AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

ಹಲವು ದಿನಗಳಿಂದ ಸಲ್ಮಾನ್ ಖಾನ್ ಅವರ ಮೇಲೆ ಕಮಾಲ್ ಖಾನ್ ಅವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತ ಬಂದಿದ್ದರು. ಸಲ್ಮಾನ್ ಖಾನ್ ಭ್ರಷ್ಟಾಚಾರಿ. ಅವರ ಬೀಯಿಂಗ್ ಹ್ಯೂಮನ್ ಬ್ರಾಂಡ್ ಮೂಲಕ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು.

ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ
ಸಲ್ಮಾನ್​ ಖಾನ್​, ಕಮಾಲ್​ ಆರ್​. ಖಾನ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jun 24, 2021 | 7:30 PM

Share

ಸದಾ ಒಂದಿಲ್ಲೊಂದು ವಿಚಾರಕ್ಕೆ ಸಲ್ಮಾನ್​ ಖಾನ್​ ವಿರುದ್ಧ ಹರಿಹಾಯುತ್ತಿದ್ದ ನಟ, ಸಿನಿಮಾ ವಿಮರ್ಶಕ ಕಮಾಲ್  ಆರ್​ ಖಾನ್​ಗೆ ಮುಂಬೈ ಕೋರ್ಟ್​​ನಲ್ಲಿ ತೀವ್ರ ಹಿನ್ನಡೆ ಉಂಟಾಗಿದೆ. ಯಾವುದೇ ರೀತಿಯ ಮಾನಹಾನಿ ಆಗುವಂತಹ ವಿಚಾರಗಳನ್ನು ಸಲ್ಮಾನ್​ ಖಾನ್​ ವಿರುದ್ಧ ಪೋಸ್ಟ್​ ಮಾಡದಂತೆ ಕೋರ್ಟ್​ ಆದೇಶ ನೀಡಿದೆ.  

ಹಲವು ದಿನಗಳಿಂದ ಸಲ್ಮಾನ್ ಖಾನ್ ಅವರ ಮೇಲೆ ಕಮಾಲ್ ಖಾನ್ ಅವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತ ಬಂದಿದ್ದರು. ಸಲ್ಮಾನ್ ಖಾನ್ ಭ್ರಷ್ಟಾಚಾರಿ. ಅವರ ಬೀಯಿಂಗ್ ಹ್ಯೂಮನ್ ಬ್ರಾಂಡ್ ಮೂಲಕ ಮೋಸ ಮಾಡಲಾಗುತ್ತಿದೆ. ಮನಿ ಲಾಂಡರಿಂಗ್ ಮಾಡಲಾಗುತ್ತಿದೆ. ಸಲ್ಮಾನ್ ಖಾನ್ ಸಿನಿಮಾ ನಿರ್ಮಾಣ ಸಂಸ್ಥೆಯಲ್ಲಿ ದರೋಡೆಕೋರರು ಇದ್ದಾರೆ ಎಂದೆಲ್ಲ ಕಮಾಲ್ ಖಾನ್ ಮಾತನಾಡಿದ್ದರು. ಈ ಕಾರಣಕ್ಕೆ ಕಮಾಲ್​ ವಿರುದ್ಧ ಸಲ್ಲು ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಮುಂಬೈ ಸಿವಿಲ್​ ಕೋರ್ಟ್​, ನೇರವಾಗಿ ಅಥವಾ ಪರೋಕ್ಷವಾಗಿ ಸಲ್ಮಾನ್​ ವಿರುದ್ಧ ಅಥವಾ ಅವರಿಗೆ ಸಂಬಂಧಿಸಿದ ಉದ್ಯಮ, ಸಂಸ್ಥೆ ಬಗ್ಗೆ ಕಮಾಲ್ ​ ಆರೋಪ ಮಾಡುವಂತಿಲ್ಲ. ಖ್ಯಾತಿ ಅನ್ನೋದನ್ನು ಯಾರೂ ಹಾಳು ಮಾಡಬಾರದು ಎಂದು ಹೇಳಿದೆ.

ತಾವು ರಾಧೆ ಸಿನಿಮಾವನ್ನು ನಿಷ್ಠುರವಾಗಿ ವಿಮರ್ಶೆ ಮಾಡಿದ್ದಕ್ಕಾಗಿಯೇ ಸಲ್ಮಾನ್ ಖಾನ್ ಅವರು ತಮ್ಮ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ ಎಂದು ಕಮಾಲ್ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದರು. ಒಟ್ಟಿನಲ್ಲಿ ರಾಧೆ ಸಿನಿಮಾವನ್ನು ವಿಮರ್ಶೆ ಮಾಡಿದ್ದಕ್ಕೂ ಈ ಮಾನನಷ್ಟ ಮೊಕದ್ದಮೆಗೂ ಯಾವುದೇ ಸಂಬಂಧ ಇಲ್ಲ ಎಂಬುದು ಬಯಲಾಗಿದೆ.

ಇದನ್ನೂ ಓದಿ: Salman Khan: ರಿಮೇಕ್​ ಮಾಡೋಕೆ ಸಲ್ಮಾನ್​ ಖಾನ್​ ಕೊನೆಗೂ ಫೈನಲ್​ ಮಾಡಿದ್ರು ಸಿನಿಮಾ

32 ವರ್ಷದ ಕೆರಿಯರ್​ನಲ್ಲಿ ಮೊಟ್ಟಮೊದಲ ಬಾರಿಗೆ ಬಯೋಪಿಕ್​ಗೆ ಸಹಿ ಹಾಕಿದ ಸಲ್ಮಾನ್​ ಖಾನ್​

Published On - 7:30 pm, Thu, 24 June 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ