AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

ಹಲವು ದಿನಗಳಿಂದ ಸಲ್ಮಾನ್ ಖಾನ್ ಅವರ ಮೇಲೆ ಕಮಾಲ್ ಖಾನ್ ಅವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತ ಬಂದಿದ್ದರು. ಸಲ್ಮಾನ್ ಖಾನ್ ಭ್ರಷ್ಟಾಚಾರಿ. ಅವರ ಬೀಯಿಂಗ್ ಹ್ಯೂಮನ್ ಬ್ರಾಂಡ್ ಮೂಲಕ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು.

ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ
ಸಲ್ಮಾನ್​ ಖಾನ್​, ಕಮಾಲ್​ ಆರ್​. ಖಾನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 24, 2021 | 7:30 PM

ಸದಾ ಒಂದಿಲ್ಲೊಂದು ವಿಚಾರಕ್ಕೆ ಸಲ್ಮಾನ್​ ಖಾನ್​ ವಿರುದ್ಧ ಹರಿಹಾಯುತ್ತಿದ್ದ ನಟ, ಸಿನಿಮಾ ವಿಮರ್ಶಕ ಕಮಾಲ್  ಆರ್​ ಖಾನ್​ಗೆ ಮುಂಬೈ ಕೋರ್ಟ್​​ನಲ್ಲಿ ತೀವ್ರ ಹಿನ್ನಡೆ ಉಂಟಾಗಿದೆ. ಯಾವುದೇ ರೀತಿಯ ಮಾನಹಾನಿ ಆಗುವಂತಹ ವಿಚಾರಗಳನ್ನು ಸಲ್ಮಾನ್​ ಖಾನ್​ ವಿರುದ್ಧ ಪೋಸ್ಟ್​ ಮಾಡದಂತೆ ಕೋರ್ಟ್​ ಆದೇಶ ನೀಡಿದೆ.  

ಹಲವು ದಿನಗಳಿಂದ ಸಲ್ಮಾನ್ ಖಾನ್ ಅವರ ಮೇಲೆ ಕಮಾಲ್ ಖಾನ್ ಅವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತ ಬಂದಿದ್ದರು. ಸಲ್ಮಾನ್ ಖಾನ್ ಭ್ರಷ್ಟಾಚಾರಿ. ಅವರ ಬೀಯಿಂಗ್ ಹ್ಯೂಮನ್ ಬ್ರಾಂಡ್ ಮೂಲಕ ಮೋಸ ಮಾಡಲಾಗುತ್ತಿದೆ. ಮನಿ ಲಾಂಡರಿಂಗ್ ಮಾಡಲಾಗುತ್ತಿದೆ. ಸಲ್ಮಾನ್ ಖಾನ್ ಸಿನಿಮಾ ನಿರ್ಮಾಣ ಸಂಸ್ಥೆಯಲ್ಲಿ ದರೋಡೆಕೋರರು ಇದ್ದಾರೆ ಎಂದೆಲ್ಲ ಕಮಾಲ್ ಖಾನ್ ಮಾತನಾಡಿದ್ದರು. ಈ ಕಾರಣಕ್ಕೆ ಕಮಾಲ್​ ವಿರುದ್ಧ ಸಲ್ಲು ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಮುಂಬೈ ಸಿವಿಲ್​ ಕೋರ್ಟ್​, ನೇರವಾಗಿ ಅಥವಾ ಪರೋಕ್ಷವಾಗಿ ಸಲ್ಮಾನ್​ ವಿರುದ್ಧ ಅಥವಾ ಅವರಿಗೆ ಸಂಬಂಧಿಸಿದ ಉದ್ಯಮ, ಸಂಸ್ಥೆ ಬಗ್ಗೆ ಕಮಾಲ್ ​ ಆರೋಪ ಮಾಡುವಂತಿಲ್ಲ. ಖ್ಯಾತಿ ಅನ್ನೋದನ್ನು ಯಾರೂ ಹಾಳು ಮಾಡಬಾರದು ಎಂದು ಹೇಳಿದೆ.

ತಾವು ರಾಧೆ ಸಿನಿಮಾವನ್ನು ನಿಷ್ಠುರವಾಗಿ ವಿಮರ್ಶೆ ಮಾಡಿದ್ದಕ್ಕಾಗಿಯೇ ಸಲ್ಮಾನ್ ಖಾನ್ ಅವರು ತಮ್ಮ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ ಎಂದು ಕಮಾಲ್ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದರು. ಒಟ್ಟಿನಲ್ಲಿ ರಾಧೆ ಸಿನಿಮಾವನ್ನು ವಿಮರ್ಶೆ ಮಾಡಿದ್ದಕ್ಕೂ ಈ ಮಾನನಷ್ಟ ಮೊಕದ್ದಮೆಗೂ ಯಾವುದೇ ಸಂಬಂಧ ಇಲ್ಲ ಎಂಬುದು ಬಯಲಾಗಿದೆ.

ಇದನ್ನೂ ಓದಿ: Salman Khan: ರಿಮೇಕ್​ ಮಾಡೋಕೆ ಸಲ್ಮಾನ್​ ಖಾನ್​ ಕೊನೆಗೂ ಫೈನಲ್​ ಮಾಡಿದ್ರು ಸಿನಿಮಾ

32 ವರ್ಷದ ಕೆರಿಯರ್​ನಲ್ಲಿ ಮೊಟ್ಟಮೊದಲ ಬಾರಿಗೆ ಬಯೋಪಿಕ್​ಗೆ ಸಹಿ ಹಾಕಿದ ಸಲ್ಮಾನ್​ ಖಾನ್​

Published On - 7:30 pm, Thu, 24 June 21

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್