AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್​ ಹಾಸನ್​ ಚುನಾವಣಾ ಸೋಲಿನ ನಂತರ ನನ್ನ ತಂದೆ ಫೈಟರ್​ ಎಂದ ಶ್ರುತಿ ಹಾಸನ್​

ನಟನೆಯಲ್ಲಿ ಯಶಸ್ಸು ಕಂಡಿದ್ದ ಕಮಲ್​ ಹಾಸನ್​ ರಾಜಕೀಯದಲ್ಲೂ ಯಶಸ್ಸು ಕಾಣುವ ಕನಸು ಹೊತ್ತಿದ್ದರು. ಪಕ್ಷ ಸ್ಥಾಪಿಸಿ ನಿರಂತರವಾಗಿ ಪ್ರಚಾರ ಕಾರ್ಯದಲ್ಲೂ ತೊಡಗಿದ್ದರು.

ಕಮಲ್​ ಹಾಸನ್​ ಚುನಾವಣಾ ಸೋಲಿನ ನಂತರ ನನ್ನ ತಂದೆ ಫೈಟರ್​ ಎಂದ ಶ್ರುತಿ ಹಾಸನ್​
ಕಮಲ್​ ಹಾಸನ್​ ಜತೆ ಶ್ರುತಿ ಹಾಸನ್
ರಾಜೇಶ್ ದುಗ್ಗುಮನೆ
|

Updated on: May 03, 2021 | 9:37 PM

Share

ಪಂಚರಾಜ್ಯಗಳ ಚುನಾವಣ ಫಲಿತಾಂಶ ಬಂದಿದೆ. ನೆರೆಯ ತಮಿಳುನಾಡಿನಲ್ಲಿ ಡಿಎಂಕೆ 133 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಎಐಎಡಿಎಂಕೆ 66 ಕ್ಷೇತ್ರಗಳಲ್ಲಿ ಗೆದ್ದಿದೆ. ಆದರೆ, ಕಮಲ್​ ಹಾಸನ್​ ಅವರ ಮಕ್ಕಳ್​ ನೀಧಿ ಮಯಂ ಪಕ್ಷ ಖಾತೆ ತೆರೆಯಲು ವಿಫಲವಾಗಿದೆ. ಪಕ್ಷದ ಸ್ಥಾಪಕ ಕಮಲ್​ ಹಾಸನ್​ ಕೂಡ ಸೋಲು ಕಂಡಿದ್ದಾರೆ. ಈ ಸೋಲಿನ ಬೆನ್ನಲ್ಲೇ ನನ್ನ ತಂದೆ ಫೈಟರ್​ ಎಂದ ಶ್ರುತಿ ಹಾಸನ್​ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ನಟನೆಯಲ್ಲಿ ಯಶಸ್ಸು ಕಂಡಿದ್ದ ಕಮಲ್​ ಹಾಸನ್​ ರಾಜಕೀಯದಲ್ಲೂ ಯಶಸ್ಸು ಕಾಣುವ ಕನಸು ಹೊತ್ತಿದ್ದರು. ಪಕ್ಷ ಸ್ಥಾಪಿಸಿ ನಿರಂತರವಾಗಿ ಪ್ರಚಾರ ಕಾರ್ಯದಲ್ಲೂ ತೊಡಗಿದ್ದರು. ತಮಿಳುನಾಡಿನ ಬಹುತೇಕ  ಕ್ಷೇತ್ರಗಳಲ್ಲಿ ಮಕ್ಕಳ್​ ನೀಧಿ ಮಯಂ ಸ್ಪರ್ಧೆ ಮಾಡಿತ್ತು. ಆದರೆ, ಯಾವ ಕ್ಷೇತ್ರದಲ್ಲೂ ಕಮಲ್​ ಹಾಸನ್​ ಪಕ್ಷ ಗೆಲುವು ಸಾಧಿಸಿಲ್ಲ. ಅಚ್ಚರಿ ಎಂದರೆ ಅನೇಕ ಕ್ಷೇತ್ರಗಳಲ್ಲಿ ಮಕ್ಕಳ್​ ನೀಧಿ ಮಯಂ ಪಕ್ಷದವರು ಠೇವಣಿ ಹಿಂಪಡೆದುಕೊಳ್ಳಲು ಸಾಧ್ಯವಾಗಿಲ್ಲ.

 ಕಮಲ್​ ಹಾಸನ್​ ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಬಿಜೆಪಿ ವನತಿ ಶ್ರೀನಿವಾಸನ್​ ವಿರುದ್ಧ 1,500 ಮತಗಳ ಅಂತರದಿಂದ ಕಮಲ್​ ಹಾಸನ್​ ಸೋತಿದ್ದಾರೆ. ಕಮಲ್​ ಟಾರ್ಚ್​ ಹಿಡಿದಿರುವ ಫೋಟೋ ಒಂದನ್ನು ಹಾಕಿರುವ ಶ್ರುತಿ ಹಾಸನ್​, ಅಪ್ಪಾ ನಿಮ್ಮ ಬಗ್ಗೆ ಯಾವಾಗಲೂ ಹೆಮ್ಮೆ ಎಂದು ಬರೆದುಕೊಂಡಿರುವ ಅವರು ಫೈಟರ್​ ಎನ್ನುವ ಹ್ಯಾಶ್​ಟ್ಯಾಗ್​ ಹಾಕಿದ್ದಾರೆ.  

ಚುನಾವಣೆಯಲ್ಲಿ ಸೋತ ನಂತರದಲ್ಲಿ ಕಮಲ್​ ಹಾಸನ್​ ಮತ್ತೆ ಚಿತ್ರದ ಕೆಲಸಗಳಿಗೆ ಮರಳುವ ನಿರೀಕ್ಷೆ ಇದೆ. ಇಂಡಿಯನ್​ 2 ಸಿನಿಮಾದಲ್ಲಿ ಕಮಲ್​ ಹಾಸನ್​ ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಗಳು ಶೀಘ್ರವೇ ಆರಂಭವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka By-Elections ಫಲಿತಾಂಶ ವಿಶ್ಲೇಷಣೆ: ಉಪಚುನಾವಣೆಯ ಗೆಲುವು ಬಿಜೆಪಿ ಕಣ್ಣು ತೆರೆಸಲು ಸಾಧ್ಯವೇ?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ