AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನಗೆ ಹೆಮ್ಮೆ ಆಗುವಂತೆ ಮಾಡುತ್ತೇನೆ ವಿಜು: ದೇವರಕೊಂಡಗೆ ರಶ್ಮಿಕಾ ಭರವಸೆ

ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಅವರಿಗೆ ಪ್ರೀತಿಯಿಂದ ವಿಜು ಅಂತ ಕರೆಯುತ್ತಾರೆ. ಇಬ್ಬರ ನಡುವೆ ಆತ್ಮೀಯತೆ ಹೆಚ್ಚಿದೆ. ರಶ್ಮಿಕಾ ಹೊಸ ಚಿತ್ರಕ್ಕೆ ವಿಜಯ್ ವಿಶ್ ಮಾಡಿದ್ದಾರೆ. ಅದರಿಂದ ಖುಷಿಯಾದ ರಶ್ಮಿಕಾ ಮಂದಣ್ಣ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಇದು ಫ್ಯಾನ್ಸ್ ಗಮನ ಸೆಳೆದಿದೆ.

ನಿನಗೆ ಹೆಮ್ಮೆ ಆಗುವಂತೆ ಮಾಡುತ್ತೇನೆ ವಿಜು: ದೇವರಕೊಂಡಗೆ ರಶ್ಮಿಕಾ ಭರವಸೆ
Rashmika Mandanna, Vijay Devarakonda
ಮದನ್​ ಕುಮಾರ್​
|

Updated on: Jun 29, 2025 | 7:10 AM

Share

ತೆಲುಗು ನಟ ವಿಜಯ್ ದೇವರಕೊಂಡ (Vijay Devarakonda) ಮತ್ತು ನಟಿ ರಶ್ಮಿಕಾ ಮಂದಣ್ಣ ನಡುವೆ ಎಷ್ಟು ಆತ್ಮೀಯತೆ ಇದೆ ಎಂಬುದನ್ನು ಹೊಸದಾಗಿ ಹೇಳುವ ಅಗತ್ಯ ಇಲ್ಲ. ಅಭಿಮಾನಿಗಳಿಗೆ ಎಲ್ಲವೂ ತಿಳಿದಿದೆ. ಹಲವು ವರ್ಷಗಳಿಂದ ಅವರು ಒಟ್ಟಿಗೆ ಸುತ್ತಾಡುತ್ತಿದ್ದಾರೆ. ಚಿತ್ರರಂಗದಲ್ಲಿ ಮತ್ತು ವೈಯಕ್ತಿಕ ಬದುಕಿನಲ್ಲಿ ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತಿದ್ದಾರೆ. ಆದರೆ ತಮ್ಮಿಬ್ಬರ ರಿಲೇಷನ್​​ಶೀಪ್ ಬಗ್ಗೆ ಅವರು ಬಹಿರಂಗವಾಗಿ ಹೇಳಿಕೆ ನೀಡಿಲ್ಲ ಅಷ್ಟೇ. ಆದರೂ ಅವರ ವರ್ತನೆಗಳನ್ನು ನೋಡಿದರೆ ಎಲ್ಲವೂ ಸ್ಪಷ್ಟವಾಗುತ್ತದೆ. ಈಗ ರಶ್ಮಿಕಾ ಮಂದಣ್ಣ (Rashmika Mandanna) ಅವರು ಇನ್ನೊಂದು ಸುಳಿವು ನೀಡಿದ್ದಾರೆ.

ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರ ಹೊಸ ಸಿನಿಮಾ ‘ಮೈಸಾ’ ಅನೌನ್ಸ್ ಆಯಿತು. ಈ ಸಿನಿಮಾದ ಫಸ್ಟ್​ಲುಕ್ ಪೋಸ್ಟರ್​ ಕೂಡ ಬಿಡುಗಡೆ ಆಗಿದೆ. ಇದರಲ್ಲಿ ರಶ್ಮಿಕಾ ಅವರು ತುಂಬ ಡಿಫರೆಂಟ್ ಆದಂತಹ ಪಾತ್ರ ಮಾಡುತ್ತಿದ್ದಾರೆ. ಇದು ಮಹಿಳಾಪ್ರಧಾನ ಸಿನಿಮಾ ಆಗಿರಲಿದ್ದು, ರಶ್ಮಿಕಾ ಅಭಿಮಾನಿಗಳಿಗೆ ಕಾತರ ಹೆಚ್ಚಾಗಿದೆ. ಅನೇಕ ಸೆಲೆಬ್ರಿಟಿಗಳು ರಶ್ಮಿಕಾಗೆ ವಿಶ್ ಮಾಡಿದ್ದಾರೆ. ವಿಜಯ್ ದೇವರಕೊಂಡ ಕೂಡ ಈ ಪೋಸ್ಟರ್ ನೋಡಿ ಪ್ರತಿಕ್ರಿಯಿಸಿದ್ದಾರೆ.

‘ಮೈಸಾ’ ಸಿನಿಮಾದ ಪೋಸ್ಟರ್ ಶೇರ್ ಮಾಡಿಕೊಂಡ ವಿಜಯ್ ದೇವರಕೊಂಡ ಅವರು ‘ಇದು ಸಖತ್ ಆಗಿರಲಿದೆ’ ಎಂದು ಬರೆದುಕೊಂಡರು. ಅದಕ್ಕೆ ಪ್ರತಿಕ್ರಿಯಿಸಿದ ರಶ್ಮಿಕಾ ಮಂದಣ್ಣ ಅವರು, ‘ವಿಜು, ಇದರಿಂದ ನಿನಗೆ ಹೆಮ್ಮೆ ಆಗುವಂತೆ ಮಾಡುತ್ತೇನೆ ಅಂತ ಭರವಸೆ ನೀಡುತ್ತೇನೆ’ ಎಂದರು. ಇದು ಅಭಿಮಾನಿಗಳ ಗಮನ ಸೆಳೆದಿದೆ.

ಇದನ್ನೂ ಓದಿ
Image
‘ನನ್ನ ತಂಗಿಗೆ ಸವಲತ್ತು ಸಿಗಬಾರದು’; ರಶ್ಮಿಕಾ ಮಂದಣ್ಣ ಹೀಗೆ ಅಂದಿದ್ಯಾಕೆ?
Image
ರಶ್ಮಿಕಾ ಮಂದಣ್ಣ ಹಿಂಗೆಲ್ಲ ಮಾಡಿದರೂ ಕ್ಯೂಟ್ ಅಂತಾರೆ ಅಭಿಮಾನಿಗಳು
Image
‘ನಾನು ಹೈದರಾಬಾದ್​ನವಳು’ ಎಂದು ಹೆಮ್ಮೆಯಿಂದ ಹೇಳಿದ ರಶ್ಮಿಕಾ
Image
‘ಎಲ್ಲರಿಗೂ ಆ ವಿಚಾರ ಗೊತ್ತಿದೆ’; ಮದುವೆ ಬಗ್ಗೆ ನೇರವಾಗಿ ಮಾತನಾಡಿದ ರಶ್ಮಿಕಾ

ವಿಜಯ್ ದೇವರಕೊಂಡ ಅವನ್ನು ರಶ್ಮಿಕಾ ಮಂದಣ್ಣ ಅವರು ಪ್ರೀತಿಯಿಂದ ವಿಜು ಎಂದು ಕರೆಯುತ್ತಾರೆ. ಇಬ್ಬರ ನಡುವೆ ಎಷ್ಟು ಪ್ರೀತಿ ಇದೆ ಎಂಬುದಕ್ಕೆ ಇದು ಕೂಡ ಸಾಕ್ಷಿ ಒದಗಿಸುವಂತಿದೆ. ಅನೇಕ ಬಾರಿ ಅವರು ಒಟ್ಟಿಗೆ ಸುತ್ತಾಡಿದ್ದಾರೆ. ವಿಜಯ್ ದೇವರಕೊಂಡ ಮನೆಯಲ್ಲೇ ರಶ್ಮಿಕಾ ಮಂದಣ್ಣ ಹಬ್ಬ ಆಚರಿಸಿದ್ದರು. ಆದರೂ ಕೂಡ ಸಾರ್ವಜನಿಕವಾಗಿ ತಮ್ಮ ಪ್ರೀತಿಯನ್ನು ಅವರು ಹೇಳಿಕೊಂಡಿಲ್ಲ.

ಇದನ್ನೂ ಓದಿ: ಮುಖಕ್ಕೆ ರಕ್ತ, ಕಣ್ಣಲ್ಲಿ ಬೆಂಕಿ; ‘ಮೈಸಾ’ ಚಿತ್ರದಲ್ಲಿ ರಶ್ಮಿಕಾ ಬೆಚ್ಚಿಬೀಳಿಸೋ ಅವತಾರ

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಮೊದಲು ಒಟ್ಟಿಗೆ ನಟಿಸಿದ್ದು ‘ಗೀತ ಗೋವಿಂದಂ’ ಸಿನಿಮಾದಲ್ಲಿ. ಆ ಬಳಿಕ ಅವರಿಬ್ಬರ ನಡುವೆ ಆತ್ಮೀಯತೆ ಬೆಳೆಯಿತು. ‘ಡಿಯರ್ ಕಾಮ್ರೇಡ್’ ಸಿನಿಮಾದಲ್ಲೂ ಅವರು ಜೋಡಿಯಾಗಿ ಕಾಣಿಸಿಕೊಂಡರು. ನಂತರದ ದಿನಗಳಲ್ಲಿ ಅವರಿಬ್ಬರ ನಡುವಿನ ಬಾಂಧವ್ಯ ಇನ್ನಷ್ಟು ಗಟ್ಟಿ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು