AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್​ ಹಾಸನ್​ ಚುನಾವಣಾ ಸೋಲಿನ ನಂತರ ನನ್ನ ತಂದೆ ಫೈಟರ್​ ಎಂದ ಶ್ರುತಿ ಹಾಸನ್​

ನಟನೆಯಲ್ಲಿ ಯಶಸ್ಸು ಕಂಡಿದ್ದ ಕಮಲ್​ ಹಾಸನ್​ ರಾಜಕೀಯದಲ್ಲೂ ಯಶಸ್ಸು ಕಾಣುವ ಕನಸು ಹೊತ್ತಿದ್ದರು. ಪಕ್ಷ ಸ್ಥಾಪಿಸಿ ನಿರಂತರವಾಗಿ ಪ್ರಚಾರ ಕಾರ್ಯದಲ್ಲೂ ತೊಡಗಿದ್ದರು.

ಕಮಲ್​ ಹಾಸನ್​ ಚುನಾವಣಾ ಸೋಲಿನ ನಂತರ ನನ್ನ ತಂದೆ ಫೈಟರ್​ ಎಂದ ಶ್ರುತಿ ಹಾಸನ್​
ಕಮಲ್​ ಹಾಸನ್​ ಜತೆ ಶ್ರುತಿ ಹಾಸನ್
ರಾಜೇಶ್ ದುಗ್ಗುಮನೆ
|

Updated on: May 03, 2021 | 9:37 PM

Share

ಪಂಚರಾಜ್ಯಗಳ ಚುನಾವಣ ಫಲಿತಾಂಶ ಬಂದಿದೆ. ನೆರೆಯ ತಮಿಳುನಾಡಿನಲ್ಲಿ ಡಿಎಂಕೆ 133 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಎಐಎಡಿಎಂಕೆ 66 ಕ್ಷೇತ್ರಗಳಲ್ಲಿ ಗೆದ್ದಿದೆ. ಆದರೆ, ಕಮಲ್​ ಹಾಸನ್​ ಅವರ ಮಕ್ಕಳ್​ ನೀಧಿ ಮಯಂ ಪಕ್ಷ ಖಾತೆ ತೆರೆಯಲು ವಿಫಲವಾಗಿದೆ. ಪಕ್ಷದ ಸ್ಥಾಪಕ ಕಮಲ್​ ಹಾಸನ್​ ಕೂಡ ಸೋಲು ಕಂಡಿದ್ದಾರೆ. ಈ ಸೋಲಿನ ಬೆನ್ನಲ್ಲೇ ನನ್ನ ತಂದೆ ಫೈಟರ್​ ಎಂದ ಶ್ರುತಿ ಹಾಸನ್​ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ನಟನೆಯಲ್ಲಿ ಯಶಸ್ಸು ಕಂಡಿದ್ದ ಕಮಲ್​ ಹಾಸನ್​ ರಾಜಕೀಯದಲ್ಲೂ ಯಶಸ್ಸು ಕಾಣುವ ಕನಸು ಹೊತ್ತಿದ್ದರು. ಪಕ್ಷ ಸ್ಥಾಪಿಸಿ ನಿರಂತರವಾಗಿ ಪ್ರಚಾರ ಕಾರ್ಯದಲ್ಲೂ ತೊಡಗಿದ್ದರು. ತಮಿಳುನಾಡಿನ ಬಹುತೇಕ  ಕ್ಷೇತ್ರಗಳಲ್ಲಿ ಮಕ್ಕಳ್​ ನೀಧಿ ಮಯಂ ಸ್ಪರ್ಧೆ ಮಾಡಿತ್ತು. ಆದರೆ, ಯಾವ ಕ್ಷೇತ್ರದಲ್ಲೂ ಕಮಲ್​ ಹಾಸನ್​ ಪಕ್ಷ ಗೆಲುವು ಸಾಧಿಸಿಲ್ಲ. ಅಚ್ಚರಿ ಎಂದರೆ ಅನೇಕ ಕ್ಷೇತ್ರಗಳಲ್ಲಿ ಮಕ್ಕಳ್​ ನೀಧಿ ಮಯಂ ಪಕ್ಷದವರು ಠೇವಣಿ ಹಿಂಪಡೆದುಕೊಳ್ಳಲು ಸಾಧ್ಯವಾಗಿಲ್ಲ.

 ಕಮಲ್​ ಹಾಸನ್​ ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಬಿಜೆಪಿ ವನತಿ ಶ್ರೀನಿವಾಸನ್​ ವಿರುದ್ಧ 1,500 ಮತಗಳ ಅಂತರದಿಂದ ಕಮಲ್​ ಹಾಸನ್​ ಸೋತಿದ್ದಾರೆ. ಕಮಲ್​ ಟಾರ್ಚ್​ ಹಿಡಿದಿರುವ ಫೋಟೋ ಒಂದನ್ನು ಹಾಕಿರುವ ಶ್ರುತಿ ಹಾಸನ್​, ಅಪ್ಪಾ ನಿಮ್ಮ ಬಗ್ಗೆ ಯಾವಾಗಲೂ ಹೆಮ್ಮೆ ಎಂದು ಬರೆದುಕೊಂಡಿರುವ ಅವರು ಫೈಟರ್​ ಎನ್ನುವ ಹ್ಯಾಶ್​ಟ್ಯಾಗ್​ ಹಾಕಿದ್ದಾರೆ.  

ಚುನಾವಣೆಯಲ್ಲಿ ಸೋತ ನಂತರದಲ್ಲಿ ಕಮಲ್​ ಹಾಸನ್​ ಮತ್ತೆ ಚಿತ್ರದ ಕೆಲಸಗಳಿಗೆ ಮರಳುವ ನಿರೀಕ್ಷೆ ಇದೆ. ಇಂಡಿಯನ್​ 2 ಸಿನಿಮಾದಲ್ಲಿ ಕಮಲ್​ ಹಾಸನ್​ ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಗಳು ಶೀಘ್ರವೇ ಆರಂಭವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka By-Elections ಫಲಿತಾಂಶ ವಿಶ್ಲೇಷಣೆ: ಉಪಚುನಾವಣೆಯ ಗೆಲುವು ಬಿಜೆಪಿ ಕಣ್ಣು ತೆರೆಸಲು ಸಾಧ್ಯವೇ?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?