AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ಬಗ್ಗೆ ಮಹೇಶ್ ಬಾಬು ಹೇಳಿಕೆ; ಹಿಂದಿಯ ಖ್ಯಾತ ನಿರ್ಮಾಪಕ ಕೊಟ್ರು ಉತ್ತರ

ಮುಕೇಶ್ ಬಾಲಿವುಡ್​ನಲ್ಲಿ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಅವರು ಮಹೇಶ್ ಬಾಬು ಹೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರಿಸಿದ್ದಾರೆ. ಅವರು ಹೇಳಿದ ಮಾತಲ್ಲಿ ಕೊಂಕಿದೆಯೇ ಎನ್ನುವುದನ್ನು ಅಭಿಮಾನಿಗಳು ಹುಡುಕುತ್ತಿದ್ದಾರೆ.

ಬಾಲಿವುಡ್ ಬಗ್ಗೆ ಮಹೇಶ್ ಬಾಬು ಹೇಳಿಕೆ; ಹಿಂದಿಯ ಖ್ಯಾತ ನಿರ್ಮಾಪಕ ಕೊಟ್ರು ಉತ್ತರ
ಮಹೇಶ್ ಬಾಬು
TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 11, 2022 | 8:20 PM

Share

ಬಾಲಿವುಡ್ ಹಾಗೂ ದಕ್ಷಿಣ ಭಾರತದ ಚಿತ್ರರಂಗದ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟ ರೀತಿಯ ಪರಿಸ್ಥಿತಿ ಇತ್ತೀಚೆಗೆ ನಿರ್ಮಾಣ ಆಗಿದೆ. ಬಾಲಿವುಡ್ ಮಂದಿ ದಕ್ಷಿಣ ಭಾರತದ ಚಿತ್ರಗಳ ಬಗ್ಗೆ ಮಾತನಾಡುತ್ತಿದ್ದಾರೆ. ಕೆಲ ಬಾಲಿವುಡ್ (Bollywood) ಮಂದಿ ಈ ಬಗ್ಗೆ ಅಸೂಯೆ ಪಟ್ಟುಕೊಂಡಿದ್ದಾರೆ. ಇನ್ನೂ ಕೆಲವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಈ ಮಧ್ಯೆ ಮಹೇಶ್ ಬಾಬು (Mahesh Babu) ಅವರು ತಾವು ಟಾಲಿವುಡ್ (Tollywood) ಬಿಟ್ಟು ಮತ್ತೆಲ್ಲೂ ತೆರಳುವುದಿಲ್ಲ ಎನ್ನುವ ಮಾತನ್ನು ಹೇಳಿದ್ದರು. ಅಷ್ಟೇ ಅಲ್ಲ ‘ಬಾಲಿವುಡ್​ಗೆ ನನ್ನನ್ನು ಭರಿಸುವ ಶಕ್ತಿ ಇಲ್ಲ’ ಎಂದು ನೇರವಾಗಿಯೇ ಹೇಳಿದ್ದರು. ಇದಕ್ಕೆ ಬಾಲಿವುಡ್​ನ ಖ್ಯಾತ ನಿರ್ಮಾಪಕ ಮುಕೇಶ್ ಭಟ್ ಉತ್ತರಿಸಿದ್ದಾರೆ.

ಮುಕೇಶ್ ಬಾಲಿವುಡ್​ನಲ್ಲಿ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ‘ಆಶಿಕಿ 2’ (2013), ‘ಲವ್​ ಗೇಮ್ಸ್​’ (2016), ‘ಸಡಕ್’ (2020) ಮೊದಲಾದ ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಅವರು ಮಹೇಶ್ ಬಾಬು ಹೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರಿಸಿದ್ದಾರೆ. ಅವರು ಹೇಳಿದ ಮಾತಲ್ಲಿ ಕೊಂಕಿದೆಯೇ ಎನ್ನುವುದನ್ನು ಅಭಿಮಾನಿಗಳು ಹುಡುಕುತ್ತಿದ್ದಾರೆ.

‘ಬಾಲಿವುಡ್​​ಗೆ ಅವರನ್ನು ಭರಿಸಲು ಸಾಧ್ಯವಾಗುವುದಿಲ್ಲ ಎಂದರೆ ತುಂಬಾ ಒಳ್ಳೆಯದು. ನಾನು ಅವರಿಗೆ ಶುಭ ಹಾರೈಸುತ್ತೇನೆ. ಅವರು ಸಾಕಷ್ಟು ಪ್ರತಿಭೆಯನ್ನು ಹೊಂದಿದ್ದಾರೆ. ಅವರು ಮಾಡಿದ ಹೆಸರಿಗೆ ತಮ್ಮದೇ ಆದ ಮೌಲ್ಯ ಹೊಂದಿದ್ದಾರೆ. ಅವರು ಅತ್ಯಂತ ಯಶಸ್ವಿ ನಟ. ಅವರ ನಿರೀಕ್ಷೆಗಳಿಗೆ ಬಾಲಿವುಡ್ ಕೆಲಸ ಮಾಡಲು ಸಾಧ್ಯವಾಗದಿದ್ದರೆ ಅದರಲ್ಲಿ ಯಾವುದೇ ತಪ್ಪಿಲ್ಲ. ನಾನು ಅವರಿಗೆ ಶುಭ ಹಾರೈಸುತ್ತೇನೆ’ ಎಂದು ಉತ್ತರಿಸಿದ್ದಾರೆ ಮುಕೇಶ್ ಭಟ್.

ಇದನ್ನೂ ಓದಿ
Image
ಬಿಡುಗಡೆಗೂ ಮುನ್ನವೇ ಲೀಕ್​ ಆಯ್ತು ಮಹೇಶ್​ ಬಾಬು ಹೊಸ ಸಿನಿಮಾದ ದೃಶ್ಯಗಳು; ಫ್ಯಾನ್ಸ್​ ಗರಂ
Image
ಒಂದೇ ಒಂದು ಪೋಸ್ಟರ್​ನಿಂದ ‘ಸರ್ಕಾರು ವಾರಿ ಪಾಟ’ ಟ್ರೇಲರ್​ ಬಗ್ಗೆ ಕೌತುಕ ಕೆರಳಿಸಿದ ಮಹೇಶ್​ ಬಾಬು
Image
‘ಹೆಚ್ಚೆಚ್ಚು ಹೆಮ್ಮೆ ಪಡುವಂತೆ ಮಾಡುತ್ತಿದ್ದೀಯ’; ಮಗಳು ಸಿತಾರಾ ಬಗ್ಗೆ ಮಹೇಶ್​ ಬಾಬು ವಿಶೇಷ ಮಾತು
Image
Megha Shetty: ಮಹೇಶ್ ಬಾಬು ಭೇಟಿ ಹಿಂದಿನ ಉದ್ದೇಶ ತಿಳಿಸಿದ ನಟಿ ಮೇಘಾ ಶೆಟ್ಟಿ

ಮಹೇಶ್ ಬಾಬು ಹೇಳಿದ್ದೇನು?

‘ನನಗೆ ಹಿಂದಿಯಲ್ಲಿ ಸಾಕಷ್ಟು ಆಫರ್‌ಗಳು ಬಂದಿವೆ. ಆದರೆ ಬಾಲಿವುಡ್​ಗೆ ನನ್ನನ್ನು ಭರಿಸಲು ಸಾಧ್ಯವಿಲ್ಲ ಎಂಬುದು ನನ್ನ ಅಭಿಪ್ರಾಯ. ಸಮಯವನ್ನು ಹಾಳು ಮಾಡಲು ನನಗೆ ಇಷ್ಟವಿಲ್ಲ. ದಕ್ಷಿಣದಲ್ಲಿ ನಾನು ಪಡೆಯುವ ಸ್ಟಾರ್‌ಡಮ್ ಮತ್ತು ಗೌರವವು ದೊಡ್ಡದು. ಹಾಗಾಗಿ ನಾನು ಇಲ್ಲಿಯವರನ್ನು ಬಿಟ್ಟು ಬೇರೆ ಉದ್ಯಮಕ್ಕೆ ಹೋಗುವ ಬಗ್ಗೆ ನಾನು ಎಂದಿಗೂ ಯೋಚಿಸಲಿಲ್ಲ. ಸಿನಿಮಾ ಮಾಡುತ್ತಾ ಬೆಳೆಯುವ ಆಲೋಚನೆ ನನ್ನದು. ನನ್ನ ಕನಸು ಈಗ ನನಸಾಗುತ್ತಿದೆ’ ಎಂದಿದ್ದರು ಅವರು.

ಮೇ 12ಕ್ಕೆ ‘ಸರ್ಕಾರು ವಾರಿ ಪಾಟ’

‘ಸರ್ಕಾರು ವಾರಿ ಪಾಟ’ ಸಿನಿಮಾ ಮೇ​ 12ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ಮಹೇಶ್​ ಬಾಬು ಭಿನ್ನ ಗೆಟಪ್​ ತಾಳಿದ್ದಾರೆ. ಈ ಚಿತ್ರದ ಬಗ್ಗೆ ಅವರ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈಗಾಗಲೇ ಸಿನಿಮಾದ ಹಾಡುಗಳು, ಟ್ರೇಲರ್ ಹಿಟ್​ ಆಗಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ