AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ. ಎನ್‌ಟಿಆರ್, ಪ್ರಶಾಂತ್ ನೀಲ್ ಸಿನಿಮಾ ಸ್ಥಗಿತ? ಗಾಳಿ ಸುದ್ದಿಗೆ ಬ್ರೇಕ್ ಹಾಕಿದ ನಿರ್ಮಾಪಕರು

ಜೂನಿಯರ್ ಎನ್​ಟಿಆರ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್​ನ ಸಿನಿಮಾ ಶೂಟಿಂಗ್ ನಿಂತಿದೆ ಎಂಬ ಸುದ್ದಿ ಇತ್ತೀಚೆಗೆ ಹಬ್ಬಿತ್ತು. ಆ ಬಗ್ಗೆ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್’ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ.

ಜೂ. ಎನ್‌ಟಿಆರ್, ಪ್ರಶಾಂತ್ ನೀಲ್ ಸಿನಿಮಾ ಸ್ಥಗಿತ? ಗಾಳಿ ಸುದ್ದಿಗೆ ಬ್ರೇಕ್ ಹಾಕಿದ ನಿರ್ಮಾಪಕರು
Prashanth Neel, Jr Ntr
ಮದನ್​ ಕುಮಾರ್​
|

Updated on: Apr 08, 2026 | 4:06 PM

Share

ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಮತ್ತು ಟಾಲಿವುಡ್​ನ ಸ್ಟಾರ್ ನಟ ಜೂನಿಯರ್ ಎನ್‌ಟಿಆರ್ ಕಾಂಬಿನೇಷನ್‌ನ ಬಹುನಿರೀಕ್ಷಿತ ಚಿತ್ರದ ಬಗ್ಗೆ ಹಬ್ಬಿದ್ದ ವದಂತಿಗಳಿಗೆ ಈಗ ತೆರೆ ಬಿದ್ದಿದೆ. ಈ ಚಿತ್ರವು ಸ್ಥಗಿತಗೊಂಡಿದೆ ಎಂಬ ಸುದ್ದಿಯನ್ನು ನಿರ್ಮಾಣ ಸಂಸ್ಥೆಯು ಅಧಿಕೃತವಾಗಿ ನಿರಾಕರಿಸಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಡ್ರ್ಯಾಗನ್’ (Dragon) ಅಥವಾ #NTRNeel ಎಂದು ಕರೆಯಲಾಗುತ್ತಿದೆ. ಈ ಸಿನಿಮಾದ ಚಿತ್ರೀಕರಣವು ನಿಂತಿದೆ ಎಂಬ ಮಾತುಗಳು ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದ್ದವು.

ಈ ಚಿತ್ರದಲ್ಲಿ ಜೂನಿಯರ್ ಎನ್‌ಟಿಆರ್ ಅವರು ವಿವಿಧ ಲುಕ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದ್ದು, ಇತ್ತೀಚಿನ ಫೋಟೋಶೂಟ್‌ನಲ್ಲಿ ಅವರ ಲುಕ್ ಬಗ್ಗೆ ಪ್ರಶಾಂತ್ ನೀಲ್ ಮತ್ತು ಎನ್‌ಟಿಆರ್ ಅತೃಪ್ತಿ ಹೊಂದಿದ್ದಾರೆ. ಈ ಕಾರಣದಿಂದ ಸರಿಯಾದ ಲುಕ್ ಸಿಗುವವರೆಗೆ ಶೂಟಿಂಗ್ ಸ್ಥಗಿತಗೊಳಿಸಲಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.

ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಮಾಣ ಸಂಸ್ಥೆಯಾದ ‘ಮೈತ್ರಿ ಮೂವೀ ಮೇಕರ್ಸ್’ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಈ ಕುರಿತು ಎಕ್ಸ್ (ಟ್ವಿಟ್ಟರ್) ಮೂಲಕ ಸ್ಪಷ್ಟನೆ ನೀಡಿರುವ ನಿರ್ಮಾಣ ಸಂಸ್ಥೆಯು, ಸಿನಿಮಾದ ಕೆಲಸಗಳು ಯೋಜಿತವಾಗಿಯೇ ಸಾಗುತ್ತಿವೆ ಎಂದು ಸ್ಪಷ್ಟಪಡಿಸಿದೆ. ಈ ವಿಷಯ ಕೇಳಿ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

‘ನಟನ ಲುಕ್ ಅಥವಾ ಚಿತ್ರೀಕರಣ ಸ್ಥಗಿತದ ಬಗ್ಗೆ ಹರಡುತ್ತಿರುವ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ. ಸಿನಿಮಾವು ಈ ಮೊದಲಿನ ಪ್ಲಾನ್ ಪ್ರಕಾರವೇ ಸಾಗುತ್ತಿದೆ. ಇದು ಕೇವಲ ಮುಂದಿನ ಹಂತದ ಚಿತ್ರೀಕರಣಕ್ಕೆ ತಯಾರಿ ಮಾಡುವ ಸಲುವಾಗಿ ನೀಡಿದ ವಿರಾಮ ಅಷ್ಟೇ. ದಯವಿಟ್ಟು ಯಾರೂ ಅಧಿಕೃತವಲ್ಲದ ಮಾಹಿತಿಯನ್ನು ನಂಬಬೇಡಿ’ ಎಂದು ‘ಮೈತ್ರಿ ಮೂವೀ ಮೇಕರ್ಸ್’ ತಿಳಿಸಿದೆ.

ಇದನ್ನೂ ಓದಿ: ‘ಧುರಂಧರ್ 2’ ಚಿತ್ರದ ಖ್ಯಾತ ನಟನಿಗೆ ಸಿನಿಮಾ ಅವಕಾಶ ಕೊಟ್ಟ ಪ್ರಶಾಂತ್ ನೀಲ್

‘ಕೆಜಿಎಫ್: ಚಾಪ್ಟರ್ 1’, ‘ಕೆಜಿಎಫ್: ಚಾಪ್ಟರ್ 2’ ಮತ್ತು ‘ಸಲಾರ್’ ಸಿನಿಮಾಗಳ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿರುವ ಪ್ರಶಾಂತ್ ನೀಲ್ ಅವರು ಜೂನಿಯರ್ ಎನ್‌ಟಿಆರ್ ಜೊತೆ ಕೈಜೋಡಿಸಿರುವುದು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಈ ಚಿತ್ರವನ್ನು ಅತ್ಯಂತ ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಮಾಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ