AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಮೋಹನ್ ಸಂಗೀತ, ಹಿಮಾ ಎಂ. ಕಂಠದಲ್ಲಿ ಹೊಸ ವರ್ಷದ ಸಾಂಗ್

ವಿಶ್ವಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದೆ. ಹೊಸ ಭರವಸೆಯೊಂದಿಗೆ ಹೊಸ ವರ್ಷ ಆರಂಭಿಸಲಾಗುತ್ತಿದೆ. ಈ ಸಂದರ್ಭಕ್ಕೆ ಸರಿಯಾಗಿ, ಸ್ಪೂರ್ತಿ ತುಂಬುವ ಇಂಗ್ಲಿಷ್ ಸಾಹಿತ್ಯ ಇರುವ ಹೊಸ ಹಾಡನ್ನು ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ಮೈಸೂರು ಮೋಹನ್ ಅವರು ಸಂಗೀತ ನೀಡಿದ್ದಾರೆ. ಹೊಸ ಗಾಯಕಿ ಹಿಮಾ ಎಂ. ಧ್ವನಿ ನೀಡಿದ್ದಾರೆ.

ಮೈಸೂರು ಮೋಹನ್ ಸಂಗೀತ, ಹಿಮಾ ಎಂ. ಕಂಠದಲ್ಲಿ ಹೊಸ ವರ್ಷದ ಸಾಂಗ್
Hima M, Mysore Mohan
ಮದನ್​ ಕುಮಾರ್​
|

Updated on: Dec 31, 2025 | 12:15 PM

Share

‘ಕಿಲಾಡಿ ಕಿಟ್ಟು’ ಚಿತ್ರದ ಸಂಗೀತ ನಿರ್ದೇಶಕ, ಆರ್ಕೆಸ್ಟ್ರಾಗಳ ಮೂಲಕ ಮನೆ ಮಾತಾದ ಮೈಸೂರು ಮೋಹನ್ (Mysore Mohan) ಅವರು ಈಗ ಹೊಸ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಹೊಸ ಸಿಂಗರ್ ಹಿಮಾ ಎಂ. (Hima M) ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ಇದು ಹೊಸ ವರ್ಷಕ್ಕೆ (New Year 2026) ಸಂಬಂಧಿಸಿದ ಗೀತೆ. ನ್ಯೂ ಇಯರ್ ಸೆಲೆಬ್ರೇಷನ್ ಸಮಯದಲ್ಲೇ ಈ ಗೀತೆಯನ್ನು ರಿಲೀಸ್ ಮಾಡಲಾಗಿದೆ. ಇಂಗ್ಲಿಷ್ ಸಾಹಿತ್ಯ ಇರುವ ಈ ಹಾಡು ಸುಮಧುರವಾಗಿದೆ. ಹೊಸ ಗಾಯಕಿಗೆ ಕೇಳುಗರ ಪ್ರೋತ್ಸಾಹ ಸಿಗುತ್ತಿದೆ.

‘ಮೈಸೂರು ಮೋಹನ್ ಆರ್ಕೆಸ್ಟ್ರಾ’ ಮೂಲಕ ಮೋಹನ್ ಅವರು ಕಳೆದ 60 ವರ್ಷಗಳಿಂದಲೂ ಮನರಂಜನೆ ನೀಡುತ್ತಾ ಬಂದಿದ್ದಾರೆ. ಈಗ ಅವರು ಹೊಸ ಹಾಡಿಗೆ ಸಂಗೀತ ನೀಡಿದ್ದಾರೆ. ಲಾಯರ್ ಆಗಿರುವ ಅವರು ಹಿಮಾ ಅವರು ಸಂಗೀತದಲ್ಲೂ ಆಸಕ್ತಿ ಹೊಂದಿದ್​ದಾರೆ. ಅವರ ಸಂಗೀತ ಪಯಣಕ್ಕೆ ತಾಯಿ ಡಾ. ಎ.ಎನ್. ಪದ್ಮಾ ಅವರು ಬೆಂಬಲವಾಗಿ ನಿಂತಿದ್ದಾರೆ.

ಹಿಮಾ ಅವರ ಸಂಗೀತ ಪ್ರತಿಭೆಯನ್ನು ಮೊದಲು ಗುರುತಿಸಿದ್ದೇ ಅವರ ತಾಯಿ ಪದ್ಮಾ. ಸ್ವತಃ ಉತ್ತಮ ಗಾಯಕಿ ಆಗಿರುವ ಡಾ. ಪದ್ಮಾ ಅವರು ಈಗ ಮಗಳಿಗಾಗಿ ಈ ಹಾಡನ್ನು ನಿರ್ಮಿಸಿದ್ದಾರೆ. ಹಿಮಾ ಎಂ. ಅವರ ತಂದೆ ಡಾ. ಮಂಜುನಾಥ ಕೆ. ಕೂಡ ಸಂಗೀತದ ಆಸಕ್ತಿಯುಳ್ಳವರು. ಪ್ರೀ ಆ್ಯಂಡ್ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ‘ಶ್ರೀವಾರಿ ಮ್ಯೂಸಿಕ್ ಕಂಪನಿ’ ಮಾಡಿದೆ.

ಇದನ್ನೂ ಓದಿ: New Year 2026: ಹೊಸ ವರ್ಷ 2026: ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಏನೆಲ್ಲ ಬಂದ್, ಯಾವುದೆಲ್ಲ ಓಪನ್? ಇಲ್ಲಿದೆ ಮಾಹಿತಿ

ಈ ಹಾಡಿನ ಇಂಗ್ಲಿಷ್ ಸಾಹಿತ್ಯವನ್ನು ಗೌತಮ್ ಶ್ರೀವತ್ಸಾ ಹಾಗೂ ಗೌರವ್ ಅವರು ಬರೆದಿದ್ದಾರೆ. ಕೇಳುಗರಿಗೆ ಸ್ಫೂರ್ತಿ ತುಂಬುವಂತಹ ಸಾಹಿತ್ಯ ಈ ಹಾಡಿನಲ್ಲಿ ಇದೆ. ಈ ಹಾಡಿನಲ್ಲಿ ಸ್ವತಃ ಹಿಮಾ ಎಂ. ಮತ್ತು ಮೈಸೂರು ಮೋಹನ್ ಅವರು ಕಾಣಿಸಿಕೊಂಡಿದ್ದಾರೆ. ಸಂಗೀತ ಪ್ರಿಯರಿಗೆ ಹಾಡು ಇಷ್ಟ ಆಗುತ್ತದೆ ಎಂಬ ನಂಬಿಕೆಯಲ್ಲಿ ನ್ಯೂ ಇಯರ್ ಪ್ರಯುಕ್ತ ‘ಶ್ರೀವಾರಿ ಮ್ಯೂಸಿಕ್’ ಮೂಲಕ ರಿಲೀಸ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?