AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ನರೇಂದ್ರ ಮೋದಿ ಜನ್ಮದಿನಕ್ಕೆ ‘ಆಶೀರ್ವಾದ್ ಕಾ ದಿಯಾ’ ಸಾಂಗ್ ರಿಲೀಸ್

ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಸಂಗೀತ ಸಂಯೋಜಕ ಅಮನ್ ಪಂತ್ "ಆಶೀರ್ವಾದ್ ಕಾ ದಿಯಾ" ಎಂಬ ವಿಶೇಷ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಪ್ರಧಾನಿ ಅವರ 25 ವರ್ಷಗಳ ದೇಶಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ಈ ಸಂಗೀತ ರೂಪಕ ಮೂಡಿಬಂದಿದ್ದು, ಪ್ರಸ್ತುತ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ

ಪಿಎಂ ನರೇಂದ್ರ ಮೋದಿ ಜನ್ಮದಿನಕ್ಕೆ ‘ಆಶೀರ್ವಾದ್ ಕಾ ದಿಯಾ’ ಸಾಂಗ್ ರಿಲೀಸ್
ಮೋದಿImage Credit source: PMO Twitter
ರಾಜೇಶ್ ದುಗ್ಗುಮನೆ
|

Updated on:Sep 17, 2026 | 11:17 AM

Share

ಮುಖ್ಯಾಂಶಗಳು

  • ಮೋದಿ 76ನೇ ಜನ್ಮದಿನಕ್ಕೆ ವಿಶೇಷ ಗಿಫ್ಟ್
  • 25 ವರ್ಷಗಳ ಸಾರ್ವಜನಿಕ ಸೇವೆ
  • 'ಆಶೀರ್ವಾದ್ ಕಾ ದಿಯಾ' ಹಾಡಿನಲ್ಲಿ ನಾಯಕತ್ವದ ಅನಾವರಣ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೆಪ್ಟೆಂಬರ್ 17) 76ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಇದರ ಅಂಗವಾಗಿ ಸಂಗೀತ ಸಂಯೋಜಕ ಅಮನ್ ಪಂತ್ ಅವರು ‘ಆಶೀರ್ವಾದ್ ಕಾ ದಿಯಾ’ ಎಂಬ ವಿಶೇಷ ವಿಡಿಯೋ ಸಾಂಗ್ ಬಿಡುಗಡೆ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ದೇಶಕ್ಕಾಗಿ ಸಲ್ಲಿಸಿರುವ 25 ವರ್ಷಗಳ ನಿರಂತರ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ಮತ್ತು ಗೌರವಿಸುವ ಉದ್ದೇಶದಿಂದ ಈ ಹಾಡನ್ನು ರಚಿಸಲಾಗಿದೆ. ಇಂದು ಈ ಹಾಡು ರಿಲೀಸ್ ಆಗಿದ್ದು, ಈ ಗೀತೆಯು ಪ್ರಧಾನಿಯವರ ನಾಯಕತ್ವ ಹಾಗೂ ದೇಶಪ್ರೇಮದ ಸಂದೇಶವನ್ನು ಸಾರುತ್ತದೆ.

ಪ್ರಧಾನಿ ಅವರ ಧೀಮಂತ ವ್ಯಕ್ತಿತ್ವ, ದಿಟ್ಟ ನಾಯಕತ್ವ ಹಾಗೂ ನವ ಭಾರತದ ನಿರ್ಮಾಣಕ್ಕಾಗಿ ಅವರು ಹೆಣೆದಿರುವ ದೂರದೃಷ್ಟಿಯನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಈ ಹಾಡಿನ ಸ್ವರಸಂಯೋಜನೆ ಮಾಡಲಾಗಿದೆ. ಅಮನ್ ಪಂತ್ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ಈ ವಿಶಿಷ್ಟ ಗೀತೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಭಿಮಾನಿಗಳು ಹಾಗೂ ಸಂಗೀತ ಪ್ರಿಯರು ಈ ಗೀತೆಯನ್ನು ಹಂಚಿಕೊಳ್ಳುವ ಮೂಲಕ ಪ್ರಧಾನಿಯವರಿಗೆ ಜನ್ಮದಿನದ ಶುಭಾಶಯ ಕೋರುತ್ತಿದ್ದಾರೆ.

ಇದನ್ನೂ ಓದಿ: 76ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ನರೇಂದ್ರ ಮೋದಿ: ರಾಷ್ಟ್ರಪತಿಯಿಂದ ಕೇಂದ್ರ ಸಚಿವರವರೆಗೆ ಶುಭಾಶಯಗಳ ಮಹಾಪೂರ

ಮೋದಿ ಅವರು ದೇಶಕ್ಕಾಗಿ ಏನೆಲ್ಲ ಕೊಡುಗೆ ಕೊಟ್ಟಿದ್ದಾರೆ ಎಂಬುದನ್ನು ವಿಡಿಯೋ ಸಾಂಗ್​​ನಲ್ಲಿ ಉಲ್ಲೇಖ ಮಾಡಲಾಗಿದೆ. ವಿಡಿಯೋ ಮೂಲಕ ಇದನ್ನು ವಿವರಿಸಲಾಗಿದೆ.

View this post on Instagram

A post shared by Aman Pant (@amanpant02)

ಸಂಗೀತದ ಮೂಲಕ ನಾಯಕತ್ವ ಮತ್ತು ಜನಸೇವೆಯ ಮಹತ್ವವನ್ನು ಸಾರುವ ಈ ವಿಶೇಷ ಹಾಡು ಪ್ರಧಾನಿ ಮೋದಿ ಅಭಿಮಾನಿಗಳಲ್ಲಿ ಸಂತಸ ಹಾಗೂ ಹಬ್ಬದ ವಾತಾವರಣವನ್ನು ನಿರ್ಮಿಸಿದೆ. ಅಮನ್ ಪಂತ್ ಅವರ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆ ಹಾಗೂ ವಿವಿಧ ಮಾಧ್ಯಮಗಳ ಮೂಲಕ ಈ ಗೀತೆಯ ಪ್ರಚಾರ ಮತ್ತು ಹಿನ್ನೆಲೆ ವೀಡಿಯೊಗಳು ಹಂಚಿಕೆಯಾಗುತ್ತಿದ್ದು, ಪ್ರಸ್ತುತ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:21 am, Thu, 17 September 26

Follow Us
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ