‘ಪೊನ್ನಿಯಿನ್ ಸೆಲ್ವನ್​ 2’ ಸಿನಿಮಾ ಅವಧಿ ಇಷ್ಟೊಂದಾ? ಸೀಟ್​ ಮೇಲೆ ಕೂರೋದೆ ಚಾಲೆಂಜ್

Ponniyin Selvan: Part Two: ಈಗಾಗಲೇ ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾಗೆ ಪ್ರಮೋಷನ್ ಶುರುವಾಗಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ತಮಿಳು ಸೇರಿ ವಿವಿಧ ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

‘ಪೊನ್ನಿಯಿನ್ ಸೆಲ್ವನ್​ 2’ ಸಿನಿಮಾ ಅವಧಿ ಇಷ್ಟೊಂದಾ? ಸೀಟ್​ ಮೇಲೆ ಕೂರೋದೆ ಚಾಲೆಂಜ್
ಪೊನ್ನಿಯಿನ್ ಸೆಲ್ವನ್ ಪೋಸ್ಟರ್
Follow us
|

Updated on: Mar 28, 2023 | 7:18 AM

ಐಶ್ವರ್ಯಾ ರೈ (Aishwarya Rai), ತ್ರಿಷಾ ಕೃಷ್ಣನ್, ಕಾರ್ತಿ, ವಿಕ್ರಂ ಮೊದಲಾದವರು ನಟಿಸಿದ್ದ ‘ಪೊನ್ನಿಯಿನ್ ಸೆಲ್ವನ್​’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು ಮಣಿರತ್ನಂ. ಈ ಕಾರಣಕ್ಕೂ ಸಿನಿಮಾ ಗಮನ ಸೆಳೆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲೂ ಒಳ್ಳೆಯ ಕಮಾಯಿ ಮಾಡಿತು. ಈಗ ‘ಪೊನ್ನಿಯಿನ್ ಸೆಲ್ವನ್ 2’ (Ponniyin Selvan: Part Two) ಬರೋಕೆ ರೆಡಿ ಆಗಿದೆ. ಏಪ್ರಿಲ್ 28ರಂದು ಸಿನಿಮಾ ರಿಲೀಸ್ ಆಗಲಿದ್ದು, ಮಾರ್ಚ್ 29ರಂದು ಟ್ರೇಲರ್ ರಿಲೀಸ್ ಆಗಲಿದೆ. ಇದಕ್ಕೂ ಮೊದಲು ಸಿನಿಮಾದ ಅವಧಿ ಬಗ್ಗೆ ಸುದ್ದಿ ಒಂದು ಹರಿದಾಡಿದೆ. ಇದನ್ನು ಕೇಳಿ ಅನೇಕರು ಅಚ್ಚರಿಗೊಂಡಿದ್ದಾರೆ.

ಈಗಾಗಲೇ ಸಿನಿಮಾಗೆ ಪ್ರಮೋಷನ್ ಶುರುವಾಗಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ತಮಿಳು ಸೇರಿ ವಿವಿಧ ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ. ಮಣಿರತ್ನಂ ಆ್ಯಂಡ್ ಟೀಂ ದೇಶದ ವಿವಿಧ ನಗರಗಳಿಗೆ ತೆರಳಿ ಪ್ರಚಾರ ಮಾಡಲಿದೆ. ಇದಕ್ಕೂ ಮೊದಲು ಸಿನಿಮಾ ಅವಧಿ ಬಗ್ಗೆ ಸುದ್ದಿ ಒಂದು ಹರಿದಾಡಿದೆ. ಚಿತ್ರದ ಅವಧಿ ಸದ್ಯ 4 ಗಂಟೆ ಇದೆಯಂತೆ. ಕೆಲವೇ ಕೆಲವು ಕಡೆಗಳಲ್ಲಿ ಮಾತ್ರ ಕತ್ತರಿ ಹಾಕಲು ಅವಕಾಶ ನಿರ್ದೇಶಕರಿಗೆ ಇದೆ. ಹೀಗಾಗಿ, ಸಿನಿಮಾದ ಅವಧಿ 3 ಗಂಟೆ 53 ನಿಮಿಷ ಆಗಿರಲಿದೆ. ಇದು ಪ್ರೇಕ್ಷಕರ ಚಿಂತೆಗೆ ಕಾರಣ ಆಗಿದೆ.

ಇದನ್ನೂ ಓದಿ: ಐಶ್ವರ್ಯಾ ರೈ ಸೀರೆಯುಟ್ಟು ಮಿಂಚಿದ್ದ ಅಪರೂಪದ ಪೋಟೋಗಳು ಇಲ್ಲಿವೆ

ಸಿನಿಮಾದ ಅವಧಿ ಎರಡು ಗಂಟೆಯಿಂದ ಎರಡೂವರೆ ಗಂಟೆವರೆಗೆ ಇದ್ದರೆ ಪ್ರೇಕ್ಷಕನಿಗೆ ಆಯಾಸ ಎನಿಸುವುದಿಲ್ಲ. ಕೆಲವೊಮ್ಮೆ ಕಥೆ ಬೇಡಿದರೆ ಸಿನಿಮಾದ ಅವಧಿ ಮೂರು ಗಂಟೆ ಆಗುತ್ತದೆ. ಆದರೆ, ‘ಪೊನ್ನಿಯಿನ್ ಸೆಲ್ವನ್’ ಸಿನಿಮಾಗಾಗಿ ಪ್ರೇಕ್ಷಕ ನಾಲ್ಕ ಗಂಟೆ ಚಿತ್ರಮಂದಿರದಲ್ಲಿ ಕೂರಬೇಕು ಎಂದರೆ ಅದು ಚಾಲೆಂಜ್ ಎನಿಸಬಹುದು. ಮೊದಲ ಭಾಗವನ್ನು ಇಷ್ಟಪಟ್ಟ ಪ್ರೇಕ್ಷಕರು ಎರಡನೇ ಭಾಗವನ್ನೂ ಇಷ್ಟಪಡಬಹುದು ಎಂದು ಊಹಿಸಲಾಗುತ್ತಿದೆ.

ಇದನ್ನೂ ಓದಿ: 4 ದಿನಕ್ಕೆ 250 ಕೋಟಿ ರೂಪಾಯಿ ಬಾಚಿದ ‘ಪೊನ್ನಿಯಿನ್​ ಸೆಲ್ವನ್’; ಇದು ಮಣಿರತ್ನಂ ಮ್ಯಾಜಿಕ್

‘ಪೊನ್ನಿಯಿನ್ ಸೆಲ್ವನ್​’ ಸಿನಿಮಾದ ಮೇಕಿಂಗ್, ಅದ್ದೂರಿತನ ಗಮನ ಸೆಳೆದಿದೆ. ಈ ಕಾರಣಕ್ಕೆ ಎರಡನೇ ಭಾಗದ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಪೊನ್ನಿಯಿನ್ ಸೆಲ್ವನ್ ಹಾಗೂ ವಂದಿಯಾ ದೇವನ್​ಗೆ ಏನಾಯಿತು ಎಂದು ತಿಳಿದುಕೊಳ್ಳುವ ಕಾತುರ ಮೂಡಿದೆ. ಎ.ಆರ್. ರೆಹಮಾನ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ