AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

ಹಲವು ದಿನಗಳಿಂದ ಸಲ್ಮಾನ್ ಖಾನ್ ಅವರ ಮೇಲೆ ಕಮಾಲ್ ಖಾನ್ ಅವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತ ಬಂದಿದ್ದರು. ಸಲ್ಮಾನ್ ಖಾನ್ ಭ್ರಷ್ಟಾಚಾರಿ. ಅವರ ಬೀಯಿಂಗ್ ಹ್ಯೂಮನ್ ಬ್ರಾಂಡ್ ಮೂಲಕ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು.

ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ
ಸಲ್ಮಾನ್​ ಖಾನ್​, ಕಮಾಲ್​ ಆರ್​. ಖಾನ್​
TV9 Web
| Edited By: |

Updated on:Jun 24, 2021 | 7:30 PM

Share

ಸದಾ ಒಂದಿಲ್ಲೊಂದು ವಿಚಾರಕ್ಕೆ ಸಲ್ಮಾನ್​ ಖಾನ್​ ವಿರುದ್ಧ ಹರಿಹಾಯುತ್ತಿದ್ದ ನಟ, ಸಿನಿಮಾ ವಿಮರ್ಶಕ ಕಮಾಲ್  ಆರ್​ ಖಾನ್​ಗೆ ಮುಂಬೈ ಕೋರ್ಟ್​​ನಲ್ಲಿ ತೀವ್ರ ಹಿನ್ನಡೆ ಉಂಟಾಗಿದೆ. ಯಾವುದೇ ರೀತಿಯ ಮಾನಹಾನಿ ಆಗುವಂತಹ ವಿಚಾರಗಳನ್ನು ಸಲ್ಮಾನ್​ ಖಾನ್​ ವಿರುದ್ಧ ಪೋಸ್ಟ್​ ಮಾಡದಂತೆ ಕೋರ್ಟ್​ ಆದೇಶ ನೀಡಿದೆ.  

ಹಲವು ದಿನಗಳಿಂದ ಸಲ್ಮಾನ್ ಖಾನ್ ಅವರ ಮೇಲೆ ಕಮಾಲ್ ಖಾನ್ ಅವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತ ಬಂದಿದ್ದರು. ಸಲ್ಮಾನ್ ಖಾನ್ ಭ್ರಷ್ಟಾಚಾರಿ. ಅವರ ಬೀಯಿಂಗ್ ಹ್ಯೂಮನ್ ಬ್ರಾಂಡ್ ಮೂಲಕ ಮೋಸ ಮಾಡಲಾಗುತ್ತಿದೆ. ಮನಿ ಲಾಂಡರಿಂಗ್ ಮಾಡಲಾಗುತ್ತಿದೆ. ಸಲ್ಮಾನ್ ಖಾನ್ ಸಿನಿಮಾ ನಿರ್ಮಾಣ ಸಂಸ್ಥೆಯಲ್ಲಿ ದರೋಡೆಕೋರರು ಇದ್ದಾರೆ ಎಂದೆಲ್ಲ ಕಮಾಲ್ ಖಾನ್ ಮಾತನಾಡಿದ್ದರು. ಈ ಕಾರಣಕ್ಕೆ ಕಮಾಲ್​ ವಿರುದ್ಧ ಸಲ್ಲು ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಮುಂಬೈ ಸಿವಿಲ್​ ಕೋರ್ಟ್​, ನೇರವಾಗಿ ಅಥವಾ ಪರೋಕ್ಷವಾಗಿ ಸಲ್ಮಾನ್​ ವಿರುದ್ಧ ಅಥವಾ ಅವರಿಗೆ ಸಂಬಂಧಿಸಿದ ಉದ್ಯಮ, ಸಂಸ್ಥೆ ಬಗ್ಗೆ ಕಮಾಲ್ ​ ಆರೋಪ ಮಾಡುವಂತಿಲ್ಲ. ಖ್ಯಾತಿ ಅನ್ನೋದನ್ನು ಯಾರೂ ಹಾಳು ಮಾಡಬಾರದು ಎಂದು ಹೇಳಿದೆ.

ತಾವು ರಾಧೆ ಸಿನಿಮಾವನ್ನು ನಿಷ್ಠುರವಾಗಿ ವಿಮರ್ಶೆ ಮಾಡಿದ್ದಕ್ಕಾಗಿಯೇ ಸಲ್ಮಾನ್ ಖಾನ್ ಅವರು ತಮ್ಮ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ ಎಂದು ಕಮಾಲ್ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದರು. ಒಟ್ಟಿನಲ್ಲಿ ರಾಧೆ ಸಿನಿಮಾವನ್ನು ವಿಮರ್ಶೆ ಮಾಡಿದ್ದಕ್ಕೂ ಈ ಮಾನನಷ್ಟ ಮೊಕದ್ದಮೆಗೂ ಯಾವುದೇ ಸಂಬಂಧ ಇಲ್ಲ ಎಂಬುದು ಬಯಲಾಗಿದೆ.

ಇದನ್ನೂ ಓದಿ: Salman Khan: ರಿಮೇಕ್​ ಮಾಡೋಕೆ ಸಲ್ಮಾನ್​ ಖಾನ್​ ಕೊನೆಗೂ ಫೈನಲ್​ ಮಾಡಿದ್ರು ಸಿನಿಮಾ

32 ವರ್ಷದ ಕೆರಿಯರ್​ನಲ್ಲಿ ಮೊಟ್ಟಮೊದಲ ಬಾರಿಗೆ ಬಯೋಪಿಕ್​ಗೆ ಸಹಿ ಹಾಕಿದ ಸಲ್ಮಾನ್​ ಖಾನ್​

Published On - 7:30 pm, Thu, 24 June 21

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ