ಕಡೆಗಳಲ್ಲಿ ಶೂಟಿಂಗ್​ ನಿಲ್ಲಿಸಲಾಗಿದೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಅವರು ಧಾರಾವಾಹಿಯಿಂದ ಹೊರ ಬಂದಿರುವುದು ಅನೇಕರು ಸರಿ ಎಂದು ಹೇಳಿಕೊಂಡಿದ್ದಾರೆ.  

ಇದನ್ನೂ ಓದಿ: ಹೊಸ ಮೈಲಿಗಲ್ಲು ಸೃಷ್ಟಿಸಿದ ಅನಿರುದ್ಧ-ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿ

ಬೀದಿಗೆ ಬಂತು ಶ್ರೀಕೃಷ್ಣ ಧಾರಾವಾಹಿ ನಟನ ಬದುಕು; ಕಣ್ಣೀರಿಟ್ಟ ಸುನಿಲ್​ ನಗರ್​

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು