AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುತ್ತಯ್ಯ ಮುರಳೀಧರನ್​ ಬಯೋಪಿಕ್​ ‘800’ ಟ್ರೇಲರ್​ ಬಿಡುಗಡೆಗೆ ಸಚಿನ್​ ತೆಂಡೂಲ್ಕರ್​ ಅತಿಥಿ

ಎಂ.ಎಸ್​. ಶ್ರೀಪತಿ ಅವರು ‘800’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ನಟ ಮಧುರ್​ ಮಿತ್ತಲ್​ ಅವರು ಈ ಚಿತ್ರದಲ್ಲಿ ಮುತ್ತಯ್ಯ ಮುರಳೀಧರನ್​ ಪಾತ್ರವನ್ನು ಮಾಡಿದ್ದಾರೆ. ಸೆಪ್ಟೆಂಬರ್​ 5ರಂದು ಮುಂಬೈನಲ್ಲಿ ಟ್ರೇಲರ್​ ಲಾಂಚ್​ ಆಗಲಿದೆ. ಸಚಿನ್​ ತೆಂಡೂಲ್ಕರ್​ ಮಾತ್ರವಲ್ಲದೇ ಅನೇಕ ಗಣ್ಯರು ಈ ಕಾರ್ಯಕ್ರಮಕ್ಕೆ ಹಾಜರಿ ಹಾಕುವ ನಿರೀಕ್ಷೆ ಇದೆ.

ಮುತ್ತಯ್ಯ ಮುರಳೀಧರನ್​ ಬಯೋಪಿಕ್​ ‘800’ ಟ್ರೇಲರ್​ ಬಿಡುಗಡೆಗೆ ಸಚಿನ್​ ತೆಂಡೂಲ್ಕರ್​ ಅತಿಥಿ
ಸಚಿನ್​ ತೆಂಡೂಲ್ಕರ್​, ಮುತ್ತಯ್ಯ ಮುರಳೀಧರನ್​
ಮದನ್​ ಕುಮಾರ್​
|

Updated on:Sep 04, 2023 | 4:22 PM

Share

ಶ್ರೀಲಂಕಾದ ಮಾಜಿ ಕ್ರಿಕೆಟರ್​ ಮುತ್ತಯ್ಯ ಮುರಳೀಧರನ್​ (Muttiah Muralitharan) ಅವರ ಜೀವನದ ಕುರಿತು ಸಿನಿಮಾ ಸಿದ್ಧವಾಗಿದೆ. ಈ ಚಿತ್ರಕ್ಕೆ ‘800’ ಎಂದು ಹೆಸರು ಇಡಲಾಗಿದೆ. ಬಹುಭಾಷೆಯಲ್ಲಿ ನಿರ್ಮಾಣ ಆಗಿರುವ ಈ ಸಿನಿಮಾ ಮೇಲೆ ಕ್ರಿಕೆಟ್​ ಪ್ರೇಮಿಗಳು ಹಾಗೂ ಸಿನಿಪ್ರಿಯರು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗ ‘800’ ಚಿತ್ರದ ಟ್ರೇಲರ್​ ಬಿಡುಗಡೆಗೆ ಸಮಯ ಕೂಡಿಬಂದಿದೆ. ವಿಶೇಷ ಏನೆಂದರೆ, ಈ ಸಿನಿಮಾದ ಟ್ರೇಲರ್​ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲಿರುವುದು ಕ್ರಿಕೆಟ್​ ಲೋಕದ ದಿಗ್ಗಜ ಸಚಿನ್​ ತೆಂಡೂಲ್ಕರ್​! ಆ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಸೆಪ್ಟೆಂಬರ್​ 5ರಂದು ಮುಂಬೈನಲ್ಲಿ ‘800’ ಸಿನಿಮಾ (800 Movie) ಟ್ರೇಲರ್​ ಲಾಂಚ್​ ಆಗಲಿದೆ. ಸಚಿನ್​ ತೆಂಡೂಲ್ಕರ್​ (Sachin Tendulkar) ಮಾತ್ರವಲ್ಲದೇ ಅನೇಕ ಗಣ್ಯರು ಈ ಕಾರ್ಯಕ್ರಮಕ್ಕೆ ಹಾಜರಿ ಹಾಕುವ ನಿರೀಕ್ಷೆ ಇದೆ.

ಕ್ರಿಕೆಟರ್​ಗಳ ಜೀವನದ ಕುರಿತು ಅನೇಕ ಸಿನಿಮಾಗಳು ಈಗಾಗಲೇ ಬಂದಿವೆ. ಕ್ರಿಕೆಟ್​ ಲೋಕದಲ್ಲಿ ಸಾಧನೆ ಮಾಡಿದ ದಿಗ್ಗಜರ ಬದುಕು ಎಲ್ಲರಿಗೂ ಸ್ಫೂರ್ತಿ ಆಗಲಿ ಎಂಬ ಉದ್ದೇಶದಿಂದ ಇಂಥ ಸಿನಿಮಾ ಮಾಡಲಾಗುತ್ತದೆ. ಆ ಪೈಕಿ ಕೆಲವು ಸಿನಿಮಾಗಳು ಸೂಪರ್​ ಹಿಟ್​ ಆಗಿವೆ. ಮಹೇಂದ್ರ ಸಿಂಗ್​ ಧೋನಿ ಜೀವನಾಧಾರಿತ ‘ಎಂ.ಎಸ್​. ಧೋನಿ: ದಿ ಅನ್​ಟೋಲ್ಡ್​ ಸ್ಟೋರಿ’ ಒಂದು ಉತ್ತಮ ಉದಾಹರಣೆ. ಈಗ ಮುತ್ತಯ್ಯ ಮುರಳೀಧರನ್​ ಅವರ ಬದುಕಿನ ಘಟನೆಗಳನ್ನು ಆಧಾರವಾಗಿ ಇಟ್ಟುಕೊಂಡು ‘800’ ಸಿನಿಮಾ ಮೂಡಿಬಂದಿದ್ದು, ಅವರ ಅಭಿಮಾನಿಗಳಲ್ಲಿ ಕೌತುಕ ಸೃಷ್ಟಿ ಮಾಡಿದೆ.

ಇದನ್ನೂ ಓದಿ: ಸಚಿನ್ ಅಥವಾ ಸೆಹ್ವಾಗ್, ಯಾರಿಗೆ ಬೌಲಿಂಗ್ ಮಾಡುವುದು ಕಷ್ಟ? ಮುತ್ತಯ್ಯ ಮುರಳೀಧರನ್ ಉತ್ತರ ಹೀಗಿದೆ

ಮುತ್ತಯ್ಯ ಮುರಳೀಧರನ್​ ಅವರ ಹೆಸರಿನಲ್ಲಿ ಅನೇಕ ದಾಖಲೆಗಳಿವೆ. ಟೆಸ್ಟ್​ ಕ್ರಿಕೆಟ್​ನಲ್ಲಿ ಅತಿ ಹೆಚ್ಚು, ಅಂದರೆ 800 ವಿಕೆಟ್​ಗಳನ್ನು ಪಡೆದ ಏಕೈಕ ಬೌಲರ್​ ಎಂಬ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ. ಆ ಕಾರಣದಿಂದಲೇ ಈ ಸಿನಿಮಾಗೆ ‘800’ ಎಂದು ಶೀರ್ಷಿಕೆ ಇಡಲಾಗಿದೆ. ಏಕದಿನ ಪಂದ್ಯಗಳಲ್ಲಿ ಮುತ್ತಯ್ಯ ಮುರಳೀಧರನ್​ ಅವರು 530 ವಿಕೆಟ್​ ಪಡೆದಿದ್ದಾರೆ. 1996ರಲ್ಲಿ ಶ್ರೀಲಂಕಾ ತಂಡ ವಿಶ್ವಕಪ್​ ಗೆದ್ದಾಗ ಆ ಟೀಮ್​ನಲ್ಲಿ ಮುತ್ತಯ್ಯ ಮುರಳೀಧರನ್​ ಆಟವಾಡಿದ್ದರು. ಅವರ ಬೌಲಿಂಗ್​ ಶೈಲಿಯ ಬಗ್ಗೆ ಹಲವು ಬಾರಿ ಪ್ರಶ್ನೆ ಎದುರಾಗಿತ್ತು. ಆ ಎಲ್ಲ ಅಂಶಗಳು ಈ ಸಿನಿಮಾದಲ್ಲಿ ಪ್ರಸ್ತಾಪ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಕ್ರಿಕೆಟ್ ದೇವರು ಸಚಿನ್​ ತೆಂಡೂಲ್ಕರ್ ಎಷ್ಟು ಕೋಟಿ ಒಡೆಯ ಗೊತ್ತಾ?

ಎಂ.ಎಸ್​. ಶ್ರೀಪತಿ ಅವರು ‘800’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಗಿಬ್ರಾನ್​ ಅವರು ಸಂಗೀತ ನೀಡಿದ್ದಾರೆ. ‘ಸ್ಲಂ ಡಾಗ್​​ ಮಿಲಿಯನೇರ್​’ ಸಿನಿಮಾ ಖ್ಯಾತಿಯ ನಟ ಮಧುರ್​ ಮಿತ್ತಲ್​ ಅವರು ‘800’ ಚಿತ್ರದಲ್ಲಿ ಮುತ್ತಯ್ಯ ಮುರಳೀಧರನ್​ ಪಾತ್ರವನ್ನು ಮಾಡಿದ್ದಾರೆ. ಅವರ ಪತ್ನಿಯ ಪಾತ್ರಕ್ಕೆ ಮಹಿಮಾ ನಂಬಿಯಾರ್​ ಅವರು ಬಣ್ಣ ಹಚ್ಚಿದ್ದಾರೆ. ತಮಿಳು, ತೆಲುಗು, ಹಿಂದಿ ಮತ್ತು ಇಂಗ್ಲಿಷ್​ನಲ್ಲಿ ಈ ಚಿತ್ರ ಮೂಡಿಬರುತ್ತಿದ್ದು, ಅಕ್ಟೋಬರ್​ನಲ್ಲಿ ಬಿಡುಗಡೆ ಆಗಲಿದೆ. ಸಚಿನ್​ ತೆಂಡೂಲ್ಕರ್​ ಅವರು ಈ ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡುತ್ತಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:37 pm, Mon, 4 September 23

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ