AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯೂಷನ್ ಟೀಚರ್ ಮುಟ್ಟಬಾರದ ಜಾಗದಲ್ಲೆಲ್ಲ ಕೈ ಹಾಕಿದ್ದ; ಲೈಂಗಿಕ ದೌರ್ಜನ್ಯ ನೆನೆದಿದ್ದ ಬಾಲಿವುಡ್​ ನಟಿ

Munmun Dutta Video: 2017ರಲ್ಲಿ ಮೀಟೂ ಆಂದೋಲನ ಆರಂಭವಾದ ನಂತರದಲ್ಲಿ ಸಾಕಷ್ಟು ನಟಿಯರು ತಮ್ಮ ಒಡಲಲ್ಲಿ ಇಟ್ಟುಕೊಂಡಿದ್ದ ಕಹಿ ಘಟನೆಯ ಮೂಟೆಯನ್ನು ಹೊರ ಹಾಕಿದ್ದರು. ಶಿಕ್ಷಣ ಪಡೆಯುವ ಸಂದರ್ಭದಲ್ಲಿ, ವೃತ್ತಿ ಜೀವನದಲ್ಲಿ ಏನೆಲ್ಲ ಅನುಭವಿಸಿದ್ದೇನೆ ಎಂದು ಹೇಳಿಕೊಂಡಿದ್ದರು

ಟ್ಯೂಷನ್ ಟೀಚರ್ ಮುಟ್ಟಬಾರದ ಜಾಗದಲ್ಲೆಲ್ಲ ಕೈ ಹಾಕಿದ್ದ; ಲೈಂಗಿಕ ದೌರ್ಜನ್ಯ ನೆನೆದಿದ್ದ ಬಾಲಿವುಡ್​ ನಟಿ
ಮುನ್​ಮುನ್​ ದತ್ತ
TV9 Web
| Edited By: |

Updated on:Jun 09, 2021 | 3:21 PM

Share

ಸ್ಯಾಂಡಲ್​​ವುಡ್​, ಬಾಲಿವುಡ್​ ಸೇರಿ ಎಲ್ಲಾ ಚಿತ್ರರಂಗದಲ್ಲಿ ಮೀಟೂ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಅನೇಕರು ತಮಗಾದ ಕಹಿ ಅನುಭವದ ಬಗ್ಗೆ ಹೇಳಿಕೊಂಡಿದ್ದರು. ಬಾಲಿವುಡ್​ ನಟಿ ಮುನ್​ಮುನ್​ ದತ್ತ​ ಕೂಡ ಚಿಕ್ಕ ವಯಸ್ಸಿನಲ್ಲಾದ ಲೈಂಗಿಕ ದೌರ್ಜನ್ಯದ ಕಹಿ ಘಟನೆಯನ್ನು ನೆನಪಿಸಿಕೊಂಡಿದ್ದರು. ಚಿಕ್ಕ ವಯಸ್ಸಿನಲ್ಲಾದ ಈ ಘಟನೆ ಬಗ್ಗೆ ಅವರು ಸವಿಸ್ತಾರವಾಗಿ ಬರೆದುಕೊಂಡಿದ್ದರು.

2017ರಲ್ಲಿ ಮೀಟೂ ಆಂದೋಲನ ಆರಂಭವಾದ ನಂತರದಲ್ಲಿ ಸಾಕಷ್ಟು ನಟಿಯರು ತಮ್ಮ ಒಡಲಲ್ಲಿ ಇಟ್ಟುಕೊಂಡಿದ್ದ ಕಹಿ ಘಟನೆಯ ಮೂಟೆಯನ್ನು ಹೊರ ಹಾಕಿದ್ದರು. ಶಿಕ್ಷಣ ಪಡೆಯುವ ಸಂದರ್ಭದಲ್ಲಿ, ವೃತ್ತಿ ಜೀವನದಲ್ಲಿ ಏನೆಲ್ಲ ಅನುಭವಿಸಿದ್ದೇನೆ ಎಂದು ಹೇಳಿಕೊಂಡಿದ್ದರು. ಆ ಬಗ್ಗೆ ಮುನ್​ಮುನ್​ ದತ್​ ಉದ್ದನೆಯ ಪತ್ರ ಬರೆದಿದ್ದರು. ಪಕ್ಕದ ಮನೆಯ ಅಂಕಲ್​, ಸೋದರ ಸಂಬಂಧಿ ಹಾಗೂ ಶಿಕ್ಷಕರಿಂದ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತಂತೆ.

‘ಈ ನೆನಪನ್ನು ನೆನೆಯುವಾಗ ನನ್ನ ಕಣ್ಣಲ್ಲಿ ನೀರು ಬರುತ್ತಿದೆ. ನನ್ನ ಪಕ್ಕದ ಮನೆಯ ಅಂಕಲ್​ ಬಗ್ಗೆ ನನಗೆ ಭಯವಿತ್ತು. ಆತ ಅವಕಾಶ ಸಿಕ್ಕಾಗೆಲ್ಲ ನನ್ನನ್ನು ಹಿಡಿದುಕೊಳ್ಳುತ್ತಿದ್ದ ಮತ್ತು ಆ ಬಗ್ಗೆ ಯಾರೊಂದಿಗೂ ಮಾತನಾಡದಂತೆ ಬೆದರಿಕೆ ಹಾಕುತ್ತಿದ್ದ. ನನ್ನ ಸೋದರ ಸಂಬಂಧಿ ನನ್ನನ್ನು ನೋಡುವ ದೃಷ್ಟಿ ಸರಿಯಾಗಿ ಇರಲಿಲ್ಲ. ನಾನು ಆಸ್ಪತ್ರೆಯಲ್ಲಿ ಜನಿಸಿದಾಗ ನನ್ನನ್ನು ನೋಡಿದ ಆ ವ್ಯಕ್ತಿ, 13 ವರ್ಷಗಳ ನಂತರ ಬದಲಾಗಿದ್ದ. ಅವನು ನನ್ನ ದೇಹವನ್ನು ಸ್ಪರ್ಶಿಸುವ ರೀತಿ ಸರಿಯಾಗಿರಲಿಲ್ಲ’ ಎಂದು ಅವರು ಸೋದರ ಸಂಬಂಧಿ ಬಗ್ಗೆ ಅಸಮಾಧಾನ ಹೊರ ಹಾಕಿದ್ದರು.

‘ಟ್ಯೂಷನ್​ ನೀಡುವ ಶಿಕ್ಷಕ ನನ್ನ ಕೆಳ ಭಾಗದ ಒಳ ಉಡುಪುಗಳಲ್ಲಿ ಕೈ ಹಾಕುತ್ತಿದ್ದ. ನಾನು ರಾಖಿ ಕಟ್ಟಿದ ಶಿಕ್ಷಕನೋರ್ವ ಹುಡುಗಿಯರ ಬ್ರಾ ಹೊರಗೆಳೆದು ಸ್ತನದ ಮೇಲೆ ಹೊಡೆಯುತ್ತಿದ್ದ. ಇದಕ್ಕೆಲ್ಲ ನಾವು ಈ ಬಗ್ಗೆ ಹೊರಗೆ ಮಾತನಾಡಲು ಭಯ ಪಡುತ್ತೇವೆ ಎನ್ನುವುದೇ ಕಾರಣ ಎಂದು ಹೇಳುವ ಮೂಲಕ ಅವರು ಎಲ್ಲರಲ್ಲೂ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು.

ಇದನ್ನೂ ಓದಿ: ಜಾತಿ ನಿಂದನೆ ಮಾಡಿದ ಖ್ಯಾತ ಕಿರುತೆರೆ ನಟಿ ಮುನ್​ಮುನ್​ ದತ್ತ ವಿರುದ್ಧ ಎಫ್​ಐಆರ್​ ದಾಖಲು

Published On - 1:35 pm, Wed, 9 June 21

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ