AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುದ್ದುಲಕ್ಷ್ಮೀ ಧಾರಾವಾಹಿಗೆ ಗುಡ್​ಬೈ ಹೇಳಿದ ನಟ ಚರಿತ್​ ಬಾಳಪ್ಪ

ಮಂಗಳೂರು ಮೂಲದವರಾದ ಚರಿತ್​ ಉನ್ನತ ಹುದ್ದೆಯಲ್ಲಿ ಕೆಲಸ ಮಾಡಿದ್ದರು. ನಟನೆಯ ತುಡಿತ ಹೆಚ್ಚಿದ್ದರಿಂದ ಕೆಲಸವನ್ನು ತೊರೆದು ಅವರು ಬಣ್ಣದ ಲೋಕಕ್ಕೆ ಬಂದರು.

ಮುದ್ದುಲಕ್ಷ್ಮೀ ಧಾರಾವಾಹಿಗೆ ಗುಡ್​ಬೈ ಹೇಳಿದ ನಟ ಚರಿತ್​ ಬಾಳಪ್ಪ
ಮುದ್ದುಲಕ್ಷ್ಮೀ ಧಾರಾವಾಹಿ
Follow us
ರಾಜೇಶ್ ದುಗ್ಗುಮನೆ
|

Updated on: May 01, 2021 | 5:38 PM

ಮುದ್ದುಲಕ್ಷ್ಮೀ ಧಾರಾವಾಹಿ ಕಡೆಯಿಂದ ಕಹಿಸುದ್ದಿಯೊಂದು ಹೊರಬಿದ್ದಿದೆ. ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದ ನಟ ಚರಿತ್ ಬಾಳಪ್ಪ ಧಾರಾವಾಹಿಯಿಂದ ಹೊರ ನಡೆದಿದ್ದಾರೆ. ಇದಕ್ಕೆ ಅವರು ಕೊವಿಡ್​ ಕಾರಣ ನೀಡಿದ್ದಾರೆ. ಇತ್ತೀಚೆಗೆ ಈ ಧಾರಾವಾಹಿ 1000 ಕಂತುಗಳನ್ನು ಪೂರೈಸಿತ್ತು. ಹೀಗಿರುವಾಗಲೇ ಅವರು ಧಾರಾವಾಹಿಯಲ್ಲಿ ನಟಿಸುತ್ತಿಲ್ಲ ಎನ್ನುವ ವಿಚಾರ ಅಭಿಮಾನಿಗಳಿಗೆ ಬೇಸರ ತರಿಸಿದೆ.

ಕೊರೊನಾದಿಂದ ಪರಿಸ್ಥಿತಿ ತುಂಬಾನೇ ಕೆಟ್ಟದಾಗುತ್ತಿದೆ. ಹೀಗಾಗಿ ನಾನು ಮುದ್ದುಲಕ್ಷ್ಮೀ ಧಾರಾವಾಹಿಯಿಂದ ಹೊರ ಬರುತ್ತಿದ್ದೇನೆ. ಜಗತ್ತು ಮತ್ತೆ ಮೊದಲಿನಂತಾಗಲಿ. ನನಗೆ ಬೆಂಬಲವಾಗಿ ನಿಂತ ಎಲ್ಲರಿಗೂ ಧನ್ಯವಾದ ಎಂದು ಚರಿತ್​ ಫೇಸ್​ಬುಕ್​ನಲ್ಲಿ ಪೋಸ್ಟ್​ ಒಂದನ್ನು ಹಾಕಿದ್ದಾರೆ.

ಮಂಗಳೂರು ಮೂಲದವರಾದ ಚರಿತ್​ ಉನ್ನತ ಹುದ್ದೆಯಲ್ಲಿ ಕೆಲಸ ಮಾಡಿದ್ದರು. ನಟನೆಯ ತುಡಿತ ಹೆಚ್ಚಿದ್ದರಿಂದ ಕೆಲಸವನ್ನು ತೊರೆದು ಅವರು ಬಣ್ಣದ ಲೋಕಕ್ಕೆ ಬಂದರು. ಮುದ್ದುಲಕ್ಷ್ಮೀ ಧಾರಾವಾಹಿಗೂ ಮೊದಲು ಅವರು ಅನೇಕ ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿದ್ದರು.

ಚರಿತ್ ಮುದ್ದುಲಕ್ಷ್ಮೀ ಧಾರಾವಾಹಿಯಲ್ಲಿ ನಾಯಕ ಧ್ರುವಂತ್ ಪಾತ್ರಕ್ಕೆ ಜೀವ ತುಂಬಿದ್ದರು​. ಧ್ರುವಂತ್ ವೃತ್ತಿಯಲ್ಲಿ ವೈದ್ಯ. ಆತ ಸೌಂದರ್ಯವತಿ ಅಲ್ಲದ ಹೆಣ್ಣನ್ನು ಪ್ರೀತಿಸಿ ಮದುವೆ ಆಗುತ್ತಾನೆ. ನಂತರ ಅವರ ಜೀವನದಲ್ಲಿ ಏನೆಲ್ಲ ಆಗುತ್ತದೆ ಎಂಬುದು ಈ ಧಾರಾವಾಹಿಯ ಕಥೆ. ಹೀರೋ ಪಾತ್ರಕ್ಕೆ ನೆಗೆಟಿವ್​ ಶೇಡ್​ ಇತ್ತು. ಈ ಪಾತ್ರವನ್ನು ಅವರು ಯಶಸ್ವಿಯಾಗಿ ನಿರ್ವಹಿಸಿದ್ದರು.

ಕೊರೊನಾ ವೈರಸ್​ ದೇಶದಲ್ಲಿ ಮಿತಿಮೀರಿ ಹೆಚ್ಚುತ್ತಿದೆ. ಇಂದು ಒಂದೇ ದಿನ 4 ಲಕ್ಷ ಕೇಸ್​ಗಳು ಭಾರತದಲ್ಲಿ ವರದಿಯಾಗಿದೆ. ಕರ್ನಾಟಕ ಸೇರಿದಂತೆ ಅನೇಕ ಕಡೆಗಳಲ್ಲಿ ಶೂಟಿಂಗ್​ ನಿಲ್ಲಿಸಲಾಗಿದೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಅವರು ಧಾರಾವಾಹಿಯಿಂದ ಹೊರ ಬಂದಿರುವುದು ಅನೇಕರು ಸರಿ ಎಂದು ಹೇಳಿಕೊಂಡಿದ್ದಾರೆ.  

ಇದನ್ನೂ ಓದಿ: ಹೊಸ ಮೈಲಿಗಲ್ಲು ಸೃಷ್ಟಿಸಿದ ಅನಿರುದ್ಧ-ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿ

ಬೀದಿಗೆ ಬಂತು ಶ್ರೀಕೃಷ್ಣ ಧಾರಾವಾಹಿ ನಟನ ಬದುಕು; ಕಣ್ಣೀರಿಟ್ಟ ಸುನಿಲ್​ ನಗರ್​

ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್