AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿದ್ದ ಆಸ್ಕರ್​ ಟ್ರೋಫಿ ಕಳೆದುಹಾಕಿದ್ದ ಎ.ಆರ್​. ರೆಹಮಾನ್​; ಸಂಗೀತ ನಿರ್ದೇಶಕನ ಸಿನಿ ಪಯಣಕ್ಕೆ 29 ವರ್ಷ

ರೆಹಮಾನ್​ ಸಂಗೀತ ಸಂಯೋಜನೆ ಮಾಡಿದ್ದ ‘ರೋಜಾ’ ಸಿನಿಮಾದ ಹಾಡುಗಳು ಹಿಟ್​ ಆದವು. ಇದು ರೆಹಮಾನ್​ ಖ್ಯಾತಿಯನ್ನು ಹೆಚ್ಚಿಸಿತು. ಮೊದಲ ಚಿತ್ರದಲ್ಲೇ ರೆಹಮಾನ್​ಗೆ ರಾಷ್ಟ್ರ ಪ್ರಶಸ್ತಿ ದೊರೆಯಿತು.

ಮನೆಯಲ್ಲಿದ್ದ ಆಸ್ಕರ್​ ಟ್ರೋಫಿ ಕಳೆದುಹಾಕಿದ್ದ ಎ.ಆರ್​. ರೆಹಮಾನ್​; ಸಂಗೀತ ನಿರ್ದೇಶಕನ ಸಿನಿ ಪಯಣಕ್ಕೆ 29 ವರ್ಷ
ಮನೆಯಲ್ಲಿದ್ದ ಆಸ್ಕರ್​ ಟ್ರೋಫಿ ಕಳೆದುಹಾಕಿದ್ದ ಎ.ಆರ್​. ರೆಹಮಾನ್​; ಸಂಗೀತ ನಿರ್ದೇಶಕನ ಸಿನಿ ಪಯಣಕ್ಕೆ 29 ವರ್ಷ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 16, 2021 | 4:00 PM

Share

ಖ್ಯಾತ ಸಂಗೀತ ನಿರ್ದೇಶಕ ಎ.ಆರ್​. ರೆಹಮಾನ್​ ಚಿತ್ರರಂಗದಲ್ಲಿ 29 ವರ್ಷ ಪೂರೈಸಿದ್ದಾರೆ. ಈ ದೀರ್ಘ ಪಯಣದಲ್ಲಿ ಸಾಕಷ್ಟು ಹಿಟ್​ ಹಾಡುಗಳನ್ನು ನೀಡಿದ ಖ್ಯಾತಿ ಹಾಗೂ ಸಾಕಷ್ಟು ಪ್ರಶಸ್ತಿಗಳನ್ನು ಬಾಚಿಕೊಂಡ ಹೆಚ್ಚುಗಾರಿಕೆ ರೆಹಮಾನ್​ ಅವರದ್ದು. 1992ರಲ್ಲಿ ತೆರೆಗೆ ಬಂದ ‘ರೋಜಾ’ ಸಿನಿಮಾ ಮೂಲಕ ವೃತ್ತಿಜೀವನ ಆರಂಭಿಸಿದ ಅವರು ಈಗ ಭಾರತದ ಟಾಪ್​ ಸಂಗೀತ ನಿರ್ದೇಶಕರಲ್ಲಿ ಮುಂಚೂಣಿಯಲ್ಲಿ ನಿಲ್ಲುತ್ತಾರೆ.

ರೆಹಮಾನ್ ಅವರು ಬಹಳ ಸಣ್ಣ ವಯಸ್ಸಿಗೆ ಸಂಗೀತದ ಬಗ್ಗೆ ಆಸಕ್ತಿ ಬೆಳೆಸಿಕೊಂಡರು. ಝಾಕಿರ್​ ಹುಸೇನ್​, ಇಳಯರಾಜ, ವೈದ್ಯನಾಥನ್​, ಎಕ್​. ಶಂಕರ್​ ಜತೆ ರೆಹಮಾನ್​ ಒಳ್ಳೆಯ ಒಡನಾಟ ಹೊಂದಿದ್ದರು. ಇವರಿಂದ ರೆಹಮಾನ್​ ಸಾಕಷ್ಟು ವಿಚಾರಗಳನ್ನು ಕಲಿತುಕೊಂಡರು.

ರೆಹಮಾನ್​ ಸಂಗೀತ ಸಂಯೋಜನೆ ಮಾಡಿದ್ದ ‘ರೋಜಾ’ ಸಿನಿಮಾದ ಹಾಡುಗಳು ಹಿಟ್​ ಆದವು. ಇದು ರೆಹಮಾನ್​ ಖ್ಯಾತಿಯನ್ನು ಹೆಚ್ಚಿಸಿತು. ಮೊದಲ ಚಿತ್ರದಲ್ಲೇ ರೆಹಮಾನ್​ಗೆ ರಾಷ್ಟ್ರ ಪ್ರಶಸ್ತಿ ದೊರೆಯಿತು. ನಂತರ ರೆಹಮಾನ್​ ಬತ್ತಳಿಕೆಯಿಂದ ಸಾಕಷ್ಟು ಹಿಟ್​ ಹಾಡುಗಳು ಮೂಡಿಬಂದವು.

‘ಸ್ಲಮ್​ಡಾಗ್​ ಮಿಲಿಯನೇರ್’​ ಚಿತ್ರದ ಹಾಡುಗಳಿಗೆ ರೆಹಮಾನ್​ಗೆ ಎರಡು ಆಸ್ಕರ್​ ಪ್ರಶಸ್ತಿ ಲಭಿಸಿದೆ. ಅಚ್ಚರಿ ಎಂದರೆ ರೆಹಮಾನ್​ ತಾಯಿ ಕರೀಮಾ ಬೇಗಮ್ ಆಸ್ಕರ್​ ಟ್ರೋಫಿಯನ್ನು ಜೋಪಾನವಾಗಿರಿಸಿದ್ದರು. ಕರೀಮಾ ಬೇಗಮ್ ಕಳೆದ ವರ್ಷದ ಅಂತ್ಯದಲ್ಲಿ ನಿಧನ ಹೊಂದಿದ್ದರು. ಈ ವೇಳೆ ರೆಹಮಾನ್​ಗೆ ತಾಯಿ ಆಸ್ಕರ್​ ಟ್ರೋಫಿಯನ್ನು ಎಲ್ಲಿಟ್ಟಿದ್ದಾರೆ ಎನ್ನುವ ಗೊಂದಲ ಕಾಡಿತ್ತು. ಎಷ್ಟೇ ಹುಡುಕಿದರೂ ಅವರಿಗೆ ಟ್ರೋಫಿ ಸಿಕ್ಕಿರಲಿಲ್ಲ. ನಂತರದಲ್ಲಿ ಕಳೆದು ಹೋಗಿದ್ದ ಟ್ರೋಫಿ ಲಭ್ಯವಾಗಿತ್ತು.

ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ನಂತರದಲ್ಲಿ ಬಾಲಿವುಡ್​ನಲ್ಲಿರುವ ಕೆಲ ಕಾಣದ ಕೈಗಳ ಬಗ್ಗೆ ಚರ್ಚೆ ನಡೆದಿತ್ತು. ಇದಕ್ಕೆ ರೆಹಮಾನ್​ ಕೂಡ ಧ್ವನಿಗೂಡಿಸಿದ್ದರು. ಬಾಲಿವುಡ್​ನಲ್ಲಿ ಗ್ಯಾಂಗ್​ ಇದೆ. ಇದರಿಂದಾಗಿಯೇ ತಮಗೆ ಕೆಲಸ ಸಿಗುತ್ತಿಲ್ಲ ಎಂದು ಅವರು ಹೇಳಿದ್ದರು.

ಸದ್ಯ, ರೆಹಮಾನ್​ ಕೈಯಲ್ಲಿ 11 ಪ್ರಾಜೆಕ್ಟ್​ಗಳಿವೆ. ಮುಂದಿನ ಆರು ವರ್ಷಕ್ಕೆ ಸಾಕಾಗುವಷ್ಟು ಸಿನಿಮಾ ಕೆಲಸಗಳು ಅವರ ಕೈಯಲ್ಲಿವೆ. ಅನೇಕ ನಿರ್ದೇಶಕರು ಅವರ ಜತೆ ಕೆಲಸ ಮಾಡೋಕೆ ಕಾದು ಕೂತಿದ್ದಾರೆ. ಆದರೆ, ಅದು ಸಾಧ್ಯವಾಗುತ್ತಿಲ್ಲ.

ಇದನ್ನೂ ಓದಿ: ನನಗೆ ಎ.ಆರ್ ರೆಹಮಾನ್ ಯಾರೆಂದೇ ಗೊತ್ತಿಲ್ಲ, ಭಾರತರತ್ನ ಪ್ರಶಸ್ತಿ ನನ್ನಪ್ಪನ ಉಗುರಿಗೆ ಸಮ; ವಿವಾದಕ್ಕೀಡಾದ ಖ್ಯಾತ ನಟ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ