AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗೀತ ಮಾಂತ್ರಿಕ ಇಳಯರಾಜ ಪುತ್ರಿ ನಿಧನ, ಆಘಾತದಲ್ಲಿ ತಮಿಳು ಚಿತ್ರರಂಗ

Bhavatarini: ಸಂಗೀತ ಮಾಂತ್ರಿಕ ಇಳಯರಾಜಾ ಅವರ ಪುತ್ರಿ, ಜನಪ್ರಿಯ ಗಾಯಕಿ ಭವತಾರಿಣಿ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಅವರಿಗೆ 40 ವರ್ಷ ವಯಸ್ಸಾಗಿತ್ತು.

ಸಂಗೀತ ಮಾಂತ್ರಿಕ ಇಳಯರಾಜ ಪುತ್ರಿ ನಿಧನ, ಆಘಾತದಲ್ಲಿ ತಮಿಳು ಚಿತ್ರರಂಗ
ಮಂಜುನಾಥ ಸಿ.
|

Updated on: Jan 26, 2024 | 7:05 AM

Share

ಭಾರತ ಸಿನಿಮಾ ರಂಗದಲ್ಲಿ ಸಂಗೀತ ಮಾಂತ್ರಿಕ ಎಂದೇ ಖ್ಯಾತವಾಗಿರುವ ಜನಪ್ರಿಯ ಸಂಗೀತ ನಿರ್ದೇಶಕ ಇಳಯರಾಜ (Ilayaraja) ಅವರ ಪುತ್ರಿ, ಗಾಯಕಿ ಭವತಾರಿಣಿ ಹಠಾತ್ ನಿಧನ ಹೊಂದಿದ್ದಾರೆ. ಅವರಿಗೆ 40 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ತಿಂಗಳಿನಿಂದ ಭವತಾರಿಣಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಭಾವತಾರಿಣಿ ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ತಮಿಳು ಚಿತ್ರರಂಗ ಹಾಗೂ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಭವತಾರಿಣಿ, ಕಳೆದ ಕೆಲವು ದಿನಗಳಿಂದ ಶ್ರೀಲಂಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಯೇ ಅವರು ಜನವರಿ 25ರಂದು ರಾತ್ರಿ ನಿಧನ ಹೊಂದಿದ್ದಾರೆ. ಅವರ ಮೃತದೇಹವನ್ನು ಚೆನ್ನೈನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದೆಂದು ಹೇಳಲಾಗುತ್ತಿದೆ.

ಭಾವತಾರಿಣಿ ಸ್ವತಃ ಅದ್ಭುತ ಗಾಯಕಿ ಆಗಿದ್ದರು. ಹಲವು ತಮಿಳು ಹಾಡುಗಳನ್ನು ಹಾಡಿರುವ ಭಾವತಾರಿಣಿ ‘ಭಾರತಿ’ ಸಿನಿಮಾದ ಹಾಡಿಗಾಗಿ ರಾಷ್ಟ್ರಪ್ರಶಸ್ತಿಯನ್ನು ಸಹ ಗಳಿಸಿದ್ದರು. ಈ ಸಿನಿಮಾ ಸುಬ್ರಹ್ಮಣ್ಯ ಭಾರತಿ ಅವರ ಜೀವನದ ಮೇಲೆ ಆಧಾರಿತವಾಗಿತ್ತು. ಇದು ಮಾತ್ರವೇ ಅಲ್ಲದೆ ತಮ್ಮ ಸುಮಧುರ ಗಾಯನಕ್ಕಾಗಿ ರಾಜ್ಯ ಪ್ರಶಸ್ತಿಗಳನ್ನು ಸಹ ಭಾವತಾರಿಣಿ ಗಳಿಸಿದ್ದರು.

ಇದನ್ನೂ ಓದಿ:ಕನ್ನಡದ ‘ಪ್ರೀತ್ಸು’ ಚಿತ್ರಕ್ಕೆ ಇಳಯರಾಜಾ ಸಂಗೀತ ನಿರ್ದೇಶನ;​ ಆಡಿಯೋ ರಿಲೀಸ್ ಮಾಡಿಕೊಂಡ​ ಖುಷಿಯಲ್ಲಿ ಚಿತ್ರತಂಡ

ಭಾವತಾರಿಣಿ ನಿಧನಕ್ಕೆ ತಮಿಳು ಚಿತ್ರರಂಗ ಹಾಗೂ ರಾಜಕೀಯ ರಂಗದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ತಮಿಳುನಾಡು ಸಿಎಂ ಸ್ಟಾಲಿನ್, ‘ಭಾವತಾರಿಣಿ ನಿಧನದಿಂದಾಗಿ ಉಂಟಾಗಿರುವ ನಿರ್ವಾತವನ್ನು ಯಾರೂ ತುಂಬಲಾರರು ಅದು ಹಾಗೆಯೇ ಉಳಿಯಲಿದೆ’ ಎಂದಿದ್ದಾರೆ.

ನಟಿ ಸಿಮ್ರನ್ ಟ್ವೀಟ್ ಮಾಡಿ, ‘ಭಾವತಾರಿಣಿಯ ಹಠಾತ್ ನಿಧನದಿಂದ ತೀವ್ರ ಆಘಾತಕ್ಕೆ ಈಡಾಗಿದ್ದೇನೆ. ಈ ಕಷ್ಟದ ಸಮಯದಲ್ಲಿ ಇಳಯರಾಜಾ ಸರ್ ಮತ್ತು ಯುವನ್ ಅವರ ಕುಟುಂಬಕ್ಕೆ ಹೃತ್ಪೂರ್ವಕ ಸಂತಾಪ ಮತ್ತು ಪ್ರಾರ್ಥನೆಗಳನ್ನು ತಿಳಿಸುತ್ತಿದ್ದೇನೆ. ಓಂ ಶಾಂತಿ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ