AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣ ಮಾಡಿದ್ದ ಪಾತ್ರದಲ್ಲಿ ಸಿಂಬು; ಹೇಗಿದೆ ನೋಡಿ ‘ಮಫ್ತಿ’ ಸಿನಿಮಾದ ತಮಿಳು ರಿಮೇಕ್​ ಟೀಸರ್​

‘ಪತ್ತು ತಲ ’ ಚಿತ್ರದಲ್ಲಿ ಸಿಂಬು ಜೊತೆ ಗೌತಮ್​ ಕಾರ್ತಿಕ್​, ಪ್ರಿಯಾ ಭವಾನಿ ಅಭಿನಯಿಸಿದ್ದಾರೆ. ಒಂದೇ ದಿನಕ್ಕೆ ಯೂಟ್ಯೂಬ್​ನಲ್ಲಿ ಈ ಸಿನಿಮಾದ ಟೀಸರ್​​ 1.4 ಮಿಲಿಯನ್​ ವೀಕ್ಷಣೆ ಕಂಡಿದೆ.

ಶಿವಣ್ಣ ಮಾಡಿದ್ದ ಪಾತ್ರದಲ್ಲಿ ಸಿಂಬು; ಹೇಗಿದೆ ನೋಡಿ ‘ಮಫ್ತಿ’ ಸಿನಿಮಾದ ತಮಿಳು ರಿಮೇಕ್​ ಟೀಸರ್​
ಸಿಂಬು- ಶಿವರಾಜ್​ಕುಮಾರ್​
TV9 Web
| Edited By: |

Updated on: Feb 04, 2022 | 3:42 PM

Share

ಕಾಲಿವುಡ್​ ನಟ ಸಿಂಬು ಅವರು ಅನೇಕ ಬಗೆಯ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತ ಬಂದಿದ್ದಾರೆ. ಚಿತ್ರರಂಗದಲ್ಲಿ ಅವರ ಅನುಭವ ಅಪಾರ. ಫೆ.3ರಂದು ಸಿಂಬು (Simbu) ಜನ್ಮದಿನದ ಪ್ರಯುಕ್ತ ‘ಪತ್ತು ತಲ’ ಚಿತ್ರದ ಟೀಸರ್​ ಬಿಡುಗಡೆ ಮಾಡಲಾಗಿದೆ. ಇದು ಕನ್ನಡದ ‘ಮಫ್ತಿ’ (Mufti Kannada Movie) ಸಿನಿಮಾದ ತಮಿಳು ರಿಮೇಕ್​. ಕನ್ನಡದಲ್ಲಿ ಶಿವರಾಜ್​ಕುಮಾರ್ (Shivarajkumar)​ ಮಾಡಿದ್ದ ಪಾತ್ರವನ್ನು ತಮಿಳಿನಲ್ಲಿ ಸಿಂಬು ಮಾಡುತ್ತಿದ್ದಾರೆ. ಮಫ್ತಿ ರೀತಿಯೇ ‘ಪತ್ತು ತಲ’ ಸಿನಿಮಾ ಮೇಕಿಂಗ್​ ಕೂಡ ಅದ್ದೂರಿಯಾಗಿದೆ ಎಂಬುದಕ್ಕೆ ಈ ಟೀಸರ್​ನಲ್ಲಿ ಸಾಕ್ಷಿ ಸಿಕ್ಕಿದೆ. ಇತ್ತೀಚೆಗೆ ತೆರೆಕಂಡ ‘ಮಾನಾಡು’ ಸಿನಿಮಾ ಮೂಲಕ ಸಿಂಬು ಅವರಿಗೆ ಭರ್ಜರಿ ಗೆಲುವು ಸಿಕ್ಕಿತು. ಈಗ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಆ ಪೈಕಿ ‘ಪಧು ಥಲಾ’ ಕೂಡ ನಿರೀಕ್ಷೆ ಹುಟ್ಟುಹಾಕಿದೆ.

‘ಪತ್ತು ತಲ’ ಚಿತ್ರದಲ್ಲಿ ಸಿಂಬು ಜೊತೆ ಗೌತಮ್​ ಕಾರ್ತಿಕ್​, ಪ್ರಿಯಾ ಭವಾನಿ ಮುಂತಾದವರು ಅಭಿನಯಿಸಿದ್ದಾರೆ. ಒಬೆಲಿ ಎನ್​. ಕೃಷ್ಣ ಅವರು ನಿರ್ದೇಶನ ಮಾಡುತ್ತಿದ್ದಾರೆ. ಒಂದೇ ದಿನಕ್ಕೆ ಯೂಟ್ಯೂಬ್​ನಲ್ಲಿ ಈ ಸಿನಿಮಾದ ಟೀಸರ್​​ 1.4 ಮಿಲಿಯನ್​ ವೀಕ್ಷಣೆ ಕಂಡಿದೆ. ಆ ಮೂಲಕ ಚಿತ್ರದ ಬಗ್ಗೆ ಜನರಿಗೆ ಇರುವ ಕ್ರೇಜ್​ ಎಷ್ಟು ಎಂಬುದು ಗೊತ್ತಾಗಿದೆ. ಈ ಚಿತ್ರಕ್ಕೆ ಎ.ಆರ್​. ರೆಹಮಾನ್​ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ ಎಂಬುದು ವಿಶೇಷ.

(‘ಪತ್ತು ತಲ’  ಟೀಸರ್​ ಇಲ್ಲಿದೆ)

ಬಾಲನಟನಾಗಿಯೇ ಚಿತ್ರರಂಗಕ್ಕೆ ಸಿಂಬು ಕಾಲಿಟ್ಟರು. ಸಿನಿಮಾ ಕ್ಷೇತ್ರದಲ್ಲಿ ಅವರು ಹಲವು ಏಳು-ಬೀಳುಗಳನ್ನು ಕಂಡಿದ್ದಾರೆ. 1980ರ ದಶಕದಿಂದಲೂ ಅವರು ಬಣ್ಣದ ಲೋಕದ ನಂಟು ಹೊಂದಿದ್ದಾರೆ. ನಿರ್ದೇಶಕನಾಗಿ, ಚಿತ್ರಕಥೆ ಬರಹಗಾರನಾಗಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ. 20ರ ಪ್ರಾಯಕ್ಕೂ ಮುನ್ನವೇ ಅವರು ಹೀರೋ ಆದರು. 21ನೇ ವಯಸ್ಸಿಗೆ ‘ಮನ್ಮಥಂ’ ಚಿತ್ರದ ಸ್ಕ್ರಿಪ್ಟ್​ ಬರೆದು, ನಿರ್ದೇಶನ ವಿಭಾಗದ ಮೇಲ್ವಿಚಾರಣೆ ನೋಡಿಕೊಂಡರು. ಆ ಚಿತ್ರ ಸೂಪರ್​ ಹಿಟ್​ ಆಯಿತು. ನಟನಾಗಿ ಅವರ ವೃತ್ತಿಜೀವನಕ್ಕೆ ದೊಡ್ಡ ಯಶಸ್ಸು ತಂದುಕೊಟ್ಟಿತು. ಕೈತುಂಬ ಆಫರ್​ ಇಟ್ಟುಕೊಂಡು, ಬಹುಬೇಡಿಕೆಯ ನಟನಾಗಿ ಅವರು ಗುರುತಿಸಿಕೊಂಡಿದ್ದಾರೆ.

ಸಿಂಬುಗೆ ಡಾಕ್ಟರೇಟ್​ ಗೌರವ:

ಕೆಲವೇ ದಿನಗಳ ಹಿಂದೆ ಸಿಂಬು ಮುಡಿಗೆ ಇನ್ನೊಂದು ಗರಿ ಸೇರಿಕೊಂಡಿತು. ಅವರಿಗೆ ಗೌರವ ಡಾಕ್ಟರೇಟ್​ ಸಿಕ್ಕಿದೆ. ಸಿನಿಮಾ ಕ್ಷೇತ್ರದಲ್ಲಿನ ಅವರ ಸಾಧನೆಯನ್ನು ಗುರುತಿಸಿ ಈಗ ಗೌರವ ನೀಡಲಾಗಿದೆ. ವೇಲ್ಸ್​ ವಿಶ್ವವಿದ್ಯಾಲಯವು ಸಿಂಬುಗೆ ಗೌರವ ಡಾಕ್ಟರೇಟ್​ ಪದವಿ ನೀಡಿದೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಸಮಾರಂಭದಲ್ಲಿ ಸಿಂಬು ಈ ಗೌರವ ಸ್ವೀಕರಿಸಿದರು. ‘ಈ ದೊಡ್ಡ ಗೌರವವನ್ನು ನಾನು ತಮಿಳು ಚಿತ್ರರಂಗಕ್ಕೆ ಹಾಗೂ ನನ್ನ ತಂದೆ-ತಾಯಿಗೆ ಅರ್ಪಿಸುತ್ತೇನೆ. ಅವರಿಂದಲೇ ನಾನು ಸಿನಿಮಾರಂಗದಲ್ಲಿ ಬೆಳೆಯಲು ಸಾಧ್ಯವಾಯಿತು. ಅಂತಿಮವಾಗಿ ನನ್ನ ಅಭಿಮಾನಿಗಳು. ಅವರಿಲ್ಲದೇ ನಾನಿಲ್ಲ’ ಎಂದು ಸಿಂಬು ಟ್ವೀಟ್​ ಮಾಡಿದ್ದರು.

ಇದನ್ನೂ ಓದಿ:

 ಶೀಘ್ರವೇ ಸಿಂಬು-ನಿಧಿ ಅಗರ್​ವಾಲ್​ ಮದುವೆ? ಹೊರ ಬಿತ್ತು ಹೊಸ ಸುದ್ದಿ

‘ಎಲ್ಲರೂ ತೊಂದರೆ ಕೊಡ್ತಿದ್ದಾರೆ’ ಎಂದು ವೇದಿಕೆ ಮೇಲೆ ಕಣ್ಣೀರು ಹಾಕಿದ ಸ್ಟಾರ್​ ನಟ ಸಿಂಬು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ